Categories: Crime

ವೈದ್ಯನಿಂದ ಪಿಡ್ಲ್ಬೂಡಿ ಎಫ್ ಡಿಎ ಗೆ ದೋಖಾ…10.50 ಲಕ್ಷ ಕ್ಯಾಶ್, ಚಿನ್ನಾಭರಣ, ಬೆಳ್ಳಿಗೆ ಉಂಡೆನಾಮ…ನೊಂದ ಮಹಿಳೆಯಿಂದ ಪ್ರಕರಣ ದಾಖಲು…

ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಗೆ ನಯವಂಚಕ ವೈದ್ಯನೊಬ್ಬ ಮರಳುಮಾತನಾಡಿ 10.50 ಲಕ್ಷ ಹಣ,500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ಬೆಳ್ಳಿ ಗೆ ಉಂಡೆನಾಮ ಇಟ್ಟಿದ್ದಾನೆ.ವಂಚನೆಗೆ ಒಳಗಾದ ಮಹಿಳೆ ವೈದ್ಯನ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ವೇತಾ ಮಹಂತೇಶ್(46) ವಂಚನೆಗೆ ಒಳಗಾದವರು. ಡಾ.ಶಿವಕುಮಾರ್ ವಂಚಿಸಿದ ವೈದ್ಯ.

ಕರೊನಾ ಸಂಧರ್ಭದಲ್ಲಿ ಶ್ವೇತಾ ತಮ್ಮ ಪತಿ ಮಹಂತೇಶ್ ಹಾಗೂ ಮಗ ಇಕ್ಷುಧನ್ವ ಇಬ್ಬರನ್ನೂ ಕಳೆದುಕೊಂಡಿದ್ದರು. ಮಹಂತೇಶ್ ಲೋಕೋಪಯೋಗಿ ಇಲಾಖೆಯಲ್ಲಿ ಎಫ್.ಡಿ.ಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪತಿಯ ಸಾವಿನ ನಂತೆ ಅನುಕಂಪದ ಆಧಾರದ ಮೇಲೆ ಪತ್ನಿ ಶ್ವೇತಾ ರವರಿಗೆ ಕೆಲಸ ದೊರೆತಿತ್ತು. ಪತಿಯ ಕೆಲಸ ಧಕ್ಕಿಸಿಕೊಂಡ ಶ್ವೇತಾ ರವರ ಬಾಳಿಗೆ ಎಂಟ್ರಿ ಕೊಟ್ಟವನು ಡಾ.ಶಿವಕುಮಾರ್.

ಫೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಮನೆಗೆ ಬಂದ ಡಾ.ಶಿವಕುಮಾರ್ ನಯವಾದ ಮಾತುಗಳಿಂದ ನಂಬಿಸಿ ಶ್ವೇತಾ ರವರ ಬಳಿ ಇದ್ದ 500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ತೂಕದ 110 ಬೆಳ್ಳಿ ನಾಣ್ಯಗಳನ್ನ ತನ್ನ ಹೆಸರಿನಲ್ಲಿ ಆಕ್ಸಿಸ್ ಬ್ಯಾಂಕ್ ಲಾಕರ್ ಓಪನ್ ಮಾಡಿಸಿದರು. ಸುರಕ್ಷತೆ ಹೆಸರ ಹೇಳಿ ಲಾಕರ್ ಕೀ ಗಳನ್ನ ಶ್ವೇತಾ ಬಳಿ ಇರಿಸಿದ್ದರು. ನಂತರ ಹೆಚ್ಚಿನ ಲಾಭದ ಆಮಿಷ ತೋರಿಸಿ ಶ್ವೇತಾ ಬಳಿ ಇದ್ದ 10.50 ಲಕ್ಷ ಹಣವನ್ನ ಡಾ.ಶಿವಕುಮಾರ್ ವರ್ಗಾವಣೆ ಮಾಡಿಸಿಕೊಂಡರು.

ಇದಾದ ಕೆಲವೇ ದಿನಗಳಲ್ಲಿ ಲಾಕರ್ ನಲ್ಲಿದ್ದ ವಜ್ರದ ಉಂಗುರ ಡಾ.ಶಿವಕುಮಾರ್ ಬೆರಳಿನಲ್ಲಿ ಕಾಣಿಸಿದೆ. ಲಾಕರ್ ಕೀ ನನ್ನ ಬಳಿ ಇರುವಾಗ ವಜ್ರದ ಉಂಗುರ ಹೇಗೆ ಬಂತು ಎಂದು ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿಲ್ಲ. ನಂತರ ಪರಿಶೀಲಿಸಿದಾಗ ಲಾಕರ್ ನಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ಪದಾರ್ಥಗಳು ಡಾ.ಶಿವಕುಮಾರ್ ಪಾಲಾಗಿತ್ತು.

ತನ್ನ ಚಿನ್ನಾಭರಣ ಬೆಳ್ಳಿ ಹಾಗೂ ನಗದು ಹಣವನ್ನ ಹಿಂದಿರುಗಿಸುವಂತೆ ಕೇಳಿದಾಗ ಡಾ.ಶಿವಕುಮಾರ್ ಜೀವಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ಶ್ವೇತಾ ರವರು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ…

Ramesh Babu

Journalist

Recent Posts

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

24 minutes ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

2 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

8 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

11 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

12 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

23 hours ago