ವೈಜ್ಞಾನಿಕ ಬೆಲೆ ನೀಡದಿದ್ದರೆ ಶೇ.90 ರಷ್ಟು ರೈತರು ಭೂಮಿ‌ ಕೊಡಲು ಒಪ್ಪುವುದಿಲ್ಲ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ

ರೈತರ ಫಲವತ್ತಾದ ಭೂಮಿಗೆ ವೈಜ್ಞಾನಿಕ ದರ ನೀಡುವಂತೆ ಒತ್ತಾಯಿಸಿ ಕಳೆದ ವಾರದಿಂದ ಈವರೆಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೆಐಎಡಿಬಿ ಅಧಿಕಾರಿಗಳು, ಮುಖ್ಯಕಾರ್ಯದರ್ಶಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನ ಭೇಟಿ ಮಾಡಲಾಗುತ್ತಿದೆ. ರೈತರ ಹೋರಾಟ, ಬೇಡಿಕೆ ಕುರಿತು‌ ಮನವರಿಕೆ ಮಾಡಿಕೊಡಲಾಗಿದೆ. ಜ.31 ರಂದು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ‌ ಮಾಡಿ‌ ರೈತರ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದೇವೆ. ಫೆ.5ರೊಳಗೆ ಸ್ಪಂದಿಸುವ ಭರವಸೆಯನ್ನು ಕೈಗಾರಿಕಾ ಸಚಿವರು ನೀಡಿದ್ದಾರೆ. ಕೆಐಎಡಿಬಿ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಖುದ್ದು ಕುಮಾರಸ್ವಾಮಿಯವರೇ ರೈತರ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಹೇಳಿದರು.

ಕೊನಘಟ್ಟದ ಕಾಮನಬಂಡೆ ಸಮೀಪ ಕೊನಘಟ್ಟ, ನಾಗದೇನಹಳ್ಳಿ, ಕೋಡಿಹಳ್ಳಿ ಹಾಗೂ ಆದಿನಾರಾಯಣಹೊಸಹಳ್ಳಿ ರೈತರು ಕೆಐಎಡಿಬಿ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಅಧಿಕಾರಿಗಳಿಗೆ ಸಾಕಷ್ಟು ಮನವಿ‌ ಕೊಟ್ಟಾಗ ಭೂಸ್ವಾಧೀನ ಪ್ರಕ್ರಿಯೆ‌ ಮುಗಿದಿದೆ. ಡಿನೋಟಿಫೈ ಮಾಡುವ ಅಧಿಕಾರ ನಮಗಿಲ್ಲ. ಸರ್ಕಾರವೇ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಫೆ.1 ರಂದು ಕೈಗಾರಿಕಾ‌ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ದೇವನಹಳ್ಳಿ ರೈತರಿಗೆ ಕೊಟ್ಟ‌ ಮಾದರಿಯಲ್ಲೇ ನಮ್ಮ ರೈತರಿಗೂ ಪರಿಹಾರ ಕೊಡಬೇಕು‌ ಎಂದು ಒತ್ತಾಯಿಸಿದ್ದೇವೆ ಎಂದರು.

ಸಚಿವರ ಬಳಿಗೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಕೂಡ ಬಂದಿದ್ದರು. ಫೆ.5 ರೊಳಗೆ ಅಧಿಕಾರಿಗಳು, ಮುಖಂಡರ ಸಭೆ ಕರೆಯುವ ಭರವಸೆ ನೀಡಿದ್ದಾರೆ. ಒಂದು ವೇಳೆ ನಿಗದಿತ ದಿನದೊಳಗೆ ಸಮಸ್ಯೆ ಇತ್ಯರ್ಥವಾಗದಿದ್ದರೆ ಬೃಹತ್ ಪ್ರತಿಭಟನೆ ನಡೆಸಿ, ಕಾನೂನು ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಹರೀಶ್ ಗೌಡ ಎಚ್ಚರಿಸಿದರು.

ವೈಜ್ಞಾನಿಕ ಬೆಲೆ ನೀಡದಿದ್ದರೆ ಶೇ.90 ರಷ್ಟು ರೈತರು ಭೂಮಿ‌ ಕೊಡಲು ಒಪ್ಪುವುದಿಲ್ಲ. ಒಬ್ಬರೋ, ಇಬ್ಬರೋ ಮಾತ್ರ ಪರಿಹಾರ ಪಡೆಯಲು ಕೆಐಎಡಿಬಿ ಅಧಿಕಾರಿಗಳ ಬಳಿ ಹೋದರೆ ಸಾಕಷ್ಟು ರೈತರ ಹೊಟ್ಟೆಗೆ ಹೊಡೆದಂತಾಗುತ್ತದೆ. ಹಾಗಾಗಿ ಎಲ್ಲ ರೈತರು,ಮುಖಂಡರು‌ ಒಗ್ಗಟ್ಟಾಗಿ ಹೋರಾಟ ಮುಂದುವರಿಸಬೇಕು ಎಂದು ಹೇಳಿದರು.

ಕೋಡಿಹಳ್ಳಿ ಭಾಗದಲ್ಲಿ ಕೆಐಎಡಿಬಿಯವರು ದೌರ್ಜನ್ಯ ಮಾಡುತ್ತಿದ್ದಾರೆ. ಮುಂದೆ ಎಲ್ಲ ಹೋಬಳಿಗಳಲ್ಲೂ ಇಂತಹ ಪರಿಸ್ಥಿತಿ ಬರಬಹುದು. ಆದ್ದರಿಂದ ಎಲ್ಲ ರೈತರು, ಸಂಘಟನೆಗಳು, ರಾಜಕೀಯ ಪಕ್ಷಗಳು ರೈತರ ಹೋರಾಟ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ನಂತರ ಮುಖಂಡ ನಾಗದೇನಹಳ್ಳಿ ಆನಂದಮೂರ್ತಿ ಮಾತನಾಡಿ, ಕೆಐಎಡಿಬಿ ದಬ್ಬಾಳಿಕೆಗೆ ನಾವೆಲ್ಲ‌ ನಲುಗಿ ಹೋಗಿದ್ದೇವೆ. ಯಾವುದೇ ಬೆಲೆ ನಿಗದಿ ಮಾಡದೇ ಭೂಮಿ ಸ್ವಾಧೀನ‌ ಮಾಡಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಭೂಮಿಗೆ ಮಾರುಕಟ್ಟೆ ಬೆಲೆ ನಿಗದಿ ಮಾಡದೇ ನಮ್ಮ ಜಮೀನು ಪಡೆಯಲು ಕೆಐಎಡಿಬಿ ಹಾಗೂ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

ಜೀವನಾಧಾರವಾದ ಭೂಮಿಯನ್ನು ಪ್ರಾಣ ಹೋದರೂ ಕೊಡಲ್ಲ. ಫೆ. 12 ರಿಂದ ಆರಂಭವಾಗುವ ಅಧಿವೇಶನದಲ್ಲಿ ಶಾಸಕರಾದಿಯಾಗಿ ಎಲ್ಲರು ಇದರ ವಿರುದ್ದ ದನಿ ಎತ್ತಬೇಕು. ಅಧಿವೇಶನದಲ್ಲೇ ಭೂಸ್ವಾಧೀನ‌ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದರು.

ಟಿಎಪಿಎಂಸಿಎಸ್ ಮಾಜಿ ಅಧ್ಯಕ್ಷ ಆನಂದ್, ಮಾತನಾಡಿ, ಭೂಸ್ವಾಧೀನ‌ ಕಾಯ್ದೆಯ ಪ್ರಕಾರ ರೈತರ ಭೂಮಿಗೆ ನಾಲ್ಕು ಪಟ್ಟು ಪರಿಹಾರ ನೀಡಬೇಕು. ಇಲ್ಲವಾದರೆ ಭೂಮಿ ಬಿಟ್ಟುಕೊಡುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ‌ ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

17 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago