“ಸಬ್ ಕಾ ಸಾಥ್-ಸಬ್ ಕಾ ವಿಕಾಸ್” ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ಇವತ್ತು ನಡೆಯುತ್ತಿದೆ. ಆದರೆ ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು. ವೈಚಾರಿಕ – ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು. ಶರಣರು ನುಡಿದಂತೆ ನಡೆದರು. ಹೇಳಿದಂತೆಯೇ ತಮ್ಮ ಬದುಕನ್ನು ಆಚರಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಒಪ್ಪಬಾರದು. ಅವಕಾಶ ಸಿಕ್ಕವರು ಮುಂದೆ ಬಂದರು, ಅವಕಾಶ ಇಲ್ಲದವರು ಹಿಂದುಳಿದರು. ಹಣೆಬರಹ ಎನ್ನುವುದೆಲ್ಲಾ ಬೋಗಸ್. ನಮ್ಮ ಊರಿನ ಶಾನುಬೋಗರು ನಮ್ಮ ಜಾತಿಯವರು ಕಾನೂನು ಓದಬಾರದು ಎಂದು ನನ್ನ ಅಪ್ಪನಿಗೆ ಒಪ್ಪಿಸಿಬಿಟ್ಟಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಪದವಿ ಪಡೆದೆ. ಈಗ ಮುಖ್ಯಮಂತ್ರಿ ಕೂಡ ಆಗಿದ್ದೇನೆ. ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು. ಇಂಥವರು ನಿಮ್ಮ ದಾರಿ ತಪ್ಪಿಸಿತ್ತಾರೆ. ಈ ಬಗ್ಗೆ ಎಚ್ಚರದಿಂದಿರಿ ಎಂದರು.
ಕಲ್ಲು ಒಡೆಯೋರು ನೀವು, ಗುಡಿ ಕಟ್ಟೋರು ನೀವು, ವಿಗ್ರಹ ಹೊರುವವರು ನೀವು. ಆದರೆ, ದೇವಸ್ಥಾನ ಪ್ರವೇಶಕ್ಕೆ ಮಾತ್ರ ಭೋವಿಗಳಿಗೆ ಅವಕಾಶ ಇಲ್ಲ ಎಂದರೆ ಅದನ್ನು ಒಪ್ಪಿಕೊಳ್ಳಬೇಕಾ? ಇದಕ್ಕೆ ನಾರಾಯಣಗುರುಗಳು ಹೇಳಿದ ಮಾರ್ಗ ಅನುಸರಿಸಬೇಕು. ನಿಮ್ಮನ್ನು ಒಳಗೆ ಸೇರಿಸದ ದೇವಸ್ಥಾನಗಳನ್ನು ನೀವೇ ತಿರಸ್ಕರಿಸಿ ನಿಮ್ಮದೇ ದೇವಸ್ಥಾನ ನಿರ್ಮಿಸಿಕೊಳ್ಳಿ ಎಂದು ಹೇಳಿದರು.
ಯಾವ ಕೆಲಸವೂ ಮೇಲು ಅಲ್ಲ, ಕೀಳೂ ಅಲ್ಲ. ಈ ಕಾರಣಕ್ಕೇ ಕಾಯಕವೇ ಕೈಲಾಸ ಎಂದು ಶರಣರು ಹೇಳಿದ್ದಾರೆ. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಎಲ್ಲರೂ ಉತ್ಪಾದನೆಯಲ್ಲಿ ಭಾಗವಹಿಸಬೇಕು, ಅದನ್ನು ಎಲ್ಲರಿಗೂ ವಿತರಿಸಬೇಕು ಎನ್ನುವುದು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರಕಾರದ ಕಾರ್ಯಕ್ರಮಗಳೂ ಈ ಆಶಯಕ್ಕೆ ಪೂರಕವಾಗಿವೆ ಎಂದು ತಿಳಿಸಿದರು.
ಸಾಮಾಜಿಕ, ಆರ್ಥಿಕ ಚಟುವಟಿಕೆಗಳು ಎಲ್ಲಾ ಸಮುದಾಯಕ್ಕೆ ಸಿಕ್ಕರೆ ಮಾತ್ರ ಜಾತಿಗ್ರಸ್ಥ ಸಮಾಜ ಚಲನಶೀಲವಾಗುತ್ತದೆ. ಇಲ್ಲವಾದರೆ ಸ್ಥಗಿತಗೊಂಡ ಸಮಾಜ ಆಗುತ್ತದೆ. ಭೋವಿ ಸಮುದಾಯದ ಬೇಡಿಕೆಯಂತೆ ಅಧ್ಯಯನ ಪೀಠ ಸ್ಥಾಪನೆ ಸೇರಿ ನನ್ನ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.
ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಶಾಸಕರಾದ ಎಂ.ಚಂದ್ರಪ್ಪ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…