ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಜನ್ಮಶತಮಾನೋತ್ಸವ: ಜ.27-28ರವರೆಗೆ ನಮ್ಮ ನಡಿಗೆ ವಿಜ್ಞಾನದೆಡೆಗೆ ಕಾರ್ಯಕ್ರಮ

ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಅವರ  ಜನ್ಮಶತಮಾನೋತ್ಸವದ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆಜೆವಿಎಸ್)ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಜ.27ರಿಂದ ಆರಂಭವಾಗಲಿದ್ದು, ಜ.28ರಂದು ದೊಡ್ಡಬಳ್ಳಾಪುರ ತಲುಪಲಿದೆ. ವೈಜ್ಞಾನಿಕ ಜಾಗೃತಿಯ ಈ ಕಾರ್ಯಕ್ರಮದಲ್ಲಿ ಆಸಕ್ತರು ಭಾಗವಹಿಸಿ ವಿಜ್ಞಾನದ ವಿಚಾರಗಳನ್ನು ಪ್ರಚುರಪಡಿಸಲು ಕೈಜೋಡಿಸಬೇಕಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಈ.ಬಸವರಾಜು ತಿಳಿಸಿದ್ದಾರೆ.

ಈ ಕುರಿತು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ, ವೈಜ್ಞಾನಿಕ ಚಿಂತಕ, ಶಿಕ್ಷಣತಜ್ಞ, ಸರಳತೆಗೆ ಹೆಸರಾಗಿದ್ದ ಡಾ ಹೆಚ್ ನರಸಿಂಹಯ್ಯ ಅವರು ತಮ್ಮ ಸ್ವಂತ ಪರಿಶ್ರಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾಗಿ, ನ್ಯಾಷನಲ್ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷರಾಗಿ ದಕ್ಷತೆಯಿಂದ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಸದಾ ವೈಜ್ಞಾನಿಕ ಚಿಂತನೆ ರೂಢಿಸಿಕೊಂಡಿದ್ದ ಅವರ ಆಶಯಗಳನ್ನು ಸಾಕಾರಗೊಳಿಸಲು ಇಂದಿನ ಪೀಳಿಗೆಗೆ ಡಾ.ಹೆಚ್ ನರಸಿಂಹಯ್ಯನವರ ಚಿಂತನೆ, ಆದರ್ಶ, ವೈಜ್ಞಾನಿಕ ಮನೋಭಾವ, ಸರಳತೆ, ಬಹಳ ಮುಖ್ಯವಾಗಿ ಪ್ರಶ್ನಿಸುವ ಮನೋಭಾವ ಇವುಗಳನ್ನು ಇಂದಿನ ಜನಮಾನಸಕ್ಕೆ ಪರಿಚಯಿಸುವ ಅಗತ್ಯವಿದೆ. 2020ಕ್ಕೆ ಡಾ. ಎಚ್.ನರಸಿಂಹಯ್ಯ ಅವರು ಜನಿಸಿ ಒಂದು ಶತಮಾನವಾದ ಹಿನ್ನೆಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅವರ ಭಾವಚಿತ್ರದ ಸಾವಿರಾರು ಪ್ರತಿ ಮಾಡಿಸಿ ಮನೆ ಮನೆಗಳಿಗೆ, ಶಾಲೆ ಕಾಲೇಜುಗಳಿಗೆ ತಲುಪಿಸಿ ಡಾ. ಹೆಚ್ ನರಸಿಂಹಯ್ಯ ಅವರ ಚಿಂತನೆಗಳನ್ನು ಹರಡುವ ಪ್ರಯತ್ನ ಮಾಡಲಾಗಿದೆ ಎಂದರು.

ವಿಜ್ಞಾನದೆಡೆಗೆ ನಮ್ಮ ನಡಿಗೆ :

 ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ  ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಬೆಂಗಳೂರಿನ ಬಸವನಗುಡಿ, ನ್ಯಾಷನಲ್ ಕಾಲೇಜಿನಲ್ಲಿ ಜ.27ರಂದು  ಆರಂಭವಾಗಲಿದ್ದು, ಜ.28ರಂದು ರಾಜಾನುಕುಂಟೆ, ಮಾರಸಂದ್ರ, ಬಾಶೆಟ್ಟಿಹಳ್ಳಿ ಮೂಲಕ ದೊಡ್ಡಬಳ್ಳಾಪುರಕ್ಕೆ ಆಗಮಿಸಲಿದ್ದು ರಾತ್ರಿ ತಂಗಲಿದೆ. ನಂತರ ಗೌರಿಬಿದನೂರು ಮಾರ್ಗವಾಗಿ ಹೊಸೂರು ತಲುಪಿ ಹೊಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭ ಮುಗಿಸಿಕೊಂಡು ಡಾ. ಹೆಚ್.ನರಸಿಂಹಯ್ಯ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ವಿದುರಾಶ್ವತ್ಥದ ವೀರಸೌಧಕ್ಕೆ ಭೇಟಿ ನೀಡಬಹುದು. ಪಾದಯಾತ್ರೆಯ ಮಾರ್ಗದುದ್ದಕ್ಕೂ ವೈಜ್ಞಾನಿಕ ಚಿಂತನೆಗೆ ಸಂಬಂಸಿದ ಬೀದಿ ನಾಟಕ ಪ್ರದರ್ಶನ, ಪವಾಡ ರಹಸ್ಯ ಬಯಲು, ಚರ್ಚೆ, ಸಂವಾದ, ಕಡಿಮೆ ಬೆಲೆಯ ಪುಸ್ತಕಗಳ ಮಾರಾಟ, ಮಾರ್ಗದುದ್ದಕ್ಕೂ ಯಾತ್ರೆಯ ನೆನಪಿಗಾಗಿ 100 ಸಸಿಗಳನ್ನು ನೆಡುವುದು ಮುಂತಾದ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ಪಾದಯಾತ್ರೆಯಲ್ಲಿ ಆಸಕ್ತರು ಐದೂ ದಿನ ಅಥವಾ ತಮಗೆ ಅನುಕೂಲವಾದ ದಿನ ಭಾಗವಹಿಸಬಹುದಾಗಿದೆ ಎಂದು ಮನವಿ ಮಾಡಿದರು.

ಈ ವೇಳೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಎಂ.ಲಕ್ಷ್ಮಿನರಸಿಂಹ, ಗೋವಿಂದರಾಜ ನಗರ ಕ್ಷೇತ್ರದ ಅಧ್ಯಕ್ಷ ಬಾಲಾಜಿರಾವ್, ಬೆಂ.ಗ್ರಾ. ಜಿಲ್ಲಾ ಘಟಕದ ಅಧ್ಯಕ್ಷ ತೂಬಗೆರೆ ಷರೀಫ್ ಹಾಜರಿದ್ದರು.

Ramesh Babu

Journalist

Recent Posts

ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಎಂಎಲ್‌ಸಿ ಟಿ.ಎ. ಶರವಣ, ಅವಧೂತ ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್‌ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…

39 minutes ago

‘ಡೇ ಕೇರ್’ ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ……?

ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…

4 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

17 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

17 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

17 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

22 hours ago