ದೊಡ್ಡಬಳ್ಳಾಪುರ: ನಗರದ ಇಸ್ಲಾಂಪುರ ನಿವಾಸಿ ಉಪೇಂದ್ರ ಎಂಬಾತನ ರುಂಡ ಕತ್ತರಿಸಿದ್ದ ಆರೋಪ ಸಾಬೀತಾಗಿರುವ ಹಿನ್ನೆಲೆ ತಾಲ್ಲೂಕಿನ ರಾಜಘಟ್ಟ ನಿವಾಸಿ ಪವನ್ @ಪುಲಿ (21) ಎಂಬಾತನಿಗೆ ಕಠಿಣ ಅಜೀವ ಕಾರಾಗೃಹ ಶಿಕ್ಷೆ ಹಾಗೂ ₹2 ಲಕ್ಷ ದಂಡ ವಿಧಿಸಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಧೀಶರಾದ ರಮೇಶ್ ದುರುಗಪ್ಪ ಏಕಬೋಟೆ ಅವರು ತೀರ್ಪು ನೀಡಿದ್ದಾರೆ.
ನಗರದ ಡಿ.ಕ್ರಾಸ್ ಸಮೀಪದ ಚರಂಡಿಯಲ್ಲಿ 2018ರಲ್ಲಿ ಉಪೇಂದ್ರ ಎಂಬಾತನ ರುಂಡ ಪತ್ತೆಯಾಗಿತ್ತು. ಈ ಪ್ರಕರಣ ಬೆಳಕಿಗೆ ಬಂದ 24 ಗಂಟೆಗಳಲ್ಲಿಯೇ ಆರೋಪಿ ಪವನ್ ಎಂಬಾತನನ್ನು ಅಂದಿನ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದರಾಜು, ನಗರ ಪೊಲೀಸ್ ಠಾಣೆಯಲ್ಲಿ ಅಂದು ಸಬ್ ಇನ್ಸ್ಪೆಕ್ಟರ್ ಆಗಿದ್ದ ಬಿ.ಕೆ.ಪಾಟೀಲ್ ಅವರ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು.
ನಗರದಲ್ಲಿ ಎರಡು ರೌಡಿ ಗುಂಪುಗಳು ತಮ್ಮ ಪ್ರಾಭಲ್ಯವನ್ನು ಸಾಧಿಸಲು ಈ ಕೃತ್ಯ ನಡೆಸಲಾಗಿತ್ತು ಎಂದು ಪೊಲೀಸರು ತನಿಖಾ ವರದಿಯಲ್ಲಿ ತಿಳಿಸಿದ್ದರು. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ನಗರದಲ್ಲಿ ಶಾಂತಿ ನೆಲೆಸುವಂತೆ ಮಾಡಿದ್ದಕ್ಕಾಗಿ ಆ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಭೀಮಾಶಂಕರ್ ಎಸ್.ಗುಳೇದ್ ಅವರು ಪೊಲೀಸರಿಗೆ ಇಲಾಖೆ ವತಿಯಿಂದ ₹5,000ಗಳ ಬಹುಮಾನವನ್ನು ನೀಡಿದ್ದರು.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…