ವೈದ್ಯನ ನಿರ್ಲಕ್ಷ್ಯಕ್ಕೆ ಯುವಕ ಬಲಿ ಪ್ರಕರಣ: ಭಾಗ್ಯ ಕ್ಲಿನಿಕ್ ನ್ನು ಬಂದ್ ಮಾಡಿದ ಆರೋಗ್ಯ ಇಲಾಖೆ

ಅಮಾಯಕ ಯುವಕ ಅಮರ್ ಶೆಟ್ಟಿ (31) ನಿಧನಕ್ಕೆ ಕಾರಣವಾದ ಭಾಗ್ಯ ಕ್ಲಿನಿಕ್ ನ್ನು ಆರೋಗ್ಯ ಇಲಾಖಾಧಿಕಾರಿಗಳು ಬೀಗ ಜಡಿದು ಬಂದ್ ಮಾಡಿದ್ದಾರೆ.

ಆ.18ರಂದು ವೈದ್ಯರ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಅಮರ್ ಶೆಟ್ಟಿ (31) ಬಲಿಯಾಗಿರುವ ಘಟನೆ ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ನಡೆದಿತ್ತು.

ಅಮರ ಸಾವಿಗೆ ವೈದ್ಯನ ಬೇಜವಾಬ್ದಾರಿ ಎಂದು ಕುಟುಂಬಸ್ಥರ ಆರೋಪ ಹಾಗೂ ದೂರಿನ ಅನ್ವಯ ಮಾಗಡಿ ರಸ್ತೆಯಲ್ಲಿರುವ ಭಾಗ್ಯ ಕ್ಲಿನಿಕ್ ನ್ನು ಆರೋಗ್ಯ ಇಲಾಖಾಧಿಕಾರಿಗಳು ಸೀಜ್ ಮಾಡಿದ್ದಾರೆ.

ಜ್ವರ ಇದ್ದ ಹಿನ್ನೆಲೆ ಆ.13ರಂದು ಚಿಕಿತ್ಸೆಗಾಗಿ ಮಾಗಡಿ ರಸ್ತೆಯ ಭಾಗ್ಯ ಕ್ಲಿನಿಕ್ ಗೆ ಹೋಗಿದ್ದ ಅಮರ್. ಈ ವೇಳೆ ಜ್ವರಕ್ಕೆ ಇಂಜೆಕ್ಷನ್ ಕೊಟ್ಟಿದ್ದ ವೈದ್ಯ.

ಇಂಜೆಕ್ಷನ್ ಅಡ್ಡ ಪರಿಣಾಮದಿಂದ ಮಲ್ಟಿ ಆರ್ಗನ್ ಡ್ಯಾಮೇಜ್ ಆಗಿದ್ದರಿಂದ ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅಮರ್ ಶೆಟ್ಟಿ. ಚಿಕಿತ್ಸೆ ಫಲಿಸದೆ ಅಮರ್ ಶೆಟ್ಟಿ ಮೃತಪಟ್ಟಿದ್ದರು.

ದುಬೈನಲ್ಲಿದ್ದ ಯುವಕ ಅಮರ್ ಕಳೆದ 1 ವರ್ಷದ ಹಿಂದೆ ಬೆಂಗಳೂರಿಗೆ ಬಂದು ಹೋಟೆಲ್ ಬಿಸಿನೆಸ್ ನಡೆಸುತ್ತಿದ್ದ. ಸದ್ಯ ಭಾಗ್ಯ ಕ್ಲಿನಿಕ್ ವೈದ್ಯನ ಮೇಲೆ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಮರ್ ಸಾವಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ಆರೋಗ್ಯ ಸಚಿವ, ಆರೋಗ್ಯ ಆಯುಕ್ತ, ಜಿಲ್ಲಾದಿಕಾರಿಗೆ ದೂರು ನೀಡಿದ್ದ ಅಮರ್ ಸ್ನೇಹಿತರು ಹಾಗೂ ಕುಟುಂಬಸ್ಥರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago