ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಗೆ ನಯವಂಚಕ ವೈದ್ಯನೊಬ್ಬ ಮರಳುಮಾತನಾಡಿ 10.50 ಲಕ್ಷ ಹಣ,500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ಬೆಳ್ಳಿ ಗೆ ಉಂಡೆನಾಮ ಇಟ್ಟಿದ್ದಾನೆ.ವಂಚನೆಗೆ ಒಳಗಾದ ಮಹಿಳೆ ವೈದ್ಯನ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ವೇತಾ ಮಹಂತೇಶ್(46) ವಂಚನೆಗೆ ಒಳಗಾದವರು. ಡಾ.ಶಿವಕುಮಾರ್ ವಂಚಿಸಿದ ವೈದ್ಯ.
ಕರೊನಾ ಸಂಧರ್ಭದಲ್ಲಿ ಶ್ವೇತಾ ತಮ್ಮ ಪತಿ ಮಹಂತೇಶ್ ಹಾಗೂ ಮಗ ಇಕ್ಷುಧನ್ವ ಇಬ್ಬರನ್ನೂ ಕಳೆದುಕೊಂಡಿದ್ದರು. ಮಹಂತೇಶ್ ಲೋಕೋಪಯೋಗಿ ಇಲಾಖೆಯಲ್ಲಿ ಎಫ್.ಡಿ.ಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪತಿಯ ಸಾವಿನ ನಂತೆ ಅನುಕಂಪದ ಆಧಾರದ ಮೇಲೆ ಪತ್ನಿ ಶ್ವೇತಾ ರವರಿಗೆ ಕೆಲಸ ದೊರೆತಿತ್ತು. ಪತಿಯ ಕೆಲಸ ಧಕ್ಕಿಸಿಕೊಂಡ ಶ್ವೇತಾ ರವರ ಬಾಳಿಗೆ ಎಂಟ್ರಿ ಕೊಟ್ಟವನು ಡಾ.ಶಿವಕುಮಾರ್.
ಫೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಮನೆಗೆ ಬಂದ ಡಾ.ಶಿವಕುಮಾರ್ ನಯವಾದ ಮಾತುಗಳಿಂದ ನಂಬಿಸಿ ಶ್ವೇತಾ ರವರ ಬಳಿ ಇದ್ದ 500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ತೂಕದ 110 ಬೆಳ್ಳಿ ನಾಣ್ಯಗಳನ್ನ ತನ್ನ ಹೆಸರಿನಲ್ಲಿ ಆಕ್ಸಿಸ್ ಬ್ಯಾಂಕ್ ಲಾಕರ್ ಓಪನ್ ಮಾಡಿಸಿದರು. ಸುರಕ್ಷತೆ ಹೆಸರ ಹೇಳಿ ಲಾಕರ್ ಕೀ ಗಳನ್ನ ಶ್ವೇತಾ ಬಳಿ ಇರಿಸಿದ್ದರು. ನಂತರ ಹೆಚ್ಚಿನ ಲಾಭದ ಆಮಿಷ ತೋರಿಸಿ ಶ್ವೇತಾ ಬಳಿ ಇದ್ದ 10.50 ಲಕ್ಷ ಹಣವನ್ನ ಡಾ.ಶಿವಕುಮಾರ್ ವರ್ಗಾವಣೆ ಮಾಡಿಸಿಕೊಂಡರು.
ಇದಾದ ಕೆಲವೇ ದಿನಗಳಲ್ಲಿ ಲಾಕರ್ ನಲ್ಲಿದ್ದ ವಜ್ರದ ಉಂಗುರ ಡಾ.ಶಿವಕುಮಾರ್ ಬೆರಳಿನಲ್ಲಿ ಕಾಣಿಸಿದೆ. ಲಾಕರ್ ಕೀ ನನ್ನ ಬಳಿ ಇರುವಾಗ ವಜ್ರದ ಉಂಗುರ ಹೇಗೆ ಬಂತು ಎಂದು ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿಲ್ಲ. ನಂತರ ಪರಿಶೀಲಿಸಿದಾಗ ಲಾಕರ್ ನಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ಪದಾರ್ಥಗಳು ಡಾ.ಶಿವಕುಮಾರ್ ಪಾಲಾಗಿತ್ತು.
ತನ್ನ ಚಿನ್ನಾಭರಣ ಬೆಳ್ಳಿ ಹಾಗೂ ನಗದು ಹಣವನ್ನ ಹಿಂದಿರುಗಿಸುವಂತೆ ಕೇಳಿದಾಗ ಡಾ.ಶಿವಕುಮಾರ್ ಜೀವಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ಶ್ವೇತಾ ರವರು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…