Categories: ಕೋಲಾರ

ವೇಮಗಲ್ ಭಾಗದಲ್ಲಿ 11.50 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಕೇಳಿದಷ್ಟು ಅನುದಾನ ತಂದು ಅಭಿವೃದ್ಧಿ ಮಾಡಕ್ಕೆ ಸಿದ್ದವಿದ್ದು ಅವಕಾಶಗಳು ಇವೆ ಯಾರೋ ಮಾತಾಡರೋಕಿ ಅಭಿವೃದ್ಧಿ ಮೂಲಕವೇ ಉತ್ತರವಾಗಲಿ ಇಲ್ಲ ಎಂದರೆ ಯಾರು ತಪ್ಪು ಮಾಡಿದ್ದಾರೆ ಅವರನ್ನು ಸೀತಿ ಬೈರೇಶ್ವರ ಸ್ವಾಮಿಯೇ ನೋಡಿಕೊಳ್ಳಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ತಾಲೂಕಿನ ವೇಮಗಲ್ ಹೋಬಳಿಯ ಚಂಜಿಮಲೆ ಗ್ರಾಮದಿಂದ ಕಡಗಟ್ಟೂರು, ಸೀತಿಹೊಸೂರು ಮತ್ತು ಬೈರಂಡಹಳ್ಳಿವರೆಗೆ 5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ, ಬೈರಂಡಹಳ್ಳಿ ಕೆರೆ ಅಭಿವೃದ್ಧಿಗೆ 3.5, ಕಡಗಟ್ಟೂರು ಗ್ರಾಮದಿಂದ ಮಠಪುರ ಕ್ಯಾಲನೂರು ತಿಪ್ಪೇನಹಳ್ಳಿ ರಸ್ತೆ 2 ಕೋಟಿ ಎಂಎಲ್ಸಿ ಅನಿಲ್ ಕುಮಾರ್ ಅನುದಾನದಲ್ಲಿ ಸೀತಿ ಬೆಟ್ಟದಲ್ಲಿ ಸೀತಿ ದೇವಾಲಯದ ಬಳಿ ಊಟದ ವ್ಯವಸ್ಥೆಗೆ ಡೈನಿಂಗ್ ಹಾಲ್ ನಿರ್ಮಾಣಕ್ಕೆ 95 ಲಕ್ಷ, ಮಹಿಳೆಯರ ವಿಶ್ರಾಂತಿ ಕೊಠಡಿಗೆ 25 ಲಕ್ಷ ಹಾಗೂ ಮುಡಿ ಕಟ್ಟು ನಿರ್ಮಾಣಕ್ಕೆ 15 ಲಕ್ಷ ಒಟ್ಟು 11.50 ಕೋಟಿ ಮತ್ತು ಸೀತಿ ಗ್ರಾಮ ಪಂಚಾಯಿತಿ ವತಿಯಿಂದ ದೇವಾಲಯದ ಬಳಿ ನಿರ್ಮಿಸಿರುವ 23 ಅಂಗಡಿ ಮಳಿಗೆಗಳ ಉದ್ಘಾಟನಾ ಕಾರ್ಯಾಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸೀತಿ ಬೈರೇಶ್ವರ ದೇವಾಲಯ ಇತಿಹಾಸ ಪ್ರಸಿದ್ದ ವಾಗಿದ್ದು ಮೂರು ರಾಜ್ಯಗಳಿಂದ ಭಕ್ತಾದಿಗಳು ಇಲ್ಲಿಗೆ ಬರತ್ತಾರೆ ಇಂತಹ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.

ಸೀತಿ ಗ್ರಾಮ ಪಂಚಾಯತಿಯು ಮಾದರಿ ಪಂಚಾಯತಿಗಳಲ್ಲಿ ಒಂದಾಗಿದೆ ಯಾವುದೇ ಅನುದಾನವಿಲ್ಲದೇ 23 ಅಂಗಡಿ ಮಳಿಗೆಗಳು ಕಟ್ಟಲಾಗುತ್ತಿದೆ ನನ್ನ ಅನುದಾನದಲ್ಲಿ 10 ಲಕ್ಷ ನೀಡಲಾಗುತ್ತದೆ ಮುಂದೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಎಂಎಲ್ಸಿ ನಸೀರ್ ಅಹಮದ್ ಅವರನ್ನು ಕರೆದುಕೊಂಡು ಬಂದು ಅವರ ಅನುದಾನವನ್ನು ನೀಡಲಾಗುತ್ತದೆ ವಸತಿ ನಿಲಯವನ್ನು ಮಾಡಿದರೆ ಅನುಕೂಲವಾಗುತ್ತೆ ಅಭಿವೃದ್ಧಿ ವಿಚಾರದಲ್ಲಿ ನಿಮ್ಮೊಂದಿಗೆ ಸದಾ ಇರತ್ತೇವೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್ ಕುಮಾರ್ ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ ಇರುವವರು ಯಾರು ಕೂಡು ಸುಮ್ಮನೆ ಬಂದು ಪೂಜೆ ಮಾಡಲ್ಲ ಇಲಾಖೆಗಳಿಂದ ಟೆಂಡರ್ ಆಗಿ ಅನುಮೋದನೆ ಸಿಕ್ಕಿದ ಮೇಲೆಯೇ ಗುದ್ದಲಿ ಪೂಜೆಗೆ ಬಂದಿರೋದು ಪ್ರಶ್ನೆ ಮಾಡಲಿ ಅದನ್ನು ಬಿಟ್ಟು ದೌರ್ಜನ್ಯ ಮಾಡುವುದು ದಬ್ಬಾಳಿಕೆ ನಡೆಸಬಾರದು ಅಭಿವೃದ್ಧಿ ತೊಂದರೆ ಕೊಡಕ್ಕೆ ಅಂತ ಬಂದವರಿಗೆ ಅಭಿವೃದ್ಧಿ ಮೂಲಕವೇ ಉತ್ತರವಾಗಬೇಕು ಎಂದರು

ಈ ಸಂದರ್ಭದಲ್ಲಿ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸೀತಿ ಗ್ರಾಪಂ ಅಧ್ಯಕ್ಷೆ ಕವಿತ ಮುನಿರಾಜು, ಉಪಾಧ್ಯಕ್ಷೆ ಅನಿತಾ ಶ್ರೀನಿವಾಸ್, ತಾಪಂ ಇಒ ಮಂಜುನಾಥ್ ಎಇಇ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ವೀರೇಂದ್ರ ಪಾಟೀಲ್, ಅಂಕತಟ್ಟಿ ಬಾಬು, ಉರಟ ಅಗ್ರಹಾರ ಚೌಡರೆಡ್ಡಿ, ಸಕಲೇಶ್, ಕುಮಾರ್, ರಾಜಕುಮಾರ್, ಪೆರ್ಜೇನಹಳ್ಳಿ ನಾಗೇಶ್, ಬೈರಪ್ಪ, ಮುನಿರಾಜು ಮುಜರಾಯಿ ತಹಶಿಲ್ದಾರ್ ಶ್ರೀನಿವಾಸ್ ನಿರ್ಮಿತಿ ಕೇಂದ್ರದ ಅಶ್ವಿನ್ ಮುಂತಾದವರು ಇದ್ದರು

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

12 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

12 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

13 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

18 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

24 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 days ago