ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಜನ್ಮಶತಮಾನೋತ್ಸವ: ಜ.27-28ರವರೆಗೆ ನಮ್ಮ ನಡಿಗೆ ವಿಜ್ಞಾನದೆಡೆಗೆ ಕಾರ್ಯಕ್ರಮ

ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಅವರ  ಜನ್ಮಶತಮಾನೋತ್ಸವದ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆಜೆವಿಎಸ್)ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಜ.27ರಿಂದ ಆರಂಭವಾಗಲಿದ್ದು, ಜ.28ರಂದು ದೊಡ್ಡಬಳ್ಳಾಪುರ ತಲುಪಲಿದೆ. ವೈಜ್ಞಾನಿಕ ಜಾಗೃತಿಯ ಈ ಕಾರ್ಯಕ್ರಮದಲ್ಲಿ ಆಸಕ್ತರು ಭಾಗವಹಿಸಿ ವಿಜ್ಞಾನದ ವಿಚಾರಗಳನ್ನು ಪ್ರಚುರಪಡಿಸಲು ಕೈಜೋಡಿಸಬೇಕಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಈ.ಬಸವರಾಜು ತಿಳಿಸಿದ್ದಾರೆ.

ಈ ಕುರಿತು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ, ವೈಜ್ಞಾನಿಕ ಚಿಂತಕ, ಶಿಕ್ಷಣತಜ್ಞ, ಸರಳತೆಗೆ ಹೆಸರಾಗಿದ್ದ ಡಾ ಹೆಚ್ ನರಸಿಂಹಯ್ಯ ಅವರು ತಮ್ಮ ಸ್ವಂತ ಪರಿಶ್ರಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾಗಿ, ನ್ಯಾಷನಲ್ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷರಾಗಿ ದಕ್ಷತೆಯಿಂದ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಸದಾ ವೈಜ್ಞಾನಿಕ ಚಿಂತನೆ ರೂಢಿಸಿಕೊಂಡಿದ್ದ ಅವರ ಆಶಯಗಳನ್ನು ಸಾಕಾರಗೊಳಿಸಲು ಇಂದಿನ ಪೀಳಿಗೆಗೆ ಡಾ.ಹೆಚ್ ನರಸಿಂಹಯ್ಯನವರ ಚಿಂತನೆ, ಆದರ್ಶ, ವೈಜ್ಞಾನಿಕ ಮನೋಭಾವ, ಸರಳತೆ, ಬಹಳ ಮುಖ್ಯವಾಗಿ ಪ್ರಶ್ನಿಸುವ ಮನೋಭಾವ ಇವುಗಳನ್ನು ಇಂದಿನ ಜನಮಾನಸಕ್ಕೆ ಪರಿಚಯಿಸುವ ಅಗತ್ಯವಿದೆ. 2020ಕ್ಕೆ ಡಾ. ಎಚ್.ನರಸಿಂಹಯ್ಯ ಅವರು ಜನಿಸಿ ಒಂದು ಶತಮಾನವಾದ ಹಿನ್ನೆಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅವರ ಭಾವಚಿತ್ರದ ಸಾವಿರಾರು ಪ್ರತಿ ಮಾಡಿಸಿ ಮನೆ ಮನೆಗಳಿಗೆ, ಶಾಲೆ ಕಾಲೇಜುಗಳಿಗೆ ತಲುಪಿಸಿ ಡಾ. ಹೆಚ್ ನರಸಿಂಹಯ್ಯ ಅವರ ಚಿಂತನೆಗಳನ್ನು ಹರಡುವ ಪ್ರಯತ್ನ ಮಾಡಲಾಗಿದೆ ಎಂದರು.

ವಿಜ್ಞಾನದೆಡೆಗೆ ನಮ್ಮ ನಡಿಗೆ :

 ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ  ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಬೆಂಗಳೂರಿನ ಬಸವನಗುಡಿ, ನ್ಯಾಷನಲ್ ಕಾಲೇಜಿನಲ್ಲಿ ಜ.27ರಂದು  ಆರಂಭವಾಗಲಿದ್ದು, ಜ.28ರಂದು ರಾಜಾನುಕುಂಟೆ, ಮಾರಸಂದ್ರ, ಬಾಶೆಟ್ಟಿಹಳ್ಳಿ ಮೂಲಕ ದೊಡ್ಡಬಳ್ಳಾಪುರಕ್ಕೆ ಆಗಮಿಸಲಿದ್ದು ರಾತ್ರಿ ತಂಗಲಿದೆ. ನಂತರ ಗೌರಿಬಿದನೂರು ಮಾರ್ಗವಾಗಿ ಹೊಸೂರು ತಲುಪಿ ಹೊಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭ ಮುಗಿಸಿಕೊಂಡು ಡಾ. ಹೆಚ್.ನರಸಿಂಹಯ್ಯ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ವಿದುರಾಶ್ವತ್ಥದ ವೀರಸೌಧಕ್ಕೆ ಭೇಟಿ ನೀಡಬಹುದು. ಪಾದಯಾತ್ರೆಯ ಮಾರ್ಗದುದ್ದಕ್ಕೂ ವೈಜ್ಞಾನಿಕ ಚಿಂತನೆಗೆ ಸಂಬಂಸಿದ ಬೀದಿ ನಾಟಕ ಪ್ರದರ್ಶನ, ಪವಾಡ ರಹಸ್ಯ ಬಯಲು, ಚರ್ಚೆ, ಸಂವಾದ, ಕಡಿಮೆ ಬೆಲೆಯ ಪುಸ್ತಕಗಳ ಮಾರಾಟ, ಮಾರ್ಗದುದ್ದಕ್ಕೂ ಯಾತ್ರೆಯ ನೆನಪಿಗಾಗಿ 100 ಸಸಿಗಳನ್ನು ನೆಡುವುದು ಮುಂತಾದ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ಪಾದಯಾತ್ರೆಯಲ್ಲಿ ಆಸಕ್ತರು ಐದೂ ದಿನ ಅಥವಾ ತಮಗೆ ಅನುಕೂಲವಾದ ದಿನ ಭಾಗವಹಿಸಬಹುದಾಗಿದೆ ಎಂದು ಮನವಿ ಮಾಡಿದರು.

ಈ ವೇಳೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಎಂ.ಲಕ್ಷ್ಮಿನರಸಿಂಹ, ಗೋವಿಂದರಾಜ ನಗರ ಕ್ಷೇತ್ರದ ಅಧ್ಯಕ್ಷ ಬಾಲಾಜಿರಾವ್, ಬೆಂ.ಗ್ರಾ. ಜಿಲ್ಲಾ ಘಟಕದ ಅಧ್ಯಕ್ಷ ತೂಬಗೆರೆ ಷರೀಫ್ ಹಾಜರಿದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

9 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

10 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

16 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago