ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಕೇಳಿದಷ್ಟು ಅನುದಾನ ತಂದು ಅಭಿವೃದ್ಧಿ ಮಾಡಕ್ಕೆ ಸಿದ್ದವಿದ್ದು ಅವಕಾಶಗಳು ಇವೆ ಯಾರೋ ಮಾತಾಡರೋಕಿ ಅಭಿವೃದ್ಧಿ ಮೂಲಕವೇ ಉತ್ತರವಾಗಲಿ ಇಲ್ಲ ಎಂದರೆ ಯಾರು ತಪ್ಪು ಮಾಡಿದ್ದಾರೆ ಅವರನ್ನು ಸೀತಿ ಬೈರೇಶ್ವರ ಸ್ವಾಮಿಯೇ ನೋಡಿಕೊಳ್ಳಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ತಾಲೂಕಿನ ವೇಮಗಲ್ ಹೋಬಳಿಯ ಚಂಜಿಮಲೆ ಗ್ರಾಮದಿಂದ ಕಡಗಟ್ಟೂರು, ಸೀತಿಹೊಸೂರು ಮತ್ತು ಬೈರಂಡಹಳ್ಳಿವರೆಗೆ 5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ, ಬೈರಂಡಹಳ್ಳಿ ಕೆರೆ ಅಭಿವೃದ್ಧಿಗೆ 3.5, ಕಡಗಟ್ಟೂರು ಗ್ರಾಮದಿಂದ ಮಠಪುರ ಕ್ಯಾಲನೂರು ತಿಪ್ಪೇನಹಳ್ಳಿ ರಸ್ತೆ 2 ಕೋಟಿ ಎಂಎಲ್ಸಿ ಅನಿಲ್ ಕುಮಾರ್ ಅನುದಾನದಲ್ಲಿ ಸೀತಿ ಬೆಟ್ಟದಲ್ಲಿ ಸೀತಿ ದೇವಾಲಯದ ಬಳಿ ಊಟದ ವ್ಯವಸ್ಥೆಗೆ ಡೈನಿಂಗ್ ಹಾಲ್ ನಿರ್ಮಾಣಕ್ಕೆ 95 ಲಕ್ಷ, ಮಹಿಳೆಯರ ವಿಶ್ರಾಂತಿ ಕೊಠಡಿಗೆ 25 ಲಕ್ಷ ಹಾಗೂ ಮುಡಿ ಕಟ್ಟು ನಿರ್ಮಾಣಕ್ಕೆ 15 ಲಕ್ಷ ಒಟ್ಟು 11.50 ಕೋಟಿ ಮತ್ತು ಸೀತಿ ಗ್ರಾಮ ಪಂಚಾಯಿತಿ ವತಿಯಿಂದ ದೇವಾಲಯದ ಬಳಿ ನಿರ್ಮಿಸಿರುವ 23 ಅಂಗಡಿ ಮಳಿಗೆಗಳ ಉದ್ಘಾಟನಾ ಕಾರ್ಯಾಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸೀತಿ ಬೈರೇಶ್ವರ ದೇವಾಲಯ ಇತಿಹಾಸ ಪ್ರಸಿದ್ದ ವಾಗಿದ್ದು ಮೂರು ರಾಜ್ಯಗಳಿಂದ ಭಕ್ತಾದಿಗಳು ಇಲ್ಲಿಗೆ ಬರತ್ತಾರೆ ಇಂತಹ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.
ಸೀತಿ ಗ್ರಾಮ ಪಂಚಾಯತಿಯು ಮಾದರಿ ಪಂಚಾಯತಿಗಳಲ್ಲಿ ಒಂದಾಗಿದೆ ಯಾವುದೇ ಅನುದಾನವಿಲ್ಲದೇ 23 ಅಂಗಡಿ ಮಳಿಗೆಗಳು ಕಟ್ಟಲಾಗುತ್ತಿದೆ ನನ್ನ ಅನುದಾನದಲ್ಲಿ 10 ಲಕ್ಷ ನೀಡಲಾಗುತ್ತದೆ ಮುಂದೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಎಂಎಲ್ಸಿ ನಸೀರ್ ಅಹಮದ್ ಅವರನ್ನು ಕರೆದುಕೊಂಡು ಬಂದು ಅವರ ಅನುದಾನವನ್ನು ನೀಡಲಾಗುತ್ತದೆ ವಸತಿ ನಿಲಯವನ್ನು ಮಾಡಿದರೆ ಅನುಕೂಲವಾಗುತ್ತೆ ಅಭಿವೃದ್ಧಿ ವಿಚಾರದಲ್ಲಿ ನಿಮ್ಮೊಂದಿಗೆ ಸದಾ ಇರತ್ತೇವೆ ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್ ಕುಮಾರ್ ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ ಇರುವವರು ಯಾರು ಕೂಡು ಸುಮ್ಮನೆ ಬಂದು ಪೂಜೆ ಮಾಡಲ್ಲ ಇಲಾಖೆಗಳಿಂದ ಟೆಂಡರ್ ಆಗಿ ಅನುಮೋದನೆ ಸಿಕ್ಕಿದ ಮೇಲೆಯೇ ಗುದ್ದಲಿ ಪೂಜೆಗೆ ಬಂದಿರೋದು ಪ್ರಶ್ನೆ ಮಾಡಲಿ ಅದನ್ನು ಬಿಟ್ಟು ದೌರ್ಜನ್ಯ ಮಾಡುವುದು ದಬ್ಬಾಳಿಕೆ ನಡೆಸಬಾರದು ಅಭಿವೃದ್ಧಿ ತೊಂದರೆ ಕೊಡಕ್ಕೆ ಅಂತ ಬಂದವರಿಗೆ ಅಭಿವೃದ್ಧಿ ಮೂಲಕವೇ ಉತ್ತರವಾಗಬೇಕು ಎಂದರು
ಈ ಸಂದರ್ಭದಲ್ಲಿ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸೀತಿ ಗ್ರಾಪಂ ಅಧ್ಯಕ್ಷೆ ಕವಿತ ಮುನಿರಾಜು, ಉಪಾಧ್ಯಕ್ಷೆ ಅನಿತಾ ಶ್ರೀನಿವಾಸ್, ತಾಪಂ ಇಒ ಮಂಜುನಾಥ್ ಎಇಇ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ವೀರೇಂದ್ರ ಪಾಟೀಲ್, ಅಂಕತಟ್ಟಿ ಬಾಬು, ಉರಟ ಅಗ್ರಹಾರ ಚೌಡರೆಡ್ಡಿ, ಸಕಲೇಶ್, ಕುಮಾರ್, ರಾಜಕುಮಾರ್, ಪೆರ್ಜೇನಹಳ್ಳಿ ನಾಗೇಶ್, ಬೈರಪ್ಪ, ಮುನಿರಾಜು ಮುಜರಾಯಿ ತಹಶಿಲ್ದಾರ್ ಶ್ರೀನಿವಾಸ್ ನಿರ್ಮಿತಿ ಕೇಂದ್ರದ ಅಶ್ವಿನ್ ಮುಂತಾದವರು ಇದ್ದರು
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…
ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…
ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…