Categories: Crime

ವೈದ್ಯನಿಂದ ಪಿಡ್ಲ್ಬೂಡಿ ಎಫ್ ಡಿಎ ಗೆ ದೋಖಾ…10.50 ಲಕ್ಷ ಕ್ಯಾಶ್, ಚಿನ್ನಾಭರಣ, ಬೆಳ್ಳಿಗೆ ಉಂಡೆನಾಮ…ನೊಂದ ಮಹಿಳೆಯಿಂದ ಪ್ರಕರಣ ದಾಖಲು…

ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಗೆ ನಯವಂಚಕ ವೈದ್ಯನೊಬ್ಬ ಮರಳುಮಾತನಾಡಿ 10.50 ಲಕ್ಷ ಹಣ,500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ಬೆಳ್ಳಿ ಗೆ ಉಂಡೆನಾಮ ಇಟ್ಟಿದ್ದಾನೆ.ವಂಚನೆಗೆ ಒಳಗಾದ ಮಹಿಳೆ ವೈದ್ಯನ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ವೇತಾ ಮಹಂತೇಶ್(46) ವಂಚನೆಗೆ ಒಳಗಾದವರು. ಡಾ.ಶಿವಕುಮಾರ್ ವಂಚಿಸಿದ ವೈದ್ಯ.

ಕರೊನಾ ಸಂಧರ್ಭದಲ್ಲಿ ಶ್ವೇತಾ ತಮ್ಮ ಪತಿ ಮಹಂತೇಶ್ ಹಾಗೂ ಮಗ ಇಕ್ಷುಧನ್ವ ಇಬ್ಬರನ್ನೂ ಕಳೆದುಕೊಂಡಿದ್ದರು. ಮಹಂತೇಶ್ ಲೋಕೋಪಯೋಗಿ ಇಲಾಖೆಯಲ್ಲಿ ಎಫ್.ಡಿ.ಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪತಿಯ ಸಾವಿನ ನಂತೆ ಅನುಕಂಪದ ಆಧಾರದ ಮೇಲೆ ಪತ್ನಿ ಶ್ವೇತಾ ರವರಿಗೆ ಕೆಲಸ ದೊರೆತಿತ್ತು. ಪತಿಯ ಕೆಲಸ ಧಕ್ಕಿಸಿಕೊಂಡ ಶ್ವೇತಾ ರವರ ಬಾಳಿಗೆ ಎಂಟ್ರಿ ಕೊಟ್ಟವನು ಡಾ.ಶಿವಕುಮಾರ್.

ಫೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಮನೆಗೆ ಬಂದ ಡಾ.ಶಿವಕುಮಾರ್ ನಯವಾದ ಮಾತುಗಳಿಂದ ನಂಬಿಸಿ ಶ್ವೇತಾ ರವರ ಬಳಿ ಇದ್ದ 500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ತೂಕದ 110 ಬೆಳ್ಳಿ ನಾಣ್ಯಗಳನ್ನ ತನ್ನ ಹೆಸರಿನಲ್ಲಿ ಆಕ್ಸಿಸ್ ಬ್ಯಾಂಕ್ ಲಾಕರ್ ಓಪನ್ ಮಾಡಿಸಿದರು. ಸುರಕ್ಷತೆ ಹೆಸರ ಹೇಳಿ ಲಾಕರ್ ಕೀ ಗಳನ್ನ ಶ್ವೇತಾ ಬಳಿ ಇರಿಸಿದ್ದರು. ನಂತರ ಹೆಚ್ಚಿನ ಲಾಭದ ಆಮಿಷ ತೋರಿಸಿ ಶ್ವೇತಾ ಬಳಿ ಇದ್ದ 10.50 ಲಕ್ಷ ಹಣವನ್ನ ಡಾ.ಶಿವಕುಮಾರ್ ವರ್ಗಾವಣೆ ಮಾಡಿಸಿಕೊಂಡರು.

ಇದಾದ ಕೆಲವೇ ದಿನಗಳಲ್ಲಿ ಲಾಕರ್ ನಲ್ಲಿದ್ದ ವಜ್ರದ ಉಂಗುರ ಡಾ.ಶಿವಕುಮಾರ್ ಬೆರಳಿನಲ್ಲಿ ಕಾಣಿಸಿದೆ. ಲಾಕರ್ ಕೀ ನನ್ನ ಬಳಿ ಇರುವಾಗ ವಜ್ರದ ಉಂಗುರ ಹೇಗೆ ಬಂತು ಎಂದು ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿಲ್ಲ. ನಂತರ ಪರಿಶೀಲಿಸಿದಾಗ ಲಾಕರ್ ನಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ಪದಾರ್ಥಗಳು ಡಾ.ಶಿವಕುಮಾರ್ ಪಾಲಾಗಿತ್ತು.

ತನ್ನ ಚಿನ್ನಾಭರಣ ಬೆಳ್ಳಿ ಹಾಗೂ ನಗದು ಹಣವನ್ನ ಹಿಂದಿರುಗಿಸುವಂತೆ ಕೇಳಿದಾಗ ಡಾ.ಶಿವಕುಮಾರ್ ಜೀವಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ಶ್ವೇತಾ ರವರು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ…

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

28 minutes ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

1 hour ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

3 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

8 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

13 hours ago