ಅಮಾಯಕ ಯುವಕ ಅಮರ್ ಶೆಟ್ಟಿ (31) ನಿಧನಕ್ಕೆ ಕಾರಣವಾದ ಭಾಗ್ಯ ಕ್ಲಿನಿಕ್ ನ್ನು ಆರೋಗ್ಯ ಇಲಾಖಾಧಿಕಾರಿಗಳು ಬೀಗ ಜಡಿದು ಬಂದ್ ಮಾಡಿದ್ದಾರೆ.
ಆ.18ರಂದು ವೈದ್ಯರ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಅಮರ್ ಶೆಟ್ಟಿ (31) ಬಲಿಯಾಗಿರುವ ಘಟನೆ ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ನಡೆದಿತ್ತು.
ಅಮರ ಸಾವಿಗೆ ವೈದ್ಯನ ಬೇಜವಾಬ್ದಾರಿ ಎಂದು ಕುಟುಂಬಸ್ಥರ ಆರೋಪ ಹಾಗೂ ದೂರಿನ ಅನ್ವಯ ಮಾಗಡಿ ರಸ್ತೆಯಲ್ಲಿರುವ ಭಾಗ್ಯ ಕ್ಲಿನಿಕ್ ನ್ನು ಆರೋಗ್ಯ ಇಲಾಖಾಧಿಕಾರಿಗಳು ಸೀಜ್ ಮಾಡಿದ್ದಾರೆ.
ಜ್ವರ ಇದ್ದ ಹಿನ್ನೆಲೆ ಆ.13ರಂದು ಚಿಕಿತ್ಸೆಗಾಗಿ ಮಾಗಡಿ ರಸ್ತೆಯ ಭಾಗ್ಯ ಕ್ಲಿನಿಕ್ ಗೆ ಹೋಗಿದ್ದ ಅಮರ್. ಈ ವೇಳೆ ಜ್ವರಕ್ಕೆ ಇಂಜೆಕ್ಷನ್ ಕೊಟ್ಟಿದ್ದ ವೈದ್ಯ.
ಇಂಜೆಕ್ಷನ್ ಅಡ್ಡ ಪರಿಣಾಮದಿಂದ ಮಲ್ಟಿ ಆರ್ಗನ್ ಡ್ಯಾಮೇಜ್ ಆಗಿದ್ದರಿಂದ ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅಮರ್ ಶೆಟ್ಟಿ. ಚಿಕಿತ್ಸೆ ಫಲಿಸದೆ ಅಮರ್ ಶೆಟ್ಟಿ ಮೃತಪಟ್ಟಿದ್ದರು.
ದುಬೈನಲ್ಲಿದ್ದ ಯುವಕ ಅಮರ್ ಕಳೆದ 1 ವರ್ಷದ ಹಿಂದೆ ಬೆಂಗಳೂರಿಗೆ ಬಂದು ಹೋಟೆಲ್ ಬಿಸಿನೆಸ್ ನಡೆಸುತ್ತಿದ್ದ. ಸದ್ಯ ಭಾಗ್ಯ ಕ್ಲಿನಿಕ್ ವೈದ್ಯನ ಮೇಲೆ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…