ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆಜೆವಿಎಸ್)ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಜ.27ರಿಂದ ಆರಂಭವಾಗಲಿದ್ದು, ಜ.28ರಂದು ದೊಡ್ಡಬಳ್ಳಾಪುರ ತಲುಪಲಿದೆ. ವೈಜ್ಞಾನಿಕ ಜಾಗೃತಿಯ ಈ ಕಾರ್ಯಕ್ರಮದಲ್ಲಿ ಆಸಕ್ತರು ಭಾಗವಹಿಸಿ ವಿಜ್ಞಾನದ ವಿಚಾರಗಳನ್ನು ಪ್ರಚುರಪಡಿಸಲು ಕೈಜೋಡಿಸಬೇಕಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಈ.ಬಸವರಾಜು ತಿಳಿಸಿದ್ದಾರೆ.
ಈ ಕುರಿತು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ, ವೈಜ್ಞಾನಿಕ ಚಿಂತಕ, ಶಿಕ್ಷಣತಜ್ಞ, ಸರಳತೆಗೆ ಹೆಸರಾಗಿದ್ದ ಡಾ ಹೆಚ್ ನರಸಿಂಹಯ್ಯ ಅವರು ತಮ್ಮ ಸ್ವಂತ ಪರಿಶ್ರಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾಗಿ, ನ್ಯಾಷನಲ್ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷರಾಗಿ ದಕ್ಷತೆಯಿಂದ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಸದಾ ವೈಜ್ಞಾನಿಕ ಚಿಂತನೆ ರೂಢಿಸಿಕೊಂಡಿದ್ದ ಅವರ ಆಶಯಗಳನ್ನು ಸಾಕಾರಗೊಳಿಸಲು ಇಂದಿನ ಪೀಳಿಗೆಗೆ ಡಾ.ಹೆಚ್ ನರಸಿಂಹಯ್ಯನವರ ಚಿಂತನೆ, ಆದರ್ಶ, ವೈಜ್ಞಾನಿಕ ಮನೋಭಾವ, ಸರಳತೆ, ಬಹಳ ಮುಖ್ಯವಾಗಿ ಪ್ರಶ್ನಿಸುವ ಮನೋಭಾವ ಇವುಗಳನ್ನು ಇಂದಿನ ಜನಮಾನಸಕ್ಕೆ ಪರಿಚಯಿಸುವ ಅಗತ್ಯವಿದೆ. 2020ಕ್ಕೆ ಡಾ. ಎಚ್.ನರಸಿಂಹಯ್ಯ ಅವರು ಜನಿಸಿ ಒಂದು ಶತಮಾನವಾದ ಹಿನ್ನೆಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅವರ ಭಾವಚಿತ್ರದ ಸಾವಿರಾರು ಪ್ರತಿ ಮಾಡಿಸಿ ಮನೆ ಮನೆಗಳಿಗೆ, ಶಾಲೆ ಕಾಲೇಜುಗಳಿಗೆ ತಲುಪಿಸಿ ಡಾ. ಹೆಚ್ ನರಸಿಂಹಯ್ಯ ಅವರ ಚಿಂತನೆಗಳನ್ನು ಹರಡುವ ಪ್ರಯತ್ನ ಮಾಡಲಾಗಿದೆ ಎಂದರು.
ವಿಜ್ಞಾನದೆಡೆಗೆ ನಮ್ಮ ನಡಿಗೆ :
ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಬೆಂಗಳೂರಿನ ಬಸವನಗುಡಿ, ನ್ಯಾಷನಲ್ ಕಾಲೇಜಿನಲ್ಲಿ ಜ.27ರಂದು ಆರಂಭವಾಗಲಿದ್ದು, ಜ.28ರಂದು ರಾಜಾನುಕುಂಟೆ, ಮಾರಸಂದ್ರ, ಬಾಶೆಟ್ಟಿಹಳ್ಳಿ ಮೂಲಕ ದೊಡ್ಡಬಳ್ಳಾಪುರಕ್ಕೆ ಆಗಮಿಸಲಿದ್ದು ರಾತ್ರಿ ತಂಗಲಿದೆ. ನಂತರ ಗೌರಿಬಿದನೂರು ಮಾರ್ಗವಾಗಿ ಹೊಸೂರು ತಲುಪಿ ಹೊಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭ ಮುಗಿಸಿಕೊಂಡು ಡಾ. ಹೆಚ್.ನರಸಿಂಹಯ್ಯ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ವಿದುರಾಶ್ವತ್ಥದ ವೀರಸೌಧಕ್ಕೆ ಭೇಟಿ ನೀಡಬಹುದು. ಪಾದಯಾತ್ರೆಯ ಮಾರ್ಗದುದ್ದಕ್ಕೂ ವೈಜ್ಞಾನಿಕ ಚಿಂತನೆಗೆ ಸಂಬಂಸಿದ ಬೀದಿ ನಾಟಕ ಪ್ರದರ್ಶನ, ಪವಾಡ ರಹಸ್ಯ ಬಯಲು, ಚರ್ಚೆ, ಸಂವಾದ, ಕಡಿಮೆ ಬೆಲೆಯ ಪುಸ್ತಕಗಳ ಮಾರಾಟ, ಮಾರ್ಗದುದ್ದಕ್ಕೂ ಯಾತ್ರೆಯ ನೆನಪಿಗಾಗಿ 100 ಸಸಿಗಳನ್ನು ನೆಡುವುದು ಮುಂತಾದ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ಪಾದಯಾತ್ರೆಯಲ್ಲಿ ಆಸಕ್ತರು ಐದೂ ದಿನ ಅಥವಾ ತಮಗೆ ಅನುಕೂಲವಾದ ದಿನ ಭಾಗವಹಿಸಬಹುದಾಗಿದೆ ಎಂದು ಮನವಿ ಮಾಡಿದರು.
ಈ ವೇಳೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಎಂ.ಲಕ್ಷ್ಮಿನರಸಿಂಹ, ಗೋವಿಂದರಾಜ ನಗರ ಕ್ಷೇತ್ರದ ಅಧ್ಯಕ್ಷ ಬಾಲಾಜಿರಾವ್, ಬೆಂ.ಗ್ರಾ. ಜಿಲ್ಲಾ ಘಟಕದ ಅಧ್ಯಕ್ಷ ತೂಬಗೆರೆ ಷರೀಫ್ ಹಾಜರಿದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…