ದೊಡ್ಡಬಳ್ಳಾಪುರ: ನಗರದ ಇಸ್ಲಾಂಪುರ ನಿವಾಸಿ ಉಪೇಂದ್ರ ಎಂಬಾತನ ರುಂಡ ಕತ್ತರಿಸಿದ್ದ ಆರೋಪ ಸಾಬೀತಾಗಿರುವ ಹಿನ್ನೆಲೆ ತಾಲ್ಲೂಕಿನ ರಾಜಘಟ್ಟ ನಿವಾಸಿ ಪವನ್ @ಪುಲಿ (21) ಎಂಬಾತನಿಗೆ ಕಠಿಣ ಅಜೀವ ಕಾರಾಗೃಹ ಶಿಕ್ಷೆ ಹಾಗೂ ₹2 ಲಕ್ಷ ದಂಡ ವಿಧಿಸಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಧೀಶರಾದ ರಮೇಶ್ ದುರುಗಪ್ಪ ಏಕಬೋಟೆ ಅವರು ತೀರ್ಪು ನೀಡಿದ್ದಾರೆ.
ನಗರದ ಡಿ.ಕ್ರಾಸ್ ಸಮೀಪದ ಚರಂಡಿಯಲ್ಲಿ 2018ರಲ್ಲಿ ಉಪೇಂದ್ರ ಎಂಬಾತನ ರುಂಡ ಪತ್ತೆಯಾಗಿತ್ತು. ಈ ಪ್ರಕರಣ ಬೆಳಕಿಗೆ ಬಂದ 24 ಗಂಟೆಗಳಲ್ಲಿಯೇ ಆರೋಪಿ ಪವನ್ ಎಂಬಾತನನ್ನು ಅಂದಿನ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದರಾಜು, ನಗರ ಪೊಲೀಸ್ ಠಾಣೆಯಲ್ಲಿ ಅಂದು ಸಬ್ ಇನ್ಸ್ಪೆಕ್ಟರ್ ಆಗಿದ್ದ ಬಿ.ಕೆ.ಪಾಟೀಲ್ ಅವರ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು.
ನಗರದಲ್ಲಿ ಎರಡು ರೌಡಿ ಗುಂಪುಗಳು ತಮ್ಮ ಪ್ರಾಭಲ್ಯವನ್ನು ಸಾಧಿಸಲು ಈ ಕೃತ್ಯ ನಡೆಸಲಾಗಿತ್ತು ಎಂದು ಪೊಲೀಸರು ತನಿಖಾ ವರದಿಯಲ್ಲಿ ತಿಳಿಸಿದ್ದರು. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ನಗರದಲ್ಲಿ ಶಾಂತಿ ನೆಲೆಸುವಂತೆ ಮಾಡಿದ್ದಕ್ಕಾಗಿ ಆ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಭೀಮಾಶಂಕರ್ ಎಸ್.ಗುಳೇದ್ ಅವರು ಪೊಲೀಸರಿಗೆ ಇಲಾಖೆ ವತಿಯಿಂದ ₹5,000ಗಳ ಬಹುಮಾನವನ್ನು ನೀಡಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…