Categories: ಕೋಲಾರ

ವೇಮಗಲ್ ಭಾಗದಲ್ಲಿ 11.50 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಕೇಳಿದಷ್ಟು ಅನುದಾನ ತಂದು ಅಭಿವೃದ್ಧಿ ಮಾಡಕ್ಕೆ ಸಿದ್ದವಿದ್ದು ಅವಕಾಶಗಳು ಇವೆ ಯಾರೋ ಮಾತಾಡರೋಕಿ ಅಭಿವೃದ್ಧಿ ಮೂಲಕವೇ ಉತ್ತರವಾಗಲಿ ಇಲ್ಲ ಎಂದರೆ ಯಾರು ತಪ್ಪು ಮಾಡಿದ್ದಾರೆ ಅವರನ್ನು ಸೀತಿ ಬೈರೇಶ್ವರ ಸ್ವಾಮಿಯೇ ನೋಡಿಕೊಳ್ಳಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ತಾಲೂಕಿನ ವೇಮಗಲ್ ಹೋಬಳಿಯ ಚಂಜಿಮಲೆ ಗ್ರಾಮದಿಂದ ಕಡಗಟ್ಟೂರು, ಸೀತಿಹೊಸೂರು ಮತ್ತು ಬೈರಂಡಹಳ್ಳಿವರೆಗೆ 5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ, ಬೈರಂಡಹಳ್ಳಿ ಕೆರೆ ಅಭಿವೃದ್ಧಿಗೆ 3.5, ಕಡಗಟ್ಟೂರು ಗ್ರಾಮದಿಂದ ಮಠಪುರ ಕ್ಯಾಲನೂರು ತಿಪ್ಪೇನಹಳ್ಳಿ ರಸ್ತೆ 2 ಕೋಟಿ ಎಂಎಲ್ಸಿ ಅನಿಲ್ ಕುಮಾರ್ ಅನುದಾನದಲ್ಲಿ ಸೀತಿ ಬೆಟ್ಟದಲ್ಲಿ ಸೀತಿ ದೇವಾಲಯದ ಬಳಿ ಊಟದ ವ್ಯವಸ್ಥೆಗೆ ಡೈನಿಂಗ್ ಹಾಲ್ ನಿರ್ಮಾಣಕ್ಕೆ 95 ಲಕ್ಷ, ಮಹಿಳೆಯರ ವಿಶ್ರಾಂತಿ ಕೊಠಡಿಗೆ 25 ಲಕ್ಷ ಹಾಗೂ ಮುಡಿ ಕಟ್ಟು ನಿರ್ಮಾಣಕ್ಕೆ 15 ಲಕ್ಷ ಒಟ್ಟು 11.50 ಕೋಟಿ ಮತ್ತು ಸೀತಿ ಗ್ರಾಮ ಪಂಚಾಯಿತಿ ವತಿಯಿಂದ ದೇವಾಲಯದ ಬಳಿ ನಿರ್ಮಿಸಿರುವ 23 ಅಂಗಡಿ ಮಳಿಗೆಗಳ ಉದ್ಘಾಟನಾ ಕಾರ್ಯಾಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸೀತಿ ಬೈರೇಶ್ವರ ದೇವಾಲಯ ಇತಿಹಾಸ ಪ್ರಸಿದ್ದ ವಾಗಿದ್ದು ಮೂರು ರಾಜ್ಯಗಳಿಂದ ಭಕ್ತಾದಿಗಳು ಇಲ್ಲಿಗೆ ಬರತ್ತಾರೆ ಇಂತಹ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.

ಸೀತಿ ಗ್ರಾಮ ಪಂಚಾಯತಿಯು ಮಾದರಿ ಪಂಚಾಯತಿಗಳಲ್ಲಿ ಒಂದಾಗಿದೆ ಯಾವುದೇ ಅನುದಾನವಿಲ್ಲದೇ 23 ಅಂಗಡಿ ಮಳಿಗೆಗಳು ಕಟ್ಟಲಾಗುತ್ತಿದೆ ನನ್ನ ಅನುದಾನದಲ್ಲಿ 10 ಲಕ್ಷ ನೀಡಲಾಗುತ್ತದೆ ಮುಂದೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಎಂಎಲ್ಸಿ ನಸೀರ್ ಅಹಮದ್ ಅವರನ್ನು ಕರೆದುಕೊಂಡು ಬಂದು ಅವರ ಅನುದಾನವನ್ನು ನೀಡಲಾಗುತ್ತದೆ ವಸತಿ ನಿಲಯವನ್ನು ಮಾಡಿದರೆ ಅನುಕೂಲವಾಗುತ್ತೆ ಅಭಿವೃದ್ಧಿ ವಿಚಾರದಲ್ಲಿ ನಿಮ್ಮೊಂದಿಗೆ ಸದಾ ಇರತ್ತೇವೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್ ಕುಮಾರ್ ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ ಇರುವವರು ಯಾರು ಕೂಡು ಸುಮ್ಮನೆ ಬಂದು ಪೂಜೆ ಮಾಡಲ್ಲ ಇಲಾಖೆಗಳಿಂದ ಟೆಂಡರ್ ಆಗಿ ಅನುಮೋದನೆ ಸಿಕ್ಕಿದ ಮೇಲೆಯೇ ಗುದ್ದಲಿ ಪೂಜೆಗೆ ಬಂದಿರೋದು ಪ್ರಶ್ನೆ ಮಾಡಲಿ ಅದನ್ನು ಬಿಟ್ಟು ದೌರ್ಜನ್ಯ ಮಾಡುವುದು ದಬ್ಬಾಳಿಕೆ ನಡೆಸಬಾರದು ಅಭಿವೃದ್ಧಿ ತೊಂದರೆ ಕೊಡಕ್ಕೆ ಅಂತ ಬಂದವರಿಗೆ ಅಭಿವೃದ್ಧಿ ಮೂಲಕವೇ ಉತ್ತರವಾಗಬೇಕು ಎಂದರು

ಈ ಸಂದರ್ಭದಲ್ಲಿ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸೀತಿ ಗ್ರಾಪಂ ಅಧ್ಯಕ್ಷೆ ಕವಿತ ಮುನಿರಾಜು, ಉಪಾಧ್ಯಕ್ಷೆ ಅನಿತಾ ಶ್ರೀನಿವಾಸ್, ತಾಪಂ ಇಒ ಮಂಜುನಾಥ್ ಎಇಇ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ವೀರೇಂದ್ರ ಪಾಟೀಲ್, ಅಂಕತಟ್ಟಿ ಬಾಬು, ಉರಟ ಅಗ್ರಹಾರ ಚೌಡರೆಡ್ಡಿ, ಸಕಲೇಶ್, ಕುಮಾರ್, ರಾಜಕುಮಾರ್, ಪೆರ್ಜೇನಹಳ್ಳಿ ನಾಗೇಶ್, ಬೈರಪ್ಪ, ಮುನಿರಾಜು ಮುಜರಾಯಿ ತಹಶಿಲ್ದಾರ್ ಶ್ರೀನಿವಾಸ್ ನಿರ್ಮಿತಿ ಕೇಂದ್ರದ ಅಶ್ವಿನ್ ಮುಂತಾದವರು ಇದ್ದರು

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

7 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

9 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

14 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

16 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

19 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago