ವೈಚಾರಿಕ – ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು- ಸಿಎಂ ಸಿದ್ದರಾಮಯ್ಯ

“ಸಬ್ ಕಾ ಸಾಥ್-ಸಬ್ ಕಾ ವಿಕಾಸ್” ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ಇವತ್ತು ನಡೆಯುತ್ತಿದೆ. ಆದರೆ ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು. ವೈಚಾರಿಕ – ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು. ಶರಣರು ನುಡಿದಂತೆ ನಡೆದರು. ಹೇಳಿದಂತೆಯೇ ತಮ್ಮ ಬದುಕನ್ನು ಆಚರಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಒಪ್ಪಬಾರದು. ಅವಕಾಶ ಸಿಕ್ಕವರು ಮುಂದೆ ಬಂದರು, ಅವಕಾಶ ಇಲ್ಲದವರು ಹಿಂದುಳಿದರು. ಹಣೆಬರಹ ಎನ್ನುವುದೆಲ್ಲಾ ಬೋಗಸ್. ನಮ್ಮ ಊರಿನ ಶಾನುಬೋಗರು ನಮ್ಮ ಜಾತಿಯವರು ಕಾನೂನು ಓದಬಾರದು ಎಂದು ನನ್ನ ಅಪ್ಪನಿಗೆ ಒಪ್ಪಿಸಿಬಿಟ್ಟಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಪದವಿ ಪಡೆದೆ. ಈಗ ಮುಖ್ಯಮಂತ್ರಿ ಕೂಡ ಆಗಿದ್ದೇನೆ. ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು. ಇಂಥವರು ನಿಮ್ಮ ದಾರಿ ತಪ್ಪಿಸಿತ್ತಾರೆ. ಈ ಬಗ್ಗೆ ಎಚ್ಚರದಿಂದಿರಿ ಎಂದರು.

ಕಲ್ಲು ಒಡೆಯೋರು ನೀವು, ಗುಡಿ ಕಟ್ಟೋರು ನೀವು, ವಿಗ್ರಹ ಹೊರುವವರು ನೀವು. ಆದರೆ, ದೇವಸ್ಥಾನ ಪ್ರವೇಶಕ್ಕೆ ಮಾತ್ರ ಭೋವಿಗಳಿಗೆ ಅವಕಾಶ ಇಲ್ಲ ಎಂದರೆ ಅದನ್ನು ಒಪ್ಪಿಕೊಳ್ಳಬೇಕಾ? ಇದಕ್ಕೆ ನಾರಾಯಣಗುರುಗಳು ಹೇಳಿದ ಮಾರ್ಗ ಅನುಸರಿಸಬೇಕು. ನಿಮ್ಮನ್ನು ಒಳಗೆ ಸೇರಿಸದ ದೇವಸ್ಥಾನಗಳನ್ನು ನೀವೇ ತಿರಸ್ಕರಿಸಿ ನಿಮ್ಮದೇ ದೇವಸ್ಥಾನ ನಿರ್ಮಿಸಿಕೊಳ್ಳಿ ಎಂದು ಹೇಳಿದರು.

ಯಾವ ಕೆಲಸವೂ ಮೇಲು ಅಲ್ಲ, ಕೀಳೂ ಅಲ್ಲ. ಈ ಕಾರಣಕ್ಕೇ ಕಾಯಕವೇ ಕೈಲಾಸ ಎಂದು ಶರಣರು ಹೇಳಿದ್ದಾರೆ. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಎಲ್ಲರೂ ಉತ್ಪಾದನೆಯಲ್ಲಿ ಭಾಗವಹಿಸಬೇಕು, ಅದನ್ನು ಎಲ್ಲರಿಗೂ ವಿತರಿಸಬೇಕು ಎನ್ನುವುದು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರಕಾರದ ಕಾರ್ಯಕ್ರಮಗಳೂ ಈ ಆಶಯಕ್ಕೆ ಪೂರಕವಾಗಿವೆ ಎಂದು ತಿಳಿಸಿದರು.

ಸಾಮಾಜಿಕ, ಆರ್ಥಿಕ ಚಟುವಟಿಕೆಗಳು ಎಲ್ಲಾ ಸಮುದಾಯಕ್ಕೆ ಸಿಕ್ಕರೆ ಮಾತ್ರ ಜಾತಿಗ್ರಸ್ಥ ಸಮಾಜ ಚಲನಶೀಲವಾಗುತ್ತದೆ. ಇಲ್ಲವಾದರೆ ಸ್ಥಗಿತಗೊಂಡ ಸಮಾಜ ಆಗುತ್ತದೆ. ಭೋವಿ ಸಮುದಾಯದ ಬೇಡಿಕೆಯಂತೆ ಅಧ್ಯಯನ ಪೀಠ ಸ್ಥಾಪನೆ ಸೇರಿ ನನ್ನ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.

ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಶಾಸಕರಾದ ಎಂ.ಚಂದ್ರಪ್ಪ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

9 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

15 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

19 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

22 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago