ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆಜೆವಿಎಸ್)ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಜ.27ರಿಂದ ಆರಂಭವಾಗಲಿದ್ದು, ಜ.28ರಂದು ದೊಡ್ಡಬಳ್ಳಾಪುರ ತಲುಪಲಿದೆ. ವೈಜ್ಞಾನಿಕ ಜಾಗೃತಿಯ ಈ ಕಾರ್ಯಕ್ರಮದಲ್ಲಿ ಆಸಕ್ತರು ಭಾಗವಹಿಸಿ ವಿಜ್ಞಾನದ ವಿಚಾರಗಳನ್ನು ಪ್ರಚುರಪಡಿಸಲು ಕೈಜೋಡಿಸಬೇಕಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಈ.ಬಸವರಾಜು ತಿಳಿಸಿದ್ದಾರೆ.
ಈ ಕುರಿತು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ, ವೈಜ್ಞಾನಿಕ ಚಿಂತಕ, ಶಿಕ್ಷಣತಜ್ಞ, ಸರಳತೆಗೆ ಹೆಸರಾಗಿದ್ದ ಡಾ ಹೆಚ್ ನರಸಿಂಹಯ್ಯ ಅವರು ತಮ್ಮ ಸ್ವಂತ ಪರಿಶ್ರಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾಗಿ, ನ್ಯಾಷನಲ್ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷರಾಗಿ ದಕ್ಷತೆಯಿಂದ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಸದಾ ವೈಜ್ಞಾನಿಕ ಚಿಂತನೆ ರೂಢಿಸಿಕೊಂಡಿದ್ದ ಅವರ ಆಶಯಗಳನ್ನು ಸಾಕಾರಗೊಳಿಸಲು ಇಂದಿನ ಪೀಳಿಗೆಗೆ ಡಾ.ಹೆಚ್ ನರಸಿಂಹಯ್ಯನವರ ಚಿಂತನೆ, ಆದರ್ಶ, ವೈಜ್ಞಾನಿಕ ಮನೋಭಾವ, ಸರಳತೆ, ಬಹಳ ಮುಖ್ಯವಾಗಿ ಪ್ರಶ್ನಿಸುವ ಮನೋಭಾವ ಇವುಗಳನ್ನು ಇಂದಿನ ಜನಮಾನಸಕ್ಕೆ ಪರಿಚಯಿಸುವ ಅಗತ್ಯವಿದೆ. 2020ಕ್ಕೆ ಡಾ. ಎಚ್.ನರಸಿಂಹಯ್ಯ ಅವರು ಜನಿಸಿ ಒಂದು ಶತಮಾನವಾದ ಹಿನ್ನೆಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅವರ ಭಾವಚಿತ್ರದ ಸಾವಿರಾರು ಪ್ರತಿ ಮಾಡಿಸಿ ಮನೆ ಮನೆಗಳಿಗೆ, ಶಾಲೆ ಕಾಲೇಜುಗಳಿಗೆ ತಲುಪಿಸಿ ಡಾ. ಹೆಚ್ ನರಸಿಂಹಯ್ಯ ಅವರ ಚಿಂತನೆಗಳನ್ನು ಹರಡುವ ಪ್ರಯತ್ನ ಮಾಡಲಾಗಿದೆ ಎಂದರು.
ವಿಜ್ಞಾನದೆಡೆಗೆ ನಮ್ಮ ನಡಿಗೆ :
ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಬೆಂಗಳೂರಿನ ಬಸವನಗುಡಿ, ನ್ಯಾಷನಲ್ ಕಾಲೇಜಿನಲ್ಲಿ ಜ.27ರಂದು ಆರಂಭವಾಗಲಿದ್ದು, ಜ.28ರಂದು ರಾಜಾನುಕುಂಟೆ, ಮಾರಸಂದ್ರ, ಬಾಶೆಟ್ಟಿಹಳ್ಳಿ ಮೂಲಕ ದೊಡ್ಡಬಳ್ಳಾಪುರಕ್ಕೆ ಆಗಮಿಸಲಿದ್ದು ರಾತ್ರಿ ತಂಗಲಿದೆ. ನಂತರ ಗೌರಿಬಿದನೂರು ಮಾರ್ಗವಾಗಿ ಹೊಸೂರು ತಲುಪಿ ಹೊಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭ ಮುಗಿಸಿಕೊಂಡು ಡಾ. ಹೆಚ್.ನರಸಿಂಹಯ್ಯ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ವಿದುರಾಶ್ವತ್ಥದ ವೀರಸೌಧಕ್ಕೆ ಭೇಟಿ ನೀಡಬಹುದು. ಪಾದಯಾತ್ರೆಯ ಮಾರ್ಗದುದ್ದಕ್ಕೂ ವೈಜ್ಞಾನಿಕ ಚಿಂತನೆಗೆ ಸಂಬಂಸಿದ ಬೀದಿ ನಾಟಕ ಪ್ರದರ್ಶನ, ಪವಾಡ ರಹಸ್ಯ ಬಯಲು, ಚರ್ಚೆ, ಸಂವಾದ, ಕಡಿಮೆ ಬೆಲೆಯ ಪುಸ್ತಕಗಳ ಮಾರಾಟ, ಮಾರ್ಗದುದ್ದಕ್ಕೂ ಯಾತ್ರೆಯ ನೆನಪಿಗಾಗಿ 100 ಸಸಿಗಳನ್ನು ನೆಡುವುದು ಮುಂತಾದ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ಪಾದಯಾತ್ರೆಯಲ್ಲಿ ಆಸಕ್ತರು ಐದೂ ದಿನ ಅಥವಾ ತಮಗೆ ಅನುಕೂಲವಾದ ದಿನ ಭಾಗವಹಿಸಬಹುದಾಗಿದೆ ಎಂದು ಮನವಿ ಮಾಡಿದರು.
ಈ ವೇಳೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಎಂ.ಲಕ್ಷ್ಮಿನರಸಿಂಹ, ಗೋವಿಂದರಾಜ ನಗರ ಕ್ಷೇತ್ರದ ಅಧ್ಯಕ್ಷ ಬಾಲಾಜಿರಾವ್, ಬೆಂ.ಗ್ರಾ. ಜಿಲ್ಲಾ ಘಟಕದ ಅಧ್ಯಕ್ಷ ತೂಬಗೆರೆ ಷರೀಫ್ ಹಾಜರಿದ್ದರು.
ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…
ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಿಂಗರಹಳ್ಳಿ ಗ್ರಾಮದ ಸರ್ವೆ ನಂಬರ್ -6 ರಲ್ಲಿ ಸುಮಾರು 60…
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…