*ಬೆಂಗಳೂರು, ಡಿಸೆಂಬರ್ 5, 2025*: ಬೆಸ್ಕಾಂನ ವೈಟ್ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಮಾನ್ಯ ಶ್ರೀ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಉದ್ಘಾಟಿಸಿದರು.
ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಇದುವರೆಗೆ ವೈಟ್ಫೀಲ್ಡ್ ವಿಭಾಗ ಹಾಗೂ ಇ-4 ಉಪವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಇಮ್ಮಡಿಹಳ್ಲಿ ಮುಖ್ಯರಸ್ತೆಯ ಗಾಂಧೀಪುರದಲ್ಲಿ ನಿರ್ಮಾಣಗೊಂಡಿರುವ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿದ್ದು ಗ್ರಾಹಕರಿಗೆ ಅನುಕೂಲಕರವಾಗಲಿದೆ,” ಎಂದರು.
ಈ ಜಾಗ ಪಡೆಯಲು ನೆರವಾದ ಶಾಸಕಿ ಮಂಜುಳಾ ಅರವಿಂದ್ ಲಿಂಬಾವಳಿ ಅವರಿಗೆ ಧನ್ಯವಾದ ಹೇಳಿದ ಸಚಿವರು, “ನಗರದ ಪ್ರಮುಖ ಪ್ರದೇಶವಾಗಿರುವ ವೈಟ್ಫೀಲ್ಡ್ನಲ್ಲಿ ವಿಭಾಗದಲ್ಲಿ 3,88,917 ಕ್ಕೂ ಹೆಚ್ಚಿನ ಗ್ರಾಹಕರಿದ್ದಾರೆ. ಸಾರ್ವಜನಿಕರಿಗೆ ನೂತನ ಕಚೇರಿ ಬೆಸ್ಕಾಂನ ಹತ್ತು ಹಲವು ಸೇವೆಗಳನ್ನು ತ್ವರಿತವಾಗಿ ಒದಗಿಸಲು ನೆರವಾಗಲಿದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹದೇವಪುರ ಕ್ಷೇತ್ರ ಶಾಸಕಿ ಮಂಜುಳ ಅರವಿಂದ ಲಿಂಬಾವಳಿ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
*ಹೊಸ ಕಟ್ಟಡದ ವಿಶೇಷತೆ*
13,687 ಚದರ ಅಡಿಯ ನೆಲ ಅಂತಸ್ತು ಸೇರಿದಂತೆ ಮೂರು ಅಂತಸ್ತುಗಳ ಬೆಸ್ಕಾಂನ ವೈಟ್ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಉಪ ವಿಭಾಗ ಕಚೇರಿ ಕಟ್ಟಡವನ್ನು ಅಂದಾಜು 4.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…