ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಜನ್ಮಶತಮಾನೋತ್ಸವ: ಜ.27-28ರವರೆಗೆ ನಮ್ಮ ನಡಿಗೆ ವಿಜ್ಞಾನದೆಡೆಗೆ ಕಾರ್ಯಕ್ರಮ

ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಅವರ  ಜನ್ಮಶತಮಾನೋತ್ಸವದ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆಜೆವಿಎಸ್)ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಜ.27ರಿಂದ ಆರಂಭವಾಗಲಿದ್ದು, ಜ.28ರಂದು ದೊಡ್ಡಬಳ್ಳಾಪುರ ತಲುಪಲಿದೆ. ವೈಜ್ಞಾನಿಕ ಜಾಗೃತಿಯ ಈ ಕಾರ್ಯಕ್ರಮದಲ್ಲಿ ಆಸಕ್ತರು ಭಾಗವಹಿಸಿ ವಿಜ್ಞಾನದ ವಿಚಾರಗಳನ್ನು ಪ್ರಚುರಪಡಿಸಲು ಕೈಜೋಡಿಸಬೇಕಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಈ.ಬಸವರಾಜು ತಿಳಿಸಿದ್ದಾರೆ.

ಈ ಕುರಿತು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ, ವೈಜ್ಞಾನಿಕ ಚಿಂತಕ, ಶಿಕ್ಷಣತಜ್ಞ, ಸರಳತೆಗೆ ಹೆಸರಾಗಿದ್ದ ಡಾ ಹೆಚ್ ನರಸಿಂಹಯ್ಯ ಅವರು ತಮ್ಮ ಸ್ವಂತ ಪರಿಶ್ರಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾಗಿ, ನ್ಯಾಷನಲ್ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷರಾಗಿ ದಕ್ಷತೆಯಿಂದ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಸದಾ ವೈಜ್ಞಾನಿಕ ಚಿಂತನೆ ರೂಢಿಸಿಕೊಂಡಿದ್ದ ಅವರ ಆಶಯಗಳನ್ನು ಸಾಕಾರಗೊಳಿಸಲು ಇಂದಿನ ಪೀಳಿಗೆಗೆ ಡಾ.ಹೆಚ್ ನರಸಿಂಹಯ್ಯನವರ ಚಿಂತನೆ, ಆದರ್ಶ, ವೈಜ್ಞಾನಿಕ ಮನೋಭಾವ, ಸರಳತೆ, ಬಹಳ ಮುಖ್ಯವಾಗಿ ಪ್ರಶ್ನಿಸುವ ಮನೋಭಾವ ಇವುಗಳನ್ನು ಇಂದಿನ ಜನಮಾನಸಕ್ಕೆ ಪರಿಚಯಿಸುವ ಅಗತ್ಯವಿದೆ. 2020ಕ್ಕೆ ಡಾ. ಎಚ್.ನರಸಿಂಹಯ್ಯ ಅವರು ಜನಿಸಿ ಒಂದು ಶತಮಾನವಾದ ಹಿನ್ನೆಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅವರ ಭಾವಚಿತ್ರದ ಸಾವಿರಾರು ಪ್ರತಿ ಮಾಡಿಸಿ ಮನೆ ಮನೆಗಳಿಗೆ, ಶಾಲೆ ಕಾಲೇಜುಗಳಿಗೆ ತಲುಪಿಸಿ ಡಾ. ಹೆಚ್ ನರಸಿಂಹಯ್ಯ ಅವರ ಚಿಂತನೆಗಳನ್ನು ಹರಡುವ ಪ್ರಯತ್ನ ಮಾಡಲಾಗಿದೆ ಎಂದರು.

ವಿಜ್ಞಾನದೆಡೆಗೆ ನಮ್ಮ ನಡಿಗೆ :

 ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ  ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಬೆಂಗಳೂರಿನ ಬಸವನಗುಡಿ, ನ್ಯಾಷನಲ್ ಕಾಲೇಜಿನಲ್ಲಿ ಜ.27ರಂದು  ಆರಂಭವಾಗಲಿದ್ದು, ಜ.28ರಂದು ರಾಜಾನುಕುಂಟೆ, ಮಾರಸಂದ್ರ, ಬಾಶೆಟ್ಟಿಹಳ್ಳಿ ಮೂಲಕ ದೊಡ್ಡಬಳ್ಳಾಪುರಕ್ಕೆ ಆಗಮಿಸಲಿದ್ದು ರಾತ್ರಿ ತಂಗಲಿದೆ. ನಂತರ ಗೌರಿಬಿದನೂರು ಮಾರ್ಗವಾಗಿ ಹೊಸೂರು ತಲುಪಿ ಹೊಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭ ಮುಗಿಸಿಕೊಂಡು ಡಾ. ಹೆಚ್.ನರಸಿಂಹಯ್ಯ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ವಿದುರಾಶ್ವತ್ಥದ ವೀರಸೌಧಕ್ಕೆ ಭೇಟಿ ನೀಡಬಹುದು. ಪಾದಯಾತ್ರೆಯ ಮಾರ್ಗದುದ್ದಕ್ಕೂ ವೈಜ್ಞಾನಿಕ ಚಿಂತನೆಗೆ ಸಂಬಂಸಿದ ಬೀದಿ ನಾಟಕ ಪ್ರದರ್ಶನ, ಪವಾಡ ರಹಸ್ಯ ಬಯಲು, ಚರ್ಚೆ, ಸಂವಾದ, ಕಡಿಮೆ ಬೆಲೆಯ ಪುಸ್ತಕಗಳ ಮಾರಾಟ, ಮಾರ್ಗದುದ್ದಕ್ಕೂ ಯಾತ್ರೆಯ ನೆನಪಿಗಾಗಿ 100 ಸಸಿಗಳನ್ನು ನೆಡುವುದು ಮುಂತಾದ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ಪಾದಯಾತ್ರೆಯಲ್ಲಿ ಆಸಕ್ತರು ಐದೂ ದಿನ ಅಥವಾ ತಮಗೆ ಅನುಕೂಲವಾದ ದಿನ ಭಾಗವಹಿಸಬಹುದಾಗಿದೆ ಎಂದು ಮನವಿ ಮಾಡಿದರು.

ಈ ವೇಳೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಎಂ.ಲಕ್ಷ್ಮಿನರಸಿಂಹ, ಗೋವಿಂದರಾಜ ನಗರ ಕ್ಷೇತ್ರದ ಅಧ್ಯಕ್ಷ ಬಾಲಾಜಿರಾವ್, ಬೆಂ.ಗ್ರಾ. ಜಿಲ್ಲಾ ಘಟಕದ ಅಧ್ಯಕ್ಷ ತೂಬಗೆರೆ ಷರೀಫ್ ಹಾಜರಿದ್ದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

3 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

3 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

8 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

17 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago