ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಜನ್ಮಶತಮಾನೋತ್ಸವ: ಜ.27-28ರವರೆಗೆ ನಮ್ಮ ನಡಿಗೆ ವಿಜ್ಞಾನದೆಡೆಗೆ ಕಾರ್ಯಕ್ರಮ

ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಅವರ  ಜನ್ಮಶತಮಾನೋತ್ಸವದ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆಜೆವಿಎಸ್)ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಜ.27ರಿಂದ ಆರಂಭವಾಗಲಿದ್ದು, ಜ.28ರಂದು ದೊಡ್ಡಬಳ್ಳಾಪುರ ತಲುಪಲಿದೆ. ವೈಜ್ಞಾನಿಕ ಜಾಗೃತಿಯ ಈ ಕಾರ್ಯಕ್ರಮದಲ್ಲಿ ಆಸಕ್ತರು ಭಾಗವಹಿಸಿ ವಿಜ್ಞಾನದ ವಿಚಾರಗಳನ್ನು ಪ್ರಚುರಪಡಿಸಲು ಕೈಜೋಡಿಸಬೇಕಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಈ.ಬಸವರಾಜು ತಿಳಿಸಿದ್ದಾರೆ.

ಈ ಕುರಿತು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ, ವೈಜ್ಞಾನಿಕ ಚಿಂತಕ, ಶಿಕ್ಷಣತಜ್ಞ, ಸರಳತೆಗೆ ಹೆಸರಾಗಿದ್ದ ಡಾ ಹೆಚ್ ನರಸಿಂಹಯ್ಯ ಅವರು ತಮ್ಮ ಸ್ವಂತ ಪರಿಶ್ರಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾಗಿ, ನ್ಯಾಷನಲ್ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷರಾಗಿ ದಕ್ಷತೆಯಿಂದ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಸದಾ ವೈಜ್ಞಾನಿಕ ಚಿಂತನೆ ರೂಢಿಸಿಕೊಂಡಿದ್ದ ಅವರ ಆಶಯಗಳನ್ನು ಸಾಕಾರಗೊಳಿಸಲು ಇಂದಿನ ಪೀಳಿಗೆಗೆ ಡಾ.ಹೆಚ್ ನರಸಿಂಹಯ್ಯನವರ ಚಿಂತನೆ, ಆದರ್ಶ, ವೈಜ್ಞಾನಿಕ ಮನೋಭಾವ, ಸರಳತೆ, ಬಹಳ ಮುಖ್ಯವಾಗಿ ಪ್ರಶ್ನಿಸುವ ಮನೋಭಾವ ಇವುಗಳನ್ನು ಇಂದಿನ ಜನಮಾನಸಕ್ಕೆ ಪರಿಚಯಿಸುವ ಅಗತ್ಯವಿದೆ. 2020ಕ್ಕೆ ಡಾ. ಎಚ್.ನರಸಿಂಹಯ್ಯ ಅವರು ಜನಿಸಿ ಒಂದು ಶತಮಾನವಾದ ಹಿನ್ನೆಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅವರ ಭಾವಚಿತ್ರದ ಸಾವಿರಾರು ಪ್ರತಿ ಮಾಡಿಸಿ ಮನೆ ಮನೆಗಳಿಗೆ, ಶಾಲೆ ಕಾಲೇಜುಗಳಿಗೆ ತಲುಪಿಸಿ ಡಾ. ಹೆಚ್ ನರಸಿಂಹಯ್ಯ ಅವರ ಚಿಂತನೆಗಳನ್ನು ಹರಡುವ ಪ್ರಯತ್ನ ಮಾಡಲಾಗಿದೆ ಎಂದರು.

ವಿಜ್ಞಾನದೆಡೆಗೆ ನಮ್ಮ ನಡಿಗೆ :

 ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ  ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಬೆಂಗಳೂರಿನ ಬಸವನಗುಡಿ, ನ್ಯಾಷನಲ್ ಕಾಲೇಜಿನಲ್ಲಿ ಜ.27ರಂದು  ಆರಂಭವಾಗಲಿದ್ದು, ಜ.28ರಂದು ರಾಜಾನುಕುಂಟೆ, ಮಾರಸಂದ್ರ, ಬಾಶೆಟ್ಟಿಹಳ್ಳಿ ಮೂಲಕ ದೊಡ್ಡಬಳ್ಳಾಪುರಕ್ಕೆ ಆಗಮಿಸಲಿದ್ದು ರಾತ್ರಿ ತಂಗಲಿದೆ. ನಂತರ ಗೌರಿಬಿದನೂರು ಮಾರ್ಗವಾಗಿ ಹೊಸೂರು ತಲುಪಿ ಹೊಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭ ಮುಗಿಸಿಕೊಂಡು ಡಾ. ಹೆಚ್.ನರಸಿಂಹಯ್ಯ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ವಿದುರಾಶ್ವತ್ಥದ ವೀರಸೌಧಕ್ಕೆ ಭೇಟಿ ನೀಡಬಹುದು. ಪಾದಯಾತ್ರೆಯ ಮಾರ್ಗದುದ್ದಕ್ಕೂ ವೈಜ್ಞಾನಿಕ ಚಿಂತನೆಗೆ ಸಂಬಂಸಿದ ಬೀದಿ ನಾಟಕ ಪ್ರದರ್ಶನ, ಪವಾಡ ರಹಸ್ಯ ಬಯಲು, ಚರ್ಚೆ, ಸಂವಾದ, ಕಡಿಮೆ ಬೆಲೆಯ ಪುಸ್ತಕಗಳ ಮಾರಾಟ, ಮಾರ್ಗದುದ್ದಕ್ಕೂ ಯಾತ್ರೆಯ ನೆನಪಿಗಾಗಿ 100 ಸಸಿಗಳನ್ನು ನೆಡುವುದು ಮುಂತಾದ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ಪಾದಯಾತ್ರೆಯಲ್ಲಿ ಆಸಕ್ತರು ಐದೂ ದಿನ ಅಥವಾ ತಮಗೆ ಅನುಕೂಲವಾದ ದಿನ ಭಾಗವಹಿಸಬಹುದಾಗಿದೆ ಎಂದು ಮನವಿ ಮಾಡಿದರು.

ಈ ವೇಳೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಎಂ.ಲಕ್ಷ್ಮಿನರಸಿಂಹ, ಗೋವಿಂದರಾಜ ನಗರ ಕ್ಷೇತ್ರದ ಅಧ್ಯಕ್ಷ ಬಾಲಾಜಿರಾವ್, ಬೆಂ.ಗ್ರಾ. ಜಿಲ್ಲಾ ಘಟಕದ ಅಧ್ಯಕ್ಷ ತೂಬಗೆರೆ ಷರೀಫ್ ಹಾಜರಿದ್ದರು.

Ramesh Babu

Journalist

Recent Posts

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

7 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

18 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

21 hours ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

2 days ago