ವೈದ್ಯರ ನಿರ್ಲಕ್ಷ್ಯ 2 ತಿಂಗಳ ಹಸುಗೂಸು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ನಗರದ ಮಾನಸ ಆಸ್ಪತ್ರೆ ಬಳಿ ನಿನ್ನೆ ರಾತ್ರಿ ಸುಮಾರು 8 ಗಂಟೆಯಲ್ಲಿ ನಡೆದಿದೆ.
ಹೊಸಹಳ್ಳಿ ಮೂಲದ ಗಣೇಶ್ ಹಾಗೂ ಗೀತಾ ದಂಪತಿಗೆ ಜನಿಸಿದ ಯೋಕ್ಷಿತ್ (2 ತಿಂಗಳು) ಮೃತಪಟ್ಟ ಮಗು.
ಭಾನುವಾರದಂದು ಮಗುವಿಗೆ ಕಫಾ ಇದೆ ಎಂದು ಮಾನಸ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಿನ್ನೆ ರಾತ್ರಿ (ಮಂಗಳವಾರ) ಮಗುವಿಗೆ ತುಂಬಾ ಸೀರಿಯಸ್ ಆಗಿದೆ ಎಂದು ಸಾವನ್ನಪ್ಪಿರುವ ಮಗುವನ್ನು ಆಂಬ್ಯುಲೆನ್ಸ್ ಮೂಲಕ ಬೇರೆ ಆಸ್ಪತ್ರೆಗೆ ರವಾನಿಸಲು ಮಾನಸ ಆಸ್ಪತ್ರೆ ವೈದ್ಯರು ಮುಂದಾಗಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ನೇರ ಕಾರಣ. ಮಗು ಬದುಕಿದ್ದಾಗಲೇ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದಿದ್ದರೆ ನಾವು ಕರೆದುಕೊಂಡು ಹೋಗುತ್ತಿದ್ದೇವು. ಆದರೆ, ಮಗುವಿಗೆ ಒಮ್ಮೆಲೆ ನಾಲ್ಕು ರೀತಿಯ ಚುಚ್ಚುಮದ್ದು, ಔಷಧಿಗಳನ್ನು ನೀಡಿದ ಪರಿಣಾಮ ಮಗುವಿಗೆ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…