ವೈಜ್ಞಾನಿಕ ಬೆಲೆ ನೀಡದಿದ್ದರೆ ಶೇ.90 ರಷ್ಟು ರೈತರು ಭೂಮಿ‌ ಕೊಡಲು ಒಪ್ಪುವುದಿಲ್ಲ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ

ರೈತರ ಫಲವತ್ತಾದ ಭೂಮಿಗೆ ವೈಜ್ಞಾನಿಕ ದರ ನೀಡುವಂತೆ ಒತ್ತಾಯಿಸಿ ಕಳೆದ ವಾರದಿಂದ ಈವರೆಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೆಐಎಡಿಬಿ ಅಧಿಕಾರಿಗಳು, ಮುಖ್ಯಕಾರ್ಯದರ್ಶಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನ ಭೇಟಿ ಮಾಡಲಾಗುತ್ತಿದೆ. ರೈತರ ಹೋರಾಟ, ಬೇಡಿಕೆ ಕುರಿತು‌ ಮನವರಿಕೆ ಮಾಡಿಕೊಡಲಾಗಿದೆ. ಜ.31 ರಂದು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ‌ ಮಾಡಿ‌ ರೈತರ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದೇವೆ. ಫೆ.5ರೊಳಗೆ ಸ್ಪಂದಿಸುವ ಭರವಸೆಯನ್ನು ಕೈಗಾರಿಕಾ ಸಚಿವರು ನೀಡಿದ್ದಾರೆ. ಕೆಐಎಡಿಬಿ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಖುದ್ದು ಕುಮಾರಸ್ವಾಮಿಯವರೇ ರೈತರ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಹೇಳಿದರು.

ಕೊನಘಟ್ಟದ ಕಾಮನಬಂಡೆ ಸಮೀಪ ಕೊನಘಟ್ಟ, ನಾಗದೇನಹಳ್ಳಿ, ಕೋಡಿಹಳ್ಳಿ ಹಾಗೂ ಆದಿನಾರಾಯಣಹೊಸಹಳ್ಳಿ ರೈತರು ಕೆಐಎಡಿಬಿ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಅಧಿಕಾರಿಗಳಿಗೆ ಸಾಕಷ್ಟು ಮನವಿ‌ ಕೊಟ್ಟಾಗ ಭೂಸ್ವಾಧೀನ ಪ್ರಕ್ರಿಯೆ‌ ಮುಗಿದಿದೆ. ಡಿನೋಟಿಫೈ ಮಾಡುವ ಅಧಿಕಾರ ನಮಗಿಲ್ಲ. ಸರ್ಕಾರವೇ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಫೆ.1 ರಂದು ಕೈಗಾರಿಕಾ‌ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ದೇವನಹಳ್ಳಿ ರೈತರಿಗೆ ಕೊಟ್ಟ‌ ಮಾದರಿಯಲ್ಲೇ ನಮ್ಮ ರೈತರಿಗೂ ಪರಿಹಾರ ಕೊಡಬೇಕು‌ ಎಂದು ಒತ್ತಾಯಿಸಿದ್ದೇವೆ ಎಂದರು.

ಸಚಿವರ ಬಳಿಗೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಕೂಡ ಬಂದಿದ್ದರು. ಫೆ.5 ರೊಳಗೆ ಅಧಿಕಾರಿಗಳು, ಮುಖಂಡರ ಸಭೆ ಕರೆಯುವ ಭರವಸೆ ನೀಡಿದ್ದಾರೆ. ಒಂದು ವೇಳೆ ನಿಗದಿತ ದಿನದೊಳಗೆ ಸಮಸ್ಯೆ ಇತ್ಯರ್ಥವಾಗದಿದ್ದರೆ ಬೃಹತ್ ಪ್ರತಿಭಟನೆ ನಡೆಸಿ, ಕಾನೂನು ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಹರೀಶ್ ಗೌಡ ಎಚ್ಚರಿಸಿದರು.

ವೈಜ್ಞಾನಿಕ ಬೆಲೆ ನೀಡದಿದ್ದರೆ ಶೇ.90 ರಷ್ಟು ರೈತರು ಭೂಮಿ‌ ಕೊಡಲು ಒಪ್ಪುವುದಿಲ್ಲ. ಒಬ್ಬರೋ, ಇಬ್ಬರೋ ಮಾತ್ರ ಪರಿಹಾರ ಪಡೆಯಲು ಕೆಐಎಡಿಬಿ ಅಧಿಕಾರಿಗಳ ಬಳಿ ಹೋದರೆ ಸಾಕಷ್ಟು ರೈತರ ಹೊಟ್ಟೆಗೆ ಹೊಡೆದಂತಾಗುತ್ತದೆ. ಹಾಗಾಗಿ ಎಲ್ಲ ರೈತರು,ಮುಖಂಡರು‌ ಒಗ್ಗಟ್ಟಾಗಿ ಹೋರಾಟ ಮುಂದುವರಿಸಬೇಕು ಎಂದು ಹೇಳಿದರು.

ಕೋಡಿಹಳ್ಳಿ ಭಾಗದಲ್ಲಿ ಕೆಐಎಡಿಬಿಯವರು ದೌರ್ಜನ್ಯ ಮಾಡುತ್ತಿದ್ದಾರೆ. ಮುಂದೆ ಎಲ್ಲ ಹೋಬಳಿಗಳಲ್ಲೂ ಇಂತಹ ಪರಿಸ್ಥಿತಿ ಬರಬಹುದು. ಆದ್ದರಿಂದ ಎಲ್ಲ ರೈತರು, ಸಂಘಟನೆಗಳು, ರಾಜಕೀಯ ಪಕ್ಷಗಳು ರೈತರ ಹೋರಾಟ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ನಂತರ ಮುಖಂಡ ನಾಗದೇನಹಳ್ಳಿ ಆನಂದಮೂರ್ತಿ ಮಾತನಾಡಿ, ಕೆಐಎಡಿಬಿ ದಬ್ಬಾಳಿಕೆಗೆ ನಾವೆಲ್ಲ‌ ನಲುಗಿ ಹೋಗಿದ್ದೇವೆ. ಯಾವುದೇ ಬೆಲೆ ನಿಗದಿ ಮಾಡದೇ ಭೂಮಿ ಸ್ವಾಧೀನ‌ ಮಾಡಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಭೂಮಿಗೆ ಮಾರುಕಟ್ಟೆ ಬೆಲೆ ನಿಗದಿ ಮಾಡದೇ ನಮ್ಮ ಜಮೀನು ಪಡೆಯಲು ಕೆಐಎಡಿಬಿ ಹಾಗೂ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

ಜೀವನಾಧಾರವಾದ ಭೂಮಿಯನ್ನು ಪ್ರಾಣ ಹೋದರೂ ಕೊಡಲ್ಲ. ಫೆ. 12 ರಿಂದ ಆರಂಭವಾಗುವ ಅಧಿವೇಶನದಲ್ಲಿ ಶಾಸಕರಾದಿಯಾಗಿ ಎಲ್ಲರು ಇದರ ವಿರುದ್ದ ದನಿ ಎತ್ತಬೇಕು. ಅಧಿವೇಶನದಲ್ಲೇ ಭೂಸ್ವಾಧೀನ‌ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದರು.

ಟಿಎಪಿಎಂಸಿಎಸ್ ಮಾಜಿ ಅಧ್ಯಕ್ಷ ಆನಂದ್, ಮಾತನಾಡಿ, ಭೂಸ್ವಾಧೀನ‌ ಕಾಯ್ದೆಯ ಪ್ರಕಾರ ರೈತರ ಭೂಮಿಗೆ ನಾಲ್ಕು ಪಟ್ಟು ಪರಿಹಾರ ನೀಡಬೇಕು. ಇಲ್ಲವಾದರೆ ಭೂಮಿ ಬಿಟ್ಟುಕೊಡುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ‌ ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

46 minutes ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago