ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಪ್ರಯುಕ್ತ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪವಿರುವ ವಿಶ್ವ ಕಲ್ಯಾಣ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿರಾಟ ಪರ್ವ ಅಲಂಕಾರ ಮಾಡಿ, ವಿಶೇಷ ಪೂಜೆ ಕೈಂಕರ್ಯ ಅದ್ಧೂರಿಯಾಗಿ ನಡೆಸಲಾಯಿತು.
ಹೊಸ ವರ್ಷ ಆರಂಭದಲ್ಲೇ ವೈಕುಂಠ ಏಕಾದಶಿ ಸಡಗರ ಮನೆಮಾಡಿದೆ. ಹಿಂದೂ ಪಂಚಾಂಗದ ಪ್ರಕಾರ ಪುಷ್ಯ ಮಾಸದ ಶುಕ್ಲ ಪಕ್ಷದ ಏಕಾದಶಿ ತಿಥಿಯಂದು ವೈಕುಂಠ ಏಕಾದಶಿಯ ಶುಭ ಸಂದರ್ಭವನ್ನು ಆಚರಿಸಲಾಗುತ್ತದೆ.
ಈ ದಿನ ವೆಂಕಟೇಶ್ವರ ದೇವಾಲಯಗಳಲ್ಲಿ ದೇವರ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪುನೀತರಾದರು.
ದೇವಸ್ಥಾನದಲ್ಲಿ ಪ್ರತಿ ಅಮಾವಸ್ಯೆ, ಪೂರ್ಣಿಮೆ, ಶನಿವಾರ, ಶ್ರಾವಣ ಶನಿವಾರಗಳದಂದು ವಿಶೇಷ ಪೂಜೆ ನಡೆಸಲಾಗುತ್ತದೆ ಎಂದರು.
ದೇವರಿಗೆ ಮಹಾಮಂಗಳಾರತಿ ನಡೆದ ನಂತರ ಭಕ್ತಾಧಿಗಳಿಗೆ ಲಡ್ಡು ಪ್ರಸಾದ, ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.
*ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…