ವೈದ್ಯನ ನಿರ್ಲಕ್ಷ್ಯಕ್ಕೆ ಯುವಕ ಬಲಿ ಪ್ರಕರಣ: ಭಾಗ್ಯ ಕ್ಲಿನಿಕ್ ನ್ನು ಬಂದ್ ಮಾಡಿದ ಆರೋಗ್ಯ ಇಲಾಖೆ

ಅಮಾಯಕ ಯುವಕ ಅಮರ್ ಶೆಟ್ಟಿ (31) ನಿಧನಕ್ಕೆ ಕಾರಣವಾದ ಭಾಗ್ಯ ಕ್ಲಿನಿಕ್ ನ್ನು ಆರೋಗ್ಯ ಇಲಾಖಾಧಿಕಾರಿಗಳು ಬೀಗ ಜಡಿದು ಬಂದ್ ಮಾಡಿದ್ದಾರೆ.

ಆ.18ರಂದು ವೈದ್ಯರ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಅಮರ್ ಶೆಟ್ಟಿ (31) ಬಲಿಯಾಗಿರುವ ಘಟನೆ ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ನಡೆದಿತ್ತು.

ಅಮರ ಸಾವಿಗೆ ವೈದ್ಯನ ಬೇಜವಾಬ್ದಾರಿ ಎಂದು ಕುಟುಂಬಸ್ಥರ ಆರೋಪ ಹಾಗೂ ದೂರಿನ ಅನ್ವಯ ಮಾಗಡಿ ರಸ್ತೆಯಲ್ಲಿರುವ ಭಾಗ್ಯ ಕ್ಲಿನಿಕ್ ನ್ನು ಆರೋಗ್ಯ ಇಲಾಖಾಧಿಕಾರಿಗಳು ಸೀಜ್ ಮಾಡಿದ್ದಾರೆ.

ಜ್ವರ ಇದ್ದ ಹಿನ್ನೆಲೆ ಆ.13ರಂದು ಚಿಕಿತ್ಸೆಗಾಗಿ ಮಾಗಡಿ ರಸ್ತೆಯ ಭಾಗ್ಯ ಕ್ಲಿನಿಕ್ ಗೆ ಹೋಗಿದ್ದ ಅಮರ್. ಈ ವೇಳೆ ಜ್ವರಕ್ಕೆ ಇಂಜೆಕ್ಷನ್ ಕೊಟ್ಟಿದ್ದ ವೈದ್ಯ.

ಇಂಜೆಕ್ಷನ್ ಅಡ್ಡ ಪರಿಣಾಮದಿಂದ ಮಲ್ಟಿ ಆರ್ಗನ್ ಡ್ಯಾಮೇಜ್ ಆಗಿದ್ದರಿಂದ ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅಮರ್ ಶೆಟ್ಟಿ. ಚಿಕಿತ್ಸೆ ಫಲಿಸದೆ ಅಮರ್ ಶೆಟ್ಟಿ ಮೃತಪಟ್ಟಿದ್ದರು.

ದುಬೈನಲ್ಲಿದ್ದ ಯುವಕ ಅಮರ್ ಕಳೆದ 1 ವರ್ಷದ ಹಿಂದೆ ಬೆಂಗಳೂರಿಗೆ ಬಂದು ಹೋಟೆಲ್ ಬಿಸಿನೆಸ್ ನಡೆಸುತ್ತಿದ್ದ. ಸದ್ಯ ಭಾಗ್ಯ ಕ್ಲಿನಿಕ್ ವೈದ್ಯನ ಮೇಲೆ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಮರ್ ಸಾವಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ಆರೋಗ್ಯ ಸಚಿವ, ಆರೋಗ್ಯ ಆಯುಕ್ತ, ಜಿಲ್ಲಾದಿಕಾರಿಗೆ ದೂರು ನೀಡಿದ್ದ ಅಮರ್ ಸ್ನೇಹಿತರು ಹಾಗೂ ಕುಟುಂಬಸ್ಥರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

49 minutes ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 hour ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

16 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago