ವೈಜ್ಞಾನಿಕ ಬೆಲೆ ನೀಡದಿದ್ದರೆ ಶೇ.90 ರಷ್ಟು ರೈತರು ಭೂಮಿ‌ ಕೊಡಲು ಒಪ್ಪುವುದಿಲ್ಲ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ

ರೈತರ ಫಲವತ್ತಾದ ಭೂಮಿಗೆ ವೈಜ್ಞಾನಿಕ ದರ ನೀಡುವಂತೆ ಒತ್ತಾಯಿಸಿ ಕಳೆದ ವಾರದಿಂದ ಈವರೆಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೆಐಎಡಿಬಿ ಅಧಿಕಾರಿಗಳು, ಮುಖ್ಯಕಾರ್ಯದರ್ಶಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನ ಭೇಟಿ ಮಾಡಲಾಗುತ್ತಿದೆ. ರೈತರ ಹೋರಾಟ, ಬೇಡಿಕೆ ಕುರಿತು‌ ಮನವರಿಕೆ ಮಾಡಿಕೊಡಲಾಗಿದೆ. ಜ.31 ರಂದು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ‌ ಮಾಡಿ‌ ರೈತರ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದೇವೆ. ಫೆ.5ರೊಳಗೆ ಸ್ಪಂದಿಸುವ ಭರವಸೆಯನ್ನು ಕೈಗಾರಿಕಾ ಸಚಿವರು ನೀಡಿದ್ದಾರೆ. ಕೆಐಎಡಿಬಿ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಖುದ್ದು ಕುಮಾರಸ್ವಾಮಿಯವರೇ ರೈತರ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಹೇಳಿದರು.

ಕೊನಘಟ್ಟದ ಕಾಮನಬಂಡೆ ಸಮೀಪ ಕೊನಘಟ್ಟ, ನಾಗದೇನಹಳ್ಳಿ, ಕೋಡಿಹಳ್ಳಿ ಹಾಗೂ ಆದಿನಾರಾಯಣಹೊಸಹಳ್ಳಿ ರೈತರು ಕೆಐಎಡಿಬಿ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಅಧಿಕಾರಿಗಳಿಗೆ ಸಾಕಷ್ಟು ಮನವಿ‌ ಕೊಟ್ಟಾಗ ಭೂಸ್ವಾಧೀನ ಪ್ರಕ್ರಿಯೆ‌ ಮುಗಿದಿದೆ. ಡಿನೋಟಿಫೈ ಮಾಡುವ ಅಧಿಕಾರ ನಮಗಿಲ್ಲ. ಸರ್ಕಾರವೇ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಫೆ.1 ರಂದು ಕೈಗಾರಿಕಾ‌ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ದೇವನಹಳ್ಳಿ ರೈತರಿಗೆ ಕೊಟ್ಟ‌ ಮಾದರಿಯಲ್ಲೇ ನಮ್ಮ ರೈತರಿಗೂ ಪರಿಹಾರ ಕೊಡಬೇಕು‌ ಎಂದು ಒತ್ತಾಯಿಸಿದ್ದೇವೆ ಎಂದರು.

ಸಚಿವರ ಬಳಿಗೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಕೂಡ ಬಂದಿದ್ದರು. ಫೆ.5 ರೊಳಗೆ ಅಧಿಕಾರಿಗಳು, ಮುಖಂಡರ ಸಭೆ ಕರೆಯುವ ಭರವಸೆ ನೀಡಿದ್ದಾರೆ. ಒಂದು ವೇಳೆ ನಿಗದಿತ ದಿನದೊಳಗೆ ಸಮಸ್ಯೆ ಇತ್ಯರ್ಥವಾಗದಿದ್ದರೆ ಬೃಹತ್ ಪ್ರತಿಭಟನೆ ನಡೆಸಿ, ಕಾನೂನು ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಹರೀಶ್ ಗೌಡ ಎಚ್ಚರಿಸಿದರು.

ವೈಜ್ಞಾನಿಕ ಬೆಲೆ ನೀಡದಿದ್ದರೆ ಶೇ.90 ರಷ್ಟು ರೈತರು ಭೂಮಿ‌ ಕೊಡಲು ಒಪ್ಪುವುದಿಲ್ಲ. ಒಬ್ಬರೋ, ಇಬ್ಬರೋ ಮಾತ್ರ ಪರಿಹಾರ ಪಡೆಯಲು ಕೆಐಎಡಿಬಿ ಅಧಿಕಾರಿಗಳ ಬಳಿ ಹೋದರೆ ಸಾಕಷ್ಟು ರೈತರ ಹೊಟ್ಟೆಗೆ ಹೊಡೆದಂತಾಗುತ್ತದೆ. ಹಾಗಾಗಿ ಎಲ್ಲ ರೈತರು,ಮುಖಂಡರು‌ ಒಗ್ಗಟ್ಟಾಗಿ ಹೋರಾಟ ಮುಂದುವರಿಸಬೇಕು ಎಂದು ಹೇಳಿದರು.

ಕೋಡಿಹಳ್ಳಿ ಭಾಗದಲ್ಲಿ ಕೆಐಎಡಿಬಿಯವರು ದೌರ್ಜನ್ಯ ಮಾಡುತ್ತಿದ್ದಾರೆ. ಮುಂದೆ ಎಲ್ಲ ಹೋಬಳಿಗಳಲ್ಲೂ ಇಂತಹ ಪರಿಸ್ಥಿತಿ ಬರಬಹುದು. ಆದ್ದರಿಂದ ಎಲ್ಲ ರೈತರು, ಸಂಘಟನೆಗಳು, ರಾಜಕೀಯ ಪಕ್ಷಗಳು ರೈತರ ಹೋರಾಟ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ನಂತರ ಮುಖಂಡ ನಾಗದೇನಹಳ್ಳಿ ಆನಂದಮೂರ್ತಿ ಮಾತನಾಡಿ, ಕೆಐಎಡಿಬಿ ದಬ್ಬಾಳಿಕೆಗೆ ನಾವೆಲ್ಲ‌ ನಲುಗಿ ಹೋಗಿದ್ದೇವೆ. ಯಾವುದೇ ಬೆಲೆ ನಿಗದಿ ಮಾಡದೇ ಭೂಮಿ ಸ್ವಾಧೀನ‌ ಮಾಡಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಭೂಮಿಗೆ ಮಾರುಕಟ್ಟೆ ಬೆಲೆ ನಿಗದಿ ಮಾಡದೇ ನಮ್ಮ ಜಮೀನು ಪಡೆಯಲು ಕೆಐಎಡಿಬಿ ಹಾಗೂ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

ಜೀವನಾಧಾರವಾದ ಭೂಮಿಯನ್ನು ಪ್ರಾಣ ಹೋದರೂ ಕೊಡಲ್ಲ. ಫೆ. 12 ರಿಂದ ಆರಂಭವಾಗುವ ಅಧಿವೇಶನದಲ್ಲಿ ಶಾಸಕರಾದಿಯಾಗಿ ಎಲ್ಲರು ಇದರ ವಿರುದ್ದ ದನಿ ಎತ್ತಬೇಕು. ಅಧಿವೇಶನದಲ್ಲೇ ಭೂಸ್ವಾಧೀನ‌ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದರು.

ಟಿಎಪಿಎಂಸಿಎಸ್ ಮಾಜಿ ಅಧ್ಯಕ್ಷ ಆನಂದ್, ಮಾತನಾಡಿ, ಭೂಸ್ವಾಧೀನ‌ ಕಾಯ್ದೆಯ ಪ್ರಕಾರ ರೈತರ ಭೂಮಿಗೆ ನಾಲ್ಕು ಪಟ್ಟು ಪರಿಹಾರ ನೀಡಬೇಕು. ಇಲ್ಲವಾದರೆ ಭೂಮಿ ಬಿಟ್ಟುಕೊಡುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ‌ ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

14 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

16 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

17 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

21 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

23 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago