ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಜನ್ಮಶತಮಾನೋತ್ಸವ: ಜ.27-28ರವರೆಗೆ ನಮ್ಮ ನಡಿಗೆ ವಿಜ್ಞಾನದೆಡೆಗೆ ಕಾರ್ಯಕ್ರಮ

ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಅವರ  ಜನ್ಮಶತಮಾನೋತ್ಸವದ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆಜೆವಿಎಸ್)ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಜ.27ರಿಂದ ಆರಂಭವಾಗಲಿದ್ದು, ಜ.28ರಂದು ದೊಡ್ಡಬಳ್ಳಾಪುರ ತಲುಪಲಿದೆ. ವೈಜ್ಞಾನಿಕ ಜಾಗೃತಿಯ ಈ ಕಾರ್ಯಕ್ರಮದಲ್ಲಿ ಆಸಕ್ತರು ಭಾಗವಹಿಸಿ ವಿಜ್ಞಾನದ ವಿಚಾರಗಳನ್ನು ಪ್ರಚುರಪಡಿಸಲು ಕೈಜೋಡಿಸಬೇಕಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಈ.ಬಸವರಾಜು ತಿಳಿಸಿದ್ದಾರೆ.

ಈ ಕುರಿತು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ, ವೈಜ್ಞಾನಿಕ ಚಿಂತಕ, ಶಿಕ್ಷಣತಜ್ಞ, ಸರಳತೆಗೆ ಹೆಸರಾಗಿದ್ದ ಡಾ ಹೆಚ್ ನರಸಿಂಹಯ್ಯ ಅವರು ತಮ್ಮ ಸ್ವಂತ ಪರಿಶ್ರಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾಗಿ, ನ್ಯಾಷನಲ್ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷರಾಗಿ ದಕ್ಷತೆಯಿಂದ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಸದಾ ವೈಜ್ಞಾನಿಕ ಚಿಂತನೆ ರೂಢಿಸಿಕೊಂಡಿದ್ದ ಅವರ ಆಶಯಗಳನ್ನು ಸಾಕಾರಗೊಳಿಸಲು ಇಂದಿನ ಪೀಳಿಗೆಗೆ ಡಾ.ಹೆಚ್ ನರಸಿಂಹಯ್ಯನವರ ಚಿಂತನೆ, ಆದರ್ಶ, ವೈಜ್ಞಾನಿಕ ಮನೋಭಾವ, ಸರಳತೆ, ಬಹಳ ಮುಖ್ಯವಾಗಿ ಪ್ರಶ್ನಿಸುವ ಮನೋಭಾವ ಇವುಗಳನ್ನು ಇಂದಿನ ಜನಮಾನಸಕ್ಕೆ ಪರಿಚಯಿಸುವ ಅಗತ್ಯವಿದೆ. 2020ಕ್ಕೆ ಡಾ. ಎಚ್.ನರಸಿಂಹಯ್ಯ ಅವರು ಜನಿಸಿ ಒಂದು ಶತಮಾನವಾದ ಹಿನ್ನೆಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅವರ ಭಾವಚಿತ್ರದ ಸಾವಿರಾರು ಪ್ರತಿ ಮಾಡಿಸಿ ಮನೆ ಮನೆಗಳಿಗೆ, ಶಾಲೆ ಕಾಲೇಜುಗಳಿಗೆ ತಲುಪಿಸಿ ಡಾ. ಹೆಚ್ ನರಸಿಂಹಯ್ಯ ಅವರ ಚಿಂತನೆಗಳನ್ನು ಹರಡುವ ಪ್ರಯತ್ನ ಮಾಡಲಾಗಿದೆ ಎಂದರು.

ವಿಜ್ಞಾನದೆಡೆಗೆ ನಮ್ಮ ನಡಿಗೆ :

 ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ  ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಬೆಂಗಳೂರಿನ ಬಸವನಗುಡಿ, ನ್ಯಾಷನಲ್ ಕಾಲೇಜಿನಲ್ಲಿ ಜ.27ರಂದು  ಆರಂಭವಾಗಲಿದ್ದು, ಜ.28ರಂದು ರಾಜಾನುಕುಂಟೆ, ಮಾರಸಂದ್ರ, ಬಾಶೆಟ್ಟಿಹಳ್ಳಿ ಮೂಲಕ ದೊಡ್ಡಬಳ್ಳಾಪುರಕ್ಕೆ ಆಗಮಿಸಲಿದ್ದು ರಾತ್ರಿ ತಂಗಲಿದೆ. ನಂತರ ಗೌರಿಬಿದನೂರು ಮಾರ್ಗವಾಗಿ ಹೊಸೂರು ತಲುಪಿ ಹೊಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭ ಮುಗಿಸಿಕೊಂಡು ಡಾ. ಹೆಚ್.ನರಸಿಂಹಯ್ಯ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ವಿದುರಾಶ್ವತ್ಥದ ವೀರಸೌಧಕ್ಕೆ ಭೇಟಿ ನೀಡಬಹುದು. ಪಾದಯಾತ್ರೆಯ ಮಾರ್ಗದುದ್ದಕ್ಕೂ ವೈಜ್ಞಾನಿಕ ಚಿಂತನೆಗೆ ಸಂಬಂಸಿದ ಬೀದಿ ನಾಟಕ ಪ್ರದರ್ಶನ, ಪವಾಡ ರಹಸ್ಯ ಬಯಲು, ಚರ್ಚೆ, ಸಂವಾದ, ಕಡಿಮೆ ಬೆಲೆಯ ಪುಸ್ತಕಗಳ ಮಾರಾಟ, ಮಾರ್ಗದುದ್ದಕ್ಕೂ ಯಾತ್ರೆಯ ನೆನಪಿಗಾಗಿ 100 ಸಸಿಗಳನ್ನು ನೆಡುವುದು ಮುಂತಾದ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ಪಾದಯಾತ್ರೆಯಲ್ಲಿ ಆಸಕ್ತರು ಐದೂ ದಿನ ಅಥವಾ ತಮಗೆ ಅನುಕೂಲವಾದ ದಿನ ಭಾಗವಹಿಸಬಹುದಾಗಿದೆ ಎಂದು ಮನವಿ ಮಾಡಿದರು.

ಈ ವೇಳೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಎಂ.ಲಕ್ಷ್ಮಿನರಸಿಂಹ, ಗೋವಿಂದರಾಜ ನಗರ ಕ್ಷೇತ್ರದ ಅಧ್ಯಕ್ಷ ಬಾಲಾಜಿರಾವ್, ಬೆಂ.ಗ್ರಾ. ಜಿಲ್ಲಾ ಘಟಕದ ಅಧ್ಯಕ್ಷ ತೂಬಗೆರೆ ಷರೀಫ್ ಹಾಜರಿದ್ದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

3 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

6 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

6 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

19 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

20 hours ago