ಅಮಾಯಕ ಯುವಕ ಅಮರ್ ಶೆಟ್ಟಿ (31) ನಿಧನಕ್ಕೆ ಕಾರಣವಾದ ಭಾಗ್ಯ ಕ್ಲಿನಿಕ್ ನ್ನು ಆರೋಗ್ಯ ಇಲಾಖಾಧಿಕಾರಿಗಳು ಬೀಗ ಜಡಿದು ಬಂದ್ ಮಾಡಿದ್ದಾರೆ.
ಆ.18ರಂದು ವೈದ್ಯರ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಅಮರ್ ಶೆಟ್ಟಿ (31) ಬಲಿಯಾಗಿರುವ ಘಟನೆ ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ನಡೆದಿತ್ತು.
ಅಮರ ಸಾವಿಗೆ ವೈದ್ಯನ ಬೇಜವಾಬ್ದಾರಿ ಎಂದು ಕುಟುಂಬಸ್ಥರ ಆರೋಪ ಹಾಗೂ ದೂರಿನ ಅನ್ವಯ ಮಾಗಡಿ ರಸ್ತೆಯಲ್ಲಿರುವ ಭಾಗ್ಯ ಕ್ಲಿನಿಕ್ ನ್ನು ಆರೋಗ್ಯ ಇಲಾಖಾಧಿಕಾರಿಗಳು ಸೀಜ್ ಮಾಡಿದ್ದಾರೆ.
ಜ್ವರ ಇದ್ದ ಹಿನ್ನೆಲೆ ಆ.13ರಂದು ಚಿಕಿತ್ಸೆಗಾಗಿ ಮಾಗಡಿ ರಸ್ತೆಯ ಭಾಗ್ಯ ಕ್ಲಿನಿಕ್ ಗೆ ಹೋಗಿದ್ದ ಅಮರ್. ಈ ವೇಳೆ ಜ್ವರಕ್ಕೆ ಇಂಜೆಕ್ಷನ್ ಕೊಟ್ಟಿದ್ದ ವೈದ್ಯ.
ಇಂಜೆಕ್ಷನ್ ಅಡ್ಡ ಪರಿಣಾಮದಿಂದ ಮಲ್ಟಿ ಆರ್ಗನ್ ಡ್ಯಾಮೇಜ್ ಆಗಿದ್ದರಿಂದ ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅಮರ್ ಶೆಟ್ಟಿ. ಚಿಕಿತ್ಸೆ ಫಲಿಸದೆ ಅಮರ್ ಶೆಟ್ಟಿ ಮೃತಪಟ್ಟಿದ್ದರು.
ದುಬೈನಲ್ಲಿದ್ದ ಯುವಕ ಅಮರ್ ಕಳೆದ 1 ವರ್ಷದ ಹಿಂದೆ ಬೆಂಗಳೂರಿಗೆ ಬಂದು ಹೋಟೆಲ್ ಬಿಸಿನೆಸ್ ನಡೆಸುತ್ತಿದ್ದ. ಸದ್ಯ ಭಾಗ್ಯ ಕ್ಲಿನಿಕ್ ವೈದ್ಯನ ಮೇಲೆ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…