ವ್ಯಕ್ತಿಯ ರುಂಡ ಕತ್ತರಿಸಿದ್ದ ಆರೋಪ ಸಾಬೀತು: ಕೊಲೆ ಆರೋಪಿಗೆ ಕಠಿಣ ಅಜೀವ ಕಾರಾಗೃಹ ಶಿಕ್ಷೆ ಪ್ರಕಟ

ದೊಡ್ಡಬಳ್ಳಾಪುರ: ನಗರದ ಇಸ್ಲಾಂಪುರ ನಿವಾಸಿ ಉಪೇಂದ್ರ ಎಂಬಾತನ ರುಂಡ ಕತ್ತರಿಸಿದ್ದ ಆರೋಪ ಸಾಬೀತಾಗಿರುವ ಹಿನ್ನೆಲೆ ತಾಲ್ಲೂಕಿನ ರಾಜಘಟ್ಟ ನಿವಾಸಿ ಪವನ್ @ಪುಲಿ (21) ಎಂಬಾತನಿಗೆ ಕಠಿಣ ಅಜೀವ ಕಾರಾಗೃಹ ಶಿಕ್ಷೆ ಹಾಗೂ ₹2 ಲಕ್ಷ ದಂಡ ವಿಧಿಸಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಧೀಶರಾದ ರಮೇಶ್ ದುರುಗಪ್ಪ ಏಕಬೋಟೆ ಅವರು ತೀರ್ಪು ನೀಡಿದ್ದಾರೆ.

ನಗರದ ಡಿ.ಕ್ರಾಸ್ ಸಮೀಪದ ಚರಂಡಿಯಲ್ಲಿ 2018ರಲ್ಲಿ ಉಪೇಂದ್ರ ಎಂಬಾತನ ರುಂಡ ಪತ್ತೆಯಾಗಿತ್ತು. ಈ ಪ್ರಕರಣ ಬೆಳಕಿಗೆ ಬಂದ 24 ಗಂಟೆಗಳಲ್ಲಿಯೇ ಆರೋಪಿ ಪವನ್ ಎಂಬಾತನನ್ನು ಅಂದಿನ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದರಾಜು, ನಗರ ಪೊಲೀಸ್ ಠಾಣೆಯಲ್ಲಿ ಅಂದು ಸಬ್ ಇನ್ಸ್ಪೆಕ್ಟರ್ ಆಗಿದ್ದ ಬಿ.ಕೆ.ಪಾಟೀಲ್ ಅವರ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು.

ನಗರದಲ್ಲಿ ಎರಡು ರೌಡಿ ಗುಂಪುಗಳು ತಮ್ಮ ಪ್ರಾಭಲ್ಯವನ್ನು ಸಾಧಿಸಲು ಈ ಕೃತ್ಯ ನಡೆಸಲಾಗಿತ್ತು ಎಂದು ಪೊಲೀಸರು ತನಿಖಾ ವರದಿಯಲ್ಲಿ ತಿಳಿಸಿದ್ದರು. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ನಗರದಲ್ಲಿ ಶಾಂತಿ ನೆಲೆಸುವಂತೆ ಮಾಡಿದ್ದಕ್ಕಾಗಿ ಆ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಭೀಮಾಶಂಕರ್ ಎಸ್.ಗುಳೇದ್ ಅವರು ಪೊಲೀಸರಿಗೆ ಇಲಾಖೆ ವತಿಯಿಂದ ₹5,000ಗಳ ಬಹುಮಾನವನ್ನು ನೀಡಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

10 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

13 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago