Categories: Crime

ವೈದ್ಯನಿಂದ ಪಿಡ್ಲ್ಬೂಡಿ ಎಫ್ ಡಿಎ ಗೆ ದೋಖಾ…10.50 ಲಕ್ಷ ಕ್ಯಾಶ್, ಚಿನ್ನಾಭರಣ, ಬೆಳ್ಳಿಗೆ ಉಂಡೆನಾಮ…ನೊಂದ ಮಹಿಳೆಯಿಂದ ಪ್ರಕರಣ ದಾಖಲು…

ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಗೆ ನಯವಂಚಕ ವೈದ್ಯನೊಬ್ಬ ಮರಳುಮಾತನಾಡಿ 10.50 ಲಕ್ಷ ಹಣ,500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ಬೆಳ್ಳಿ ಗೆ ಉಂಡೆನಾಮ ಇಟ್ಟಿದ್ದಾನೆ.ವಂಚನೆಗೆ ಒಳಗಾದ ಮಹಿಳೆ ವೈದ್ಯನ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ವೇತಾ ಮಹಂತೇಶ್(46) ವಂಚನೆಗೆ ಒಳಗಾದವರು. ಡಾ.ಶಿವಕುಮಾರ್ ವಂಚಿಸಿದ ವೈದ್ಯ.

ಕರೊನಾ ಸಂಧರ್ಭದಲ್ಲಿ ಶ್ವೇತಾ ತಮ್ಮ ಪತಿ ಮಹಂತೇಶ್ ಹಾಗೂ ಮಗ ಇಕ್ಷುಧನ್ವ ಇಬ್ಬರನ್ನೂ ಕಳೆದುಕೊಂಡಿದ್ದರು. ಮಹಂತೇಶ್ ಲೋಕೋಪಯೋಗಿ ಇಲಾಖೆಯಲ್ಲಿ ಎಫ್.ಡಿ.ಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪತಿಯ ಸಾವಿನ ನಂತೆ ಅನುಕಂಪದ ಆಧಾರದ ಮೇಲೆ ಪತ್ನಿ ಶ್ವೇತಾ ರವರಿಗೆ ಕೆಲಸ ದೊರೆತಿತ್ತು. ಪತಿಯ ಕೆಲಸ ಧಕ್ಕಿಸಿಕೊಂಡ ಶ್ವೇತಾ ರವರ ಬಾಳಿಗೆ ಎಂಟ್ರಿ ಕೊಟ್ಟವನು ಡಾ.ಶಿವಕುಮಾರ್.

ಫೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಮನೆಗೆ ಬಂದ ಡಾ.ಶಿವಕುಮಾರ್ ನಯವಾದ ಮಾತುಗಳಿಂದ ನಂಬಿಸಿ ಶ್ವೇತಾ ರವರ ಬಳಿ ಇದ್ದ 500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ತೂಕದ 110 ಬೆಳ್ಳಿ ನಾಣ್ಯಗಳನ್ನ ತನ್ನ ಹೆಸರಿನಲ್ಲಿ ಆಕ್ಸಿಸ್ ಬ್ಯಾಂಕ್ ಲಾಕರ್ ಓಪನ್ ಮಾಡಿಸಿದರು. ಸುರಕ್ಷತೆ ಹೆಸರ ಹೇಳಿ ಲಾಕರ್ ಕೀ ಗಳನ್ನ ಶ್ವೇತಾ ಬಳಿ ಇರಿಸಿದ್ದರು. ನಂತರ ಹೆಚ್ಚಿನ ಲಾಭದ ಆಮಿಷ ತೋರಿಸಿ ಶ್ವೇತಾ ಬಳಿ ಇದ್ದ 10.50 ಲಕ್ಷ ಹಣವನ್ನ ಡಾ.ಶಿವಕುಮಾರ್ ವರ್ಗಾವಣೆ ಮಾಡಿಸಿಕೊಂಡರು.

ಇದಾದ ಕೆಲವೇ ದಿನಗಳಲ್ಲಿ ಲಾಕರ್ ನಲ್ಲಿದ್ದ ವಜ್ರದ ಉಂಗುರ ಡಾ.ಶಿವಕುಮಾರ್ ಬೆರಳಿನಲ್ಲಿ ಕಾಣಿಸಿದೆ. ಲಾಕರ್ ಕೀ ನನ್ನ ಬಳಿ ಇರುವಾಗ ವಜ್ರದ ಉಂಗುರ ಹೇಗೆ ಬಂತು ಎಂದು ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿಲ್ಲ. ನಂತರ ಪರಿಶೀಲಿಸಿದಾಗ ಲಾಕರ್ ನಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ಪದಾರ್ಥಗಳು ಡಾ.ಶಿವಕುಮಾರ್ ಪಾಲಾಗಿತ್ತು.

ತನ್ನ ಚಿನ್ನಾಭರಣ ಬೆಳ್ಳಿ ಹಾಗೂ ನಗದು ಹಣವನ್ನ ಹಿಂದಿರುಗಿಸುವಂತೆ ಕೇಳಿದಾಗ ಡಾ.ಶಿವಕುಮಾರ್ ಜೀವಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ಶ್ವೇತಾ ರವರು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ…

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

4 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

4 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

7 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

7 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

16 hours ago