ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಜನ್ಮಶತಮಾನೋತ್ಸವ: ಜ.27-28ರವರೆಗೆ ನಮ್ಮ ನಡಿಗೆ ವಿಜ್ಞಾನದೆಡೆಗೆ ಕಾರ್ಯಕ್ರಮ

ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಅವರ  ಜನ್ಮಶತಮಾನೋತ್ಸವದ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆಜೆವಿಎಸ್)ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಜ.27ರಿಂದ ಆರಂಭವಾಗಲಿದ್ದು, ಜ.28ರಂದು ದೊಡ್ಡಬಳ್ಳಾಪುರ ತಲುಪಲಿದೆ. ವೈಜ್ಞಾನಿಕ ಜಾಗೃತಿಯ ಈ ಕಾರ್ಯಕ್ರಮದಲ್ಲಿ ಆಸಕ್ತರು ಭಾಗವಹಿಸಿ ವಿಜ್ಞಾನದ ವಿಚಾರಗಳನ್ನು ಪ್ರಚುರಪಡಿಸಲು ಕೈಜೋಡಿಸಬೇಕಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಈ.ಬಸವರಾಜು ತಿಳಿಸಿದ್ದಾರೆ.

ಈ ಕುರಿತು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ, ವೈಜ್ಞಾನಿಕ ಚಿಂತಕ, ಶಿಕ್ಷಣತಜ್ಞ, ಸರಳತೆಗೆ ಹೆಸರಾಗಿದ್ದ ಡಾ ಹೆಚ್ ನರಸಿಂಹಯ್ಯ ಅವರು ತಮ್ಮ ಸ್ವಂತ ಪರಿಶ್ರಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾಗಿ, ನ್ಯಾಷನಲ್ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷರಾಗಿ ದಕ್ಷತೆಯಿಂದ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಸದಾ ವೈಜ್ಞಾನಿಕ ಚಿಂತನೆ ರೂಢಿಸಿಕೊಂಡಿದ್ದ ಅವರ ಆಶಯಗಳನ್ನು ಸಾಕಾರಗೊಳಿಸಲು ಇಂದಿನ ಪೀಳಿಗೆಗೆ ಡಾ.ಹೆಚ್ ನರಸಿಂಹಯ್ಯನವರ ಚಿಂತನೆ, ಆದರ್ಶ, ವೈಜ್ಞಾನಿಕ ಮನೋಭಾವ, ಸರಳತೆ, ಬಹಳ ಮುಖ್ಯವಾಗಿ ಪ್ರಶ್ನಿಸುವ ಮನೋಭಾವ ಇವುಗಳನ್ನು ಇಂದಿನ ಜನಮಾನಸಕ್ಕೆ ಪರಿಚಯಿಸುವ ಅಗತ್ಯವಿದೆ. 2020ಕ್ಕೆ ಡಾ. ಎಚ್.ನರಸಿಂಹಯ್ಯ ಅವರು ಜನಿಸಿ ಒಂದು ಶತಮಾನವಾದ ಹಿನ್ನೆಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅವರ ಭಾವಚಿತ್ರದ ಸಾವಿರಾರು ಪ್ರತಿ ಮಾಡಿಸಿ ಮನೆ ಮನೆಗಳಿಗೆ, ಶಾಲೆ ಕಾಲೇಜುಗಳಿಗೆ ತಲುಪಿಸಿ ಡಾ. ಹೆಚ್ ನರಸಿಂಹಯ್ಯ ಅವರ ಚಿಂತನೆಗಳನ್ನು ಹರಡುವ ಪ್ರಯತ್ನ ಮಾಡಲಾಗಿದೆ ಎಂದರು.

ವಿಜ್ಞಾನದೆಡೆಗೆ ನಮ್ಮ ನಡಿಗೆ :

 ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ  ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಬೆಂಗಳೂರಿನ ಬಸವನಗುಡಿ, ನ್ಯಾಷನಲ್ ಕಾಲೇಜಿನಲ್ಲಿ ಜ.27ರಂದು  ಆರಂಭವಾಗಲಿದ್ದು, ಜ.28ರಂದು ರಾಜಾನುಕುಂಟೆ, ಮಾರಸಂದ್ರ, ಬಾಶೆಟ್ಟಿಹಳ್ಳಿ ಮೂಲಕ ದೊಡ್ಡಬಳ್ಳಾಪುರಕ್ಕೆ ಆಗಮಿಸಲಿದ್ದು ರಾತ್ರಿ ತಂಗಲಿದೆ. ನಂತರ ಗೌರಿಬಿದನೂರು ಮಾರ್ಗವಾಗಿ ಹೊಸೂರು ತಲುಪಿ ಹೊಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭ ಮುಗಿಸಿಕೊಂಡು ಡಾ. ಹೆಚ್.ನರಸಿಂಹಯ್ಯ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ವಿದುರಾಶ್ವತ್ಥದ ವೀರಸೌಧಕ್ಕೆ ಭೇಟಿ ನೀಡಬಹುದು. ಪಾದಯಾತ್ರೆಯ ಮಾರ್ಗದುದ್ದಕ್ಕೂ ವೈಜ್ಞಾನಿಕ ಚಿಂತನೆಗೆ ಸಂಬಂಸಿದ ಬೀದಿ ನಾಟಕ ಪ್ರದರ್ಶನ, ಪವಾಡ ರಹಸ್ಯ ಬಯಲು, ಚರ್ಚೆ, ಸಂವಾದ, ಕಡಿಮೆ ಬೆಲೆಯ ಪುಸ್ತಕಗಳ ಮಾರಾಟ, ಮಾರ್ಗದುದ್ದಕ್ಕೂ ಯಾತ್ರೆಯ ನೆನಪಿಗಾಗಿ 100 ಸಸಿಗಳನ್ನು ನೆಡುವುದು ಮುಂತಾದ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ಪಾದಯಾತ್ರೆಯಲ್ಲಿ ಆಸಕ್ತರು ಐದೂ ದಿನ ಅಥವಾ ತಮಗೆ ಅನುಕೂಲವಾದ ದಿನ ಭಾಗವಹಿಸಬಹುದಾಗಿದೆ ಎಂದು ಮನವಿ ಮಾಡಿದರು.

ಈ ವೇಳೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಎಂ.ಲಕ್ಷ್ಮಿನರಸಿಂಹ, ಗೋವಿಂದರಾಜ ನಗರ ಕ್ಷೇತ್ರದ ಅಧ್ಯಕ್ಷ ಬಾಲಾಜಿರಾವ್, ಬೆಂ.ಗ್ರಾ. ಜಿಲ್ಲಾ ಘಟಕದ ಅಧ್ಯಕ್ಷ ತೂಬಗೆರೆ ಷರೀಫ್ ಹಾಜರಿದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

21 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago