ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಗೆ ನಯವಂಚಕ ವೈದ್ಯನೊಬ್ಬ ಮರಳುಮಾತನಾಡಿ 10.50 ಲಕ್ಷ ಹಣ,500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ಬೆಳ್ಳಿ ಗೆ ಉಂಡೆನಾಮ ಇಟ್ಟಿದ್ದಾನೆ.ವಂಚನೆಗೆ ಒಳಗಾದ ಮಹಿಳೆ ವೈದ್ಯನ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ವೇತಾ ಮಹಂತೇಶ್(46) ವಂಚನೆಗೆ ಒಳಗಾದವರು. ಡಾ.ಶಿವಕುಮಾರ್ ವಂಚಿಸಿದ ವೈದ್ಯ.
ಕರೊನಾ ಸಂಧರ್ಭದಲ್ಲಿ ಶ್ವೇತಾ ತಮ್ಮ ಪತಿ ಮಹಂತೇಶ್ ಹಾಗೂ ಮಗ ಇಕ್ಷುಧನ್ವ ಇಬ್ಬರನ್ನೂ ಕಳೆದುಕೊಂಡಿದ್ದರು. ಮಹಂತೇಶ್ ಲೋಕೋಪಯೋಗಿ ಇಲಾಖೆಯಲ್ಲಿ ಎಫ್.ಡಿ.ಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪತಿಯ ಸಾವಿನ ನಂತೆ ಅನುಕಂಪದ ಆಧಾರದ ಮೇಲೆ ಪತ್ನಿ ಶ್ವೇತಾ ರವರಿಗೆ ಕೆಲಸ ದೊರೆತಿತ್ತು. ಪತಿಯ ಕೆಲಸ ಧಕ್ಕಿಸಿಕೊಂಡ ಶ್ವೇತಾ ರವರ ಬಾಳಿಗೆ ಎಂಟ್ರಿ ಕೊಟ್ಟವನು ಡಾ.ಶಿವಕುಮಾರ್.
ಫೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಮನೆಗೆ ಬಂದ ಡಾ.ಶಿವಕುಮಾರ್ ನಯವಾದ ಮಾತುಗಳಿಂದ ನಂಬಿಸಿ ಶ್ವೇತಾ ರವರ ಬಳಿ ಇದ್ದ 500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ತೂಕದ 110 ಬೆಳ್ಳಿ ನಾಣ್ಯಗಳನ್ನ ತನ್ನ ಹೆಸರಿನಲ್ಲಿ ಆಕ್ಸಿಸ್ ಬ್ಯಾಂಕ್ ಲಾಕರ್ ಓಪನ್ ಮಾಡಿಸಿದರು. ಸುರಕ್ಷತೆ ಹೆಸರ ಹೇಳಿ ಲಾಕರ್ ಕೀ ಗಳನ್ನ ಶ್ವೇತಾ ಬಳಿ ಇರಿಸಿದ್ದರು. ನಂತರ ಹೆಚ್ಚಿನ ಲಾಭದ ಆಮಿಷ ತೋರಿಸಿ ಶ್ವೇತಾ ಬಳಿ ಇದ್ದ 10.50 ಲಕ್ಷ ಹಣವನ್ನ ಡಾ.ಶಿವಕುಮಾರ್ ವರ್ಗಾವಣೆ ಮಾಡಿಸಿಕೊಂಡರು.
ಇದಾದ ಕೆಲವೇ ದಿನಗಳಲ್ಲಿ ಲಾಕರ್ ನಲ್ಲಿದ್ದ ವಜ್ರದ ಉಂಗುರ ಡಾ.ಶಿವಕುಮಾರ್ ಬೆರಳಿನಲ್ಲಿ ಕಾಣಿಸಿದೆ. ಲಾಕರ್ ಕೀ ನನ್ನ ಬಳಿ ಇರುವಾಗ ವಜ್ರದ ಉಂಗುರ ಹೇಗೆ ಬಂತು ಎಂದು ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿಲ್ಲ. ನಂತರ ಪರಿಶೀಲಿಸಿದಾಗ ಲಾಕರ್ ನಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ಪದಾರ್ಥಗಳು ಡಾ.ಶಿವಕುಮಾರ್ ಪಾಲಾಗಿತ್ತು.
ತನ್ನ ಚಿನ್ನಾಭರಣ ಬೆಳ್ಳಿ ಹಾಗೂ ನಗದು ಹಣವನ್ನ ಹಿಂದಿರುಗಿಸುವಂತೆ ಕೇಳಿದಾಗ ಡಾ.ಶಿವಕುಮಾರ್ ಜೀವಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ಶ್ವೇತಾ ರವರು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…