Categories: ಕೋಲಾರ

ವೇಮಗಲ್ ಭಾಗದಲ್ಲಿ 11.50 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಕೇಳಿದಷ್ಟು ಅನುದಾನ ತಂದು ಅಭಿವೃದ್ಧಿ ಮಾಡಕ್ಕೆ ಸಿದ್ದವಿದ್ದು ಅವಕಾಶಗಳು ಇವೆ ಯಾರೋ ಮಾತಾಡರೋಕಿ ಅಭಿವೃದ್ಧಿ ಮೂಲಕವೇ ಉತ್ತರವಾಗಲಿ ಇಲ್ಲ ಎಂದರೆ ಯಾರು ತಪ್ಪು ಮಾಡಿದ್ದಾರೆ ಅವರನ್ನು ಸೀತಿ ಬೈರೇಶ್ವರ ಸ್ವಾಮಿಯೇ ನೋಡಿಕೊಳ್ಳಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ತಾಲೂಕಿನ ವೇಮಗಲ್ ಹೋಬಳಿಯ ಚಂಜಿಮಲೆ ಗ್ರಾಮದಿಂದ ಕಡಗಟ್ಟೂರು, ಸೀತಿಹೊಸೂರು ಮತ್ತು ಬೈರಂಡಹಳ್ಳಿವರೆಗೆ 5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ, ಬೈರಂಡಹಳ್ಳಿ ಕೆರೆ ಅಭಿವೃದ್ಧಿಗೆ 3.5, ಕಡಗಟ್ಟೂರು ಗ್ರಾಮದಿಂದ ಮಠಪುರ ಕ್ಯಾಲನೂರು ತಿಪ್ಪೇನಹಳ್ಳಿ ರಸ್ತೆ 2 ಕೋಟಿ ಎಂಎಲ್ಸಿ ಅನಿಲ್ ಕುಮಾರ್ ಅನುದಾನದಲ್ಲಿ ಸೀತಿ ಬೆಟ್ಟದಲ್ಲಿ ಸೀತಿ ದೇವಾಲಯದ ಬಳಿ ಊಟದ ವ್ಯವಸ್ಥೆಗೆ ಡೈನಿಂಗ್ ಹಾಲ್ ನಿರ್ಮಾಣಕ್ಕೆ 95 ಲಕ್ಷ, ಮಹಿಳೆಯರ ವಿಶ್ರಾಂತಿ ಕೊಠಡಿಗೆ 25 ಲಕ್ಷ ಹಾಗೂ ಮುಡಿ ಕಟ್ಟು ನಿರ್ಮಾಣಕ್ಕೆ 15 ಲಕ್ಷ ಒಟ್ಟು 11.50 ಕೋಟಿ ಮತ್ತು ಸೀತಿ ಗ್ರಾಮ ಪಂಚಾಯಿತಿ ವತಿಯಿಂದ ದೇವಾಲಯದ ಬಳಿ ನಿರ್ಮಿಸಿರುವ 23 ಅಂಗಡಿ ಮಳಿಗೆಗಳ ಉದ್ಘಾಟನಾ ಕಾರ್ಯಾಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸೀತಿ ಬೈರೇಶ್ವರ ದೇವಾಲಯ ಇತಿಹಾಸ ಪ್ರಸಿದ್ದ ವಾಗಿದ್ದು ಮೂರು ರಾಜ್ಯಗಳಿಂದ ಭಕ್ತಾದಿಗಳು ಇಲ್ಲಿಗೆ ಬರತ್ತಾರೆ ಇಂತಹ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.

ಸೀತಿ ಗ್ರಾಮ ಪಂಚಾಯತಿಯು ಮಾದರಿ ಪಂಚಾಯತಿಗಳಲ್ಲಿ ಒಂದಾಗಿದೆ ಯಾವುದೇ ಅನುದಾನವಿಲ್ಲದೇ 23 ಅಂಗಡಿ ಮಳಿಗೆಗಳು ಕಟ್ಟಲಾಗುತ್ತಿದೆ ನನ್ನ ಅನುದಾನದಲ್ಲಿ 10 ಲಕ್ಷ ನೀಡಲಾಗುತ್ತದೆ ಮುಂದೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಎಂಎಲ್ಸಿ ನಸೀರ್ ಅಹಮದ್ ಅವರನ್ನು ಕರೆದುಕೊಂಡು ಬಂದು ಅವರ ಅನುದಾನವನ್ನು ನೀಡಲಾಗುತ್ತದೆ ವಸತಿ ನಿಲಯವನ್ನು ಮಾಡಿದರೆ ಅನುಕೂಲವಾಗುತ್ತೆ ಅಭಿವೃದ್ಧಿ ವಿಚಾರದಲ್ಲಿ ನಿಮ್ಮೊಂದಿಗೆ ಸದಾ ಇರತ್ತೇವೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್ ಕುಮಾರ್ ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ ಇರುವವರು ಯಾರು ಕೂಡು ಸುಮ್ಮನೆ ಬಂದು ಪೂಜೆ ಮಾಡಲ್ಲ ಇಲಾಖೆಗಳಿಂದ ಟೆಂಡರ್ ಆಗಿ ಅನುಮೋದನೆ ಸಿಕ್ಕಿದ ಮೇಲೆಯೇ ಗುದ್ದಲಿ ಪೂಜೆಗೆ ಬಂದಿರೋದು ಪ್ರಶ್ನೆ ಮಾಡಲಿ ಅದನ್ನು ಬಿಟ್ಟು ದೌರ್ಜನ್ಯ ಮಾಡುವುದು ದಬ್ಬಾಳಿಕೆ ನಡೆಸಬಾರದು ಅಭಿವೃದ್ಧಿ ತೊಂದರೆ ಕೊಡಕ್ಕೆ ಅಂತ ಬಂದವರಿಗೆ ಅಭಿವೃದ್ಧಿ ಮೂಲಕವೇ ಉತ್ತರವಾಗಬೇಕು ಎಂದರು

ಈ ಸಂದರ್ಭದಲ್ಲಿ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸೀತಿ ಗ್ರಾಪಂ ಅಧ್ಯಕ್ಷೆ ಕವಿತ ಮುನಿರಾಜು, ಉಪಾಧ್ಯಕ್ಷೆ ಅನಿತಾ ಶ್ರೀನಿವಾಸ್, ತಾಪಂ ಇಒ ಮಂಜುನಾಥ್ ಎಇಇ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ವೀರೇಂದ್ರ ಪಾಟೀಲ್, ಅಂಕತಟ್ಟಿ ಬಾಬು, ಉರಟ ಅಗ್ರಹಾರ ಚೌಡರೆಡ್ಡಿ, ಸಕಲೇಶ್, ಕುಮಾರ್, ರಾಜಕುಮಾರ್, ಪೆರ್ಜೇನಹಳ್ಳಿ ನಾಗೇಶ್, ಬೈರಪ್ಪ, ಮುನಿರಾಜು ಮುಜರಾಯಿ ತಹಶಿಲ್ದಾರ್ ಶ್ರೀನಿವಾಸ್ ನಿರ್ಮಿತಿ ಕೇಂದ್ರದ ಅಶ್ವಿನ್ ಮುಂತಾದವರು ಇದ್ದರು

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

5 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

8 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

14 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago