*ಬೆಂಗಳೂರು, ಡಿಸೆಂಬರ್ 5, 2025*: ಬೆಸ್ಕಾಂನ ವೈಟ್ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಮಾನ್ಯ ಶ್ರೀ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಉದ್ಘಾಟಿಸಿದರು.
ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಇದುವರೆಗೆ ವೈಟ್ಫೀಲ್ಡ್ ವಿಭಾಗ ಹಾಗೂ ಇ-4 ಉಪವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಇಮ್ಮಡಿಹಳ್ಲಿ ಮುಖ್ಯರಸ್ತೆಯ ಗಾಂಧೀಪುರದಲ್ಲಿ ನಿರ್ಮಾಣಗೊಂಡಿರುವ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿದ್ದು ಗ್ರಾಹಕರಿಗೆ ಅನುಕೂಲಕರವಾಗಲಿದೆ,” ಎಂದರು.
ಈ ಜಾಗ ಪಡೆಯಲು ನೆರವಾದ ಶಾಸಕಿ ಮಂಜುಳಾ ಅರವಿಂದ್ ಲಿಂಬಾವಳಿ ಅವರಿಗೆ ಧನ್ಯವಾದ ಹೇಳಿದ ಸಚಿವರು, “ನಗರದ ಪ್ರಮುಖ ಪ್ರದೇಶವಾಗಿರುವ ವೈಟ್ಫೀಲ್ಡ್ನಲ್ಲಿ ವಿಭಾಗದಲ್ಲಿ 3,88,917 ಕ್ಕೂ ಹೆಚ್ಚಿನ ಗ್ರಾಹಕರಿದ್ದಾರೆ. ಸಾರ್ವಜನಿಕರಿಗೆ ನೂತನ ಕಚೇರಿ ಬೆಸ್ಕಾಂನ ಹತ್ತು ಹಲವು ಸೇವೆಗಳನ್ನು ತ್ವರಿತವಾಗಿ ಒದಗಿಸಲು ನೆರವಾಗಲಿದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹದೇವಪುರ ಕ್ಷೇತ್ರ ಶಾಸಕಿ ಮಂಜುಳ ಅರವಿಂದ ಲಿಂಬಾವಳಿ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
*ಹೊಸ ಕಟ್ಟಡದ ವಿಶೇಷತೆ*
13,687 ಚದರ ಅಡಿಯ ನೆಲ ಅಂತಸ್ತು ಸೇರಿದಂತೆ ಮೂರು ಅಂತಸ್ತುಗಳ ಬೆಸ್ಕಾಂನ ವೈಟ್ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಉಪ ವಿಭಾಗ ಕಚೇರಿ ಕಟ್ಟಡವನ್ನು ಅಂದಾಜು 4.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…