Categories: ಕೋಲಾರ

ವೈದ್ಯಕೀಯ ಕಾಲೇಜು ಸ್ಥಾಪನೆಗೆ ಡಿಪಿಆರ್ ತಯಾರಿಗೆ ಸೂಚನೆ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಲೋಕೋಪಯೋಗಿ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್‌ ಹೇಳಿದರು.

ನಗರದಲ್ಲಿ ಬುಧವಾರ ಸೋಮೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಪಿಆರ್‌ಗೆ ಅಂದಾಜು ವೆಚ್ಚ ಸಿದ್ಧವಾಗುತ್ತಿದ್ದು, ಅದನ್ನು ಸದ್ಯದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುವುದು. ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸ್ಯಾನಿಟೋರಿಯಂ ಜಾಗ ಸೇರಿದಂತೆ ಎರಡು ಕಡೆ ಸ್ಥಳ ಪರಿಶೀಲಿಸಿದ್ದೇವೆ. ಸದ್ಯದಲ್ಲೇ ಸೂಕ್ತ ಜಾಗ ಅಂತಿಮಗೊಳಿಸಲಾಗುವುದು ಎಂದರು.

ಕೋಲಾರ ನಗರದ ರಿಂಗ್‌ ರಸ್ತೆಗೆ ಡಿಪಿಆರ್‌ ಆಗಿದೆ. ಹೊಸ ಎಪಿಎಂಸಿ ಮಾರುಕಟ್ಟೆಗೆ 63 ಎಕರೆ ಜಾಗಕ್ಕೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ. ಇನ್ನು 40 ಎಕರೆ ಜಾಗ ಕೊಡಲು ಪ್ರಕ್ರಿಯೆ ನಡೆಯುತ್ತಿದೆ. ಅದಕ್ಕೂ ಸದ್ಯದಲ್ಲೇ ಒಪ್ಪಿಗೆ ಸಿಗಲಿದೆ. ಜಿಲ್ಲಾಧಿಕಾರಿಯಾಗಿದ್ದ ದಿವಂಗತ ಡಿ.ಕೆ.ರವಿ ಅವರು 17 ಎಕರೆ ಜಾಗವನ್ನು ಗಿಡ ಬೆಳೆಸಲು ಅರಣ್ಯ ಇಲಾಖೆಗೆ ನೀಡಿದ್ದರು. ಅಗತ್ಯವಿದ್ದಾಗ ವಾಪಸ್‌ ಪಡೆಯುವ ಷರತ್ತು ಕೂಡ ವಿಧಿಸಿದ್ದರು. ಹೀಗಾಗಿ, ಆ ಜಾಗ ಪಡೆದು ಅರಣ್ಯ ಇಲಾಖೆಗೆ ಬೇರೆ ಜಾಗ ಕೊಡುತ್ತೇವೆ. ಈವರೆಗೆ ಯಾರ ಕೈಯಲ್ಲೂ ಎಪಿಎಂಸಿಗೆ ಜಾಗ ಕೊಡಿಸುವ ಕೆಲಸ ನಡೆದಿರಲಿಲ್ಲ. ಈಗ ನಮ್ಮ ಅವಧಿಯಲ್ಲಿ ಜಾಗ ಕೊಡುತ್ತಿದ್ದೇವೆ ಎಂದರು.

ಕೋಲಾರ ನಗರ ಹಾಗೂ ತಾಲ್ಲೂಕಿನಲ್ಲಿ ನಾವೇನು ಕೆಲಸ ಮಾಡುತ್ತಿದ್ದೇವೆ ಎಂದು ನಾವು ಹೇಳುವುದಿಕ್ಕಿಂತ ಜನರೇ ಮಾತನಾಡುತ್ತಿದ್ದಾರೆ. ವೈದ್ಯಕೀಯ ಕಾಲೇಜು, ರಿಂಗ್‌ ರಸ್ತೆ, ಎಪಿಎಂಸಿಗೆ ಜಾಗದ ಬಗ್ಗೆ ಆದ್ಯತೆ ನೀಡಿದ್ದೇವೆ. ಆರೋಗ್ಯ ಭಾಗ್ಯ, ರೈತರಿಗೆ ಉತ್ತಮ ಬೆಲೆ ದೊರಕಿಸಿಕೊಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿ, ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ. ಹಿಂದೆಯೂ ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದಿತ್ತು. ಚುನಾವಣೆ ಎಂದ ಮೇಲೆ ಗೊಂದಲ, ಜಗಳ ಸಹಜ ಎಂದು ನುಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲೂರಿಗೆ ಏಪ್ರಿಲ್‌ 1ಕ್ಕೆ ಬರಬೇಕಿತ್ತು. ಅದನ್ನು ಮುಂದೂಡಲಾಗಿದ್ದು, ಏ.15ರ ನಂತರ ಭೇಟಿ ನೀಡಲಿದ್ದಾರೆ. ಕೋಲಾರಕ್ಕೂ ನಂತರದ ದಿನಗಳಲ್ಲಿ ಬರಲಿದ್ದಾರೆ. ದೇವನಹಳ್ಳಿ, ವೇಮಗಲ್‌, ನರಸಾಪುರ, ಮಾಲೂರು, ಹೊಸೂರು ಹೆದ್ದಾರಿ ರಸ್ತೆಗೂ ಆಗ ಚಾಲನೆ ನೀಡಲಿದ್ದಾರೆ. ಈಗಾಗಲೇ ನಾಲ್ಕು ಪಥಗಳ ಈ ರಸ್ತೆಗೆ ಟೆಂಡರ್‌ ಆಗಿದ್ದು, 150 ಎಂಜಿನಿಯರ್‌ಗಳು ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದರು.

ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವುದಷ್ಟೇ ಕೆ.ಸಿ.ವ್ಯಾಲಿ ಯೋಜನೆಯ ಉದ್ದೇಶವಾಗಿದೆ. ಹಿಂದೆ ನಮ್ಮಲ್ಲಿ 2 ಸಾವಿರ ಅಡಿ ಕೊಳವೆ ಬಾವಿ ತೋಡಿದರೂ ನೀರು ಬರುತ್ತಿರಲಿಲ್ಲ. ಹೀಗಾಗಿ, ಎರಡನೇ ಹಂತದ ಶುದ್ಧೀಕರಣ ಮಾಡಿ ನೀರು ತಂದೆವು ಎಂದು ಹೇಳಿದರು.

ಅರಹಳ್ಳಿ ವಿವಿಧೋದ್ದೇಶದ ಪ್ರಾಥಮಿಕ ಕೃಷಿ ಗ್ರಾಮೀಣ ಸಂಘದ ಚುನಾವಣೆ ಇದೆ. ಕಾಂಗ್ರೆಸ್‌ ಬೆಂಬಲಿತ 12 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದು, ಸೋಮೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಎಲ್ಲರೂ ಸೊಸೈಟಿ ನಿರ್ದೇಶಕರಾಗಲು ಅರ್ಹರಿದ್ದು, ಕೆಲಸ ಮಾಡುವಂಥವರು. ಇವರಿಗೆ ಷೇರುದಾರರು ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಹಾಗೂ ಜೆಡಿಎಸ್‌ನವರು ಕೂಡ ದೇವರ ಮೊರೆ ಹೋಗಿದ್ದಾರೆ ಎಂಬ ಪ್ರಶ್ನೆಗೆ, ಬಿಜೆಪಿ–ಜೆಡಿಎಸ್‌ನವರು ದೇವರ ಮೊರೆ ಹೋಗಿರುವುದು ಸಂತೋಷದ ವಿಚಾರ. ಆದರೆ, ದೇವರು ಷೇರುದಾರರಿಗೆ ಆಶೀರ್ವಾದ ಮಾಡಲಿದ್ದು, ಅವರು ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಹಾಫ್ ಕಾಮ್ಸ್ ಮಾಜಿ ಅಧ್ಯಕ್ಷ ಅರಹಳ್ಳಿ ಗೋಪಾಲಕೃಷ್ಣ, ಸೊಸೈಟಿ ಹಾಲಿ ಅಧ್ಯಕ್ಷ ಶ್ರೀನಿವಾಸ್, ಕೋಲಾರ ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಕಿಲಾರಿಪೇಟೆ ಮಣಿ, ಗಂಗಣ್ಣ, ಅಮರನಾಥ್, ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜಯನಗರ ಮಂಜುನಾಥ್‌ ಸೇರಿದಂತೆ ಅಭ್ಯರ್ಥಿಗಳು ಕಾಂಗ್ರೆಸ್ ಮುಖಂಡರು ಇದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

2 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

5 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

10 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

12 hours ago