ವೈಚಾರಿಕ – ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು- ಸಿಎಂ ಸಿದ್ದರಾಮಯ್ಯ

“ಸಬ್ ಕಾ ಸಾಥ್-ಸಬ್ ಕಾ ವಿಕಾಸ್” ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ಇವತ್ತು ನಡೆಯುತ್ತಿದೆ. ಆದರೆ ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು. ವೈಚಾರಿಕ – ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು. ಶರಣರು ನುಡಿದಂತೆ ನಡೆದರು. ಹೇಳಿದಂತೆಯೇ ತಮ್ಮ ಬದುಕನ್ನು ಆಚರಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಒಪ್ಪಬಾರದು. ಅವಕಾಶ ಸಿಕ್ಕವರು ಮುಂದೆ ಬಂದರು, ಅವಕಾಶ ಇಲ್ಲದವರು ಹಿಂದುಳಿದರು. ಹಣೆಬರಹ ಎನ್ನುವುದೆಲ್ಲಾ ಬೋಗಸ್. ನಮ್ಮ ಊರಿನ ಶಾನುಬೋಗರು ನಮ್ಮ ಜಾತಿಯವರು ಕಾನೂನು ಓದಬಾರದು ಎಂದು ನನ್ನ ಅಪ್ಪನಿಗೆ ಒಪ್ಪಿಸಿಬಿಟ್ಟಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಪದವಿ ಪಡೆದೆ. ಈಗ ಮುಖ್ಯಮಂತ್ರಿ ಕೂಡ ಆಗಿದ್ದೇನೆ. ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು. ಇಂಥವರು ನಿಮ್ಮ ದಾರಿ ತಪ್ಪಿಸಿತ್ತಾರೆ. ಈ ಬಗ್ಗೆ ಎಚ್ಚರದಿಂದಿರಿ ಎಂದರು.

ಕಲ್ಲು ಒಡೆಯೋರು ನೀವು, ಗುಡಿ ಕಟ್ಟೋರು ನೀವು, ವಿಗ್ರಹ ಹೊರುವವರು ನೀವು. ಆದರೆ, ದೇವಸ್ಥಾನ ಪ್ರವೇಶಕ್ಕೆ ಮಾತ್ರ ಭೋವಿಗಳಿಗೆ ಅವಕಾಶ ಇಲ್ಲ ಎಂದರೆ ಅದನ್ನು ಒಪ್ಪಿಕೊಳ್ಳಬೇಕಾ? ಇದಕ್ಕೆ ನಾರಾಯಣಗುರುಗಳು ಹೇಳಿದ ಮಾರ್ಗ ಅನುಸರಿಸಬೇಕು. ನಿಮ್ಮನ್ನು ಒಳಗೆ ಸೇರಿಸದ ದೇವಸ್ಥಾನಗಳನ್ನು ನೀವೇ ತಿರಸ್ಕರಿಸಿ ನಿಮ್ಮದೇ ದೇವಸ್ಥಾನ ನಿರ್ಮಿಸಿಕೊಳ್ಳಿ ಎಂದು ಹೇಳಿದರು.

ಯಾವ ಕೆಲಸವೂ ಮೇಲು ಅಲ್ಲ, ಕೀಳೂ ಅಲ್ಲ. ಈ ಕಾರಣಕ್ಕೇ ಕಾಯಕವೇ ಕೈಲಾಸ ಎಂದು ಶರಣರು ಹೇಳಿದ್ದಾರೆ. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಎಲ್ಲರೂ ಉತ್ಪಾದನೆಯಲ್ಲಿ ಭಾಗವಹಿಸಬೇಕು, ಅದನ್ನು ಎಲ್ಲರಿಗೂ ವಿತರಿಸಬೇಕು ಎನ್ನುವುದು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರಕಾರದ ಕಾರ್ಯಕ್ರಮಗಳೂ ಈ ಆಶಯಕ್ಕೆ ಪೂರಕವಾಗಿವೆ ಎಂದು ತಿಳಿಸಿದರು.

ಸಾಮಾಜಿಕ, ಆರ್ಥಿಕ ಚಟುವಟಿಕೆಗಳು ಎಲ್ಲಾ ಸಮುದಾಯಕ್ಕೆ ಸಿಕ್ಕರೆ ಮಾತ್ರ ಜಾತಿಗ್ರಸ್ಥ ಸಮಾಜ ಚಲನಶೀಲವಾಗುತ್ತದೆ. ಇಲ್ಲವಾದರೆ ಸ್ಥಗಿತಗೊಂಡ ಸಮಾಜ ಆಗುತ್ತದೆ. ಭೋವಿ ಸಮುದಾಯದ ಬೇಡಿಕೆಯಂತೆ ಅಧ್ಯಯನ ಪೀಠ ಸ್ಥಾಪನೆ ಸೇರಿ ನನ್ನ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.

ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಶಾಸಕರಾದ ಎಂ.ಚಂದ್ರಪ್ಪ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

5 minutes ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

4 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

5 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

7 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

7 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

11 hours ago