ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಗೆ ನಯವಂಚಕ ವೈದ್ಯನೊಬ್ಬ ಮರಳುಮಾತನಾಡಿ 10.50 ಲಕ್ಷ ಹಣ,500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ಬೆಳ್ಳಿ ಗೆ ಉಂಡೆನಾಮ ಇಟ್ಟಿದ್ದಾನೆ.ವಂಚನೆಗೆ ಒಳಗಾದ ಮಹಿಳೆ ವೈದ್ಯನ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ವೇತಾ ಮಹಂತೇಶ್(46) ವಂಚನೆಗೆ ಒಳಗಾದವರು. ಡಾ.ಶಿವಕುಮಾರ್ ವಂಚಿಸಿದ ವೈದ್ಯ.
ಕರೊನಾ ಸಂಧರ್ಭದಲ್ಲಿ ಶ್ವೇತಾ ತಮ್ಮ ಪತಿ ಮಹಂತೇಶ್ ಹಾಗೂ ಮಗ ಇಕ್ಷುಧನ್ವ ಇಬ್ಬರನ್ನೂ ಕಳೆದುಕೊಂಡಿದ್ದರು. ಮಹಂತೇಶ್ ಲೋಕೋಪಯೋಗಿ ಇಲಾಖೆಯಲ್ಲಿ ಎಫ್.ಡಿ.ಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪತಿಯ ಸಾವಿನ ನಂತೆ ಅನುಕಂಪದ ಆಧಾರದ ಮೇಲೆ ಪತ್ನಿ ಶ್ವೇತಾ ರವರಿಗೆ ಕೆಲಸ ದೊರೆತಿತ್ತು. ಪತಿಯ ಕೆಲಸ ಧಕ್ಕಿಸಿಕೊಂಡ ಶ್ವೇತಾ ರವರ ಬಾಳಿಗೆ ಎಂಟ್ರಿ ಕೊಟ್ಟವನು ಡಾ.ಶಿವಕುಮಾರ್.
ಫೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಮನೆಗೆ ಬಂದ ಡಾ.ಶಿವಕುಮಾರ್ ನಯವಾದ ಮಾತುಗಳಿಂದ ನಂಬಿಸಿ ಶ್ವೇತಾ ರವರ ಬಳಿ ಇದ್ದ 500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ತೂಕದ 110 ಬೆಳ್ಳಿ ನಾಣ್ಯಗಳನ್ನ ತನ್ನ ಹೆಸರಿನಲ್ಲಿ ಆಕ್ಸಿಸ್ ಬ್ಯಾಂಕ್ ಲಾಕರ್ ಓಪನ್ ಮಾಡಿಸಿದರು. ಸುರಕ್ಷತೆ ಹೆಸರ ಹೇಳಿ ಲಾಕರ್ ಕೀ ಗಳನ್ನ ಶ್ವೇತಾ ಬಳಿ ಇರಿಸಿದ್ದರು. ನಂತರ ಹೆಚ್ಚಿನ ಲಾಭದ ಆಮಿಷ ತೋರಿಸಿ ಶ್ವೇತಾ ಬಳಿ ಇದ್ದ 10.50 ಲಕ್ಷ ಹಣವನ್ನ ಡಾ.ಶಿವಕುಮಾರ್ ವರ್ಗಾವಣೆ ಮಾಡಿಸಿಕೊಂಡರು.
ಇದಾದ ಕೆಲವೇ ದಿನಗಳಲ್ಲಿ ಲಾಕರ್ ನಲ್ಲಿದ್ದ ವಜ್ರದ ಉಂಗುರ ಡಾ.ಶಿವಕುಮಾರ್ ಬೆರಳಿನಲ್ಲಿ ಕಾಣಿಸಿದೆ. ಲಾಕರ್ ಕೀ ನನ್ನ ಬಳಿ ಇರುವಾಗ ವಜ್ರದ ಉಂಗುರ ಹೇಗೆ ಬಂತು ಎಂದು ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿಲ್ಲ. ನಂತರ ಪರಿಶೀಲಿಸಿದಾಗ ಲಾಕರ್ ನಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ಪದಾರ್ಥಗಳು ಡಾ.ಶಿವಕುಮಾರ್ ಪಾಲಾಗಿತ್ತು.
ತನ್ನ ಚಿನ್ನಾಭರಣ ಬೆಳ್ಳಿ ಹಾಗೂ ನಗದು ಹಣವನ್ನ ಹಿಂದಿರುಗಿಸುವಂತೆ ಕೇಳಿದಾಗ ಡಾ.ಶಿವಕುಮಾರ್ ಜೀವಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ಶ್ವೇತಾ ರವರು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…