ವೈಚಾರಿಕ – ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು- ಸಿಎಂ ಸಿದ್ದರಾಮಯ್ಯ

“ಸಬ್ ಕಾ ಸಾಥ್-ಸಬ್ ಕಾ ವಿಕಾಸ್” ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ಇವತ್ತು ನಡೆಯುತ್ತಿದೆ. ಆದರೆ ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು. ವೈಚಾರಿಕ – ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು. ಶರಣರು ನುಡಿದಂತೆ ನಡೆದರು. ಹೇಳಿದಂತೆಯೇ ತಮ್ಮ ಬದುಕನ್ನು ಆಚರಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಒಪ್ಪಬಾರದು. ಅವಕಾಶ ಸಿಕ್ಕವರು ಮುಂದೆ ಬಂದರು, ಅವಕಾಶ ಇಲ್ಲದವರು ಹಿಂದುಳಿದರು. ಹಣೆಬರಹ ಎನ್ನುವುದೆಲ್ಲಾ ಬೋಗಸ್. ನಮ್ಮ ಊರಿನ ಶಾನುಬೋಗರು ನಮ್ಮ ಜಾತಿಯವರು ಕಾನೂನು ಓದಬಾರದು ಎಂದು ನನ್ನ ಅಪ್ಪನಿಗೆ ಒಪ್ಪಿಸಿಬಿಟ್ಟಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಪದವಿ ಪಡೆದೆ. ಈಗ ಮುಖ್ಯಮಂತ್ರಿ ಕೂಡ ಆಗಿದ್ದೇನೆ. ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು. ಇಂಥವರು ನಿಮ್ಮ ದಾರಿ ತಪ್ಪಿಸಿತ್ತಾರೆ. ಈ ಬಗ್ಗೆ ಎಚ್ಚರದಿಂದಿರಿ ಎಂದರು.

ಕಲ್ಲು ಒಡೆಯೋರು ನೀವು, ಗುಡಿ ಕಟ್ಟೋರು ನೀವು, ವಿಗ್ರಹ ಹೊರುವವರು ನೀವು. ಆದರೆ, ದೇವಸ್ಥಾನ ಪ್ರವೇಶಕ್ಕೆ ಮಾತ್ರ ಭೋವಿಗಳಿಗೆ ಅವಕಾಶ ಇಲ್ಲ ಎಂದರೆ ಅದನ್ನು ಒಪ್ಪಿಕೊಳ್ಳಬೇಕಾ? ಇದಕ್ಕೆ ನಾರಾಯಣಗುರುಗಳು ಹೇಳಿದ ಮಾರ್ಗ ಅನುಸರಿಸಬೇಕು. ನಿಮ್ಮನ್ನು ಒಳಗೆ ಸೇರಿಸದ ದೇವಸ್ಥಾನಗಳನ್ನು ನೀವೇ ತಿರಸ್ಕರಿಸಿ ನಿಮ್ಮದೇ ದೇವಸ್ಥಾನ ನಿರ್ಮಿಸಿಕೊಳ್ಳಿ ಎಂದು ಹೇಳಿದರು.

ಯಾವ ಕೆಲಸವೂ ಮೇಲು ಅಲ್ಲ, ಕೀಳೂ ಅಲ್ಲ. ಈ ಕಾರಣಕ್ಕೇ ಕಾಯಕವೇ ಕೈಲಾಸ ಎಂದು ಶರಣರು ಹೇಳಿದ್ದಾರೆ. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಎಲ್ಲರೂ ಉತ್ಪಾದನೆಯಲ್ಲಿ ಭಾಗವಹಿಸಬೇಕು, ಅದನ್ನು ಎಲ್ಲರಿಗೂ ವಿತರಿಸಬೇಕು ಎನ್ನುವುದು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರಕಾರದ ಕಾರ್ಯಕ್ರಮಗಳೂ ಈ ಆಶಯಕ್ಕೆ ಪೂರಕವಾಗಿವೆ ಎಂದು ತಿಳಿಸಿದರು.

ಸಾಮಾಜಿಕ, ಆರ್ಥಿಕ ಚಟುವಟಿಕೆಗಳು ಎಲ್ಲಾ ಸಮುದಾಯಕ್ಕೆ ಸಿಕ್ಕರೆ ಮಾತ್ರ ಜಾತಿಗ್ರಸ್ಥ ಸಮಾಜ ಚಲನಶೀಲವಾಗುತ್ತದೆ. ಇಲ್ಲವಾದರೆ ಸ್ಥಗಿತಗೊಂಡ ಸಮಾಜ ಆಗುತ್ತದೆ. ಭೋವಿ ಸಮುದಾಯದ ಬೇಡಿಕೆಯಂತೆ ಅಧ್ಯಯನ ಪೀಠ ಸ್ಥಾಪನೆ ಸೇರಿ ನನ್ನ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.

ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಶಾಸಕರಾದ ಎಂ.ಚಂದ್ರಪ್ಪ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

5 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

9 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

18 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago