ದೊಡ್ಡಬಳ್ಳಾಪುರ: ನಗರದ ಇಸ್ಲಾಂಪುರ ನಿವಾಸಿ ಉಪೇಂದ್ರ ಎಂಬಾತನ ರುಂಡ ಕತ್ತರಿಸಿದ್ದ ಆರೋಪ ಸಾಬೀತಾಗಿರುವ ಹಿನ್ನೆಲೆ ತಾಲ್ಲೂಕಿನ ರಾಜಘಟ್ಟ ನಿವಾಸಿ ಪವನ್ @ಪುಲಿ (21) ಎಂಬಾತನಿಗೆ ಕಠಿಣ ಅಜೀವ ಕಾರಾಗೃಹ ಶಿಕ್ಷೆ ಹಾಗೂ ₹2 ಲಕ್ಷ ದಂಡ ವಿಧಿಸಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಧೀಶರಾದ ರಮೇಶ್ ದುರುಗಪ್ಪ ಏಕಬೋಟೆ ಅವರು ತೀರ್ಪು ನೀಡಿದ್ದಾರೆ.
ನಗರದ ಡಿ.ಕ್ರಾಸ್ ಸಮೀಪದ ಚರಂಡಿಯಲ್ಲಿ 2018ರಲ್ಲಿ ಉಪೇಂದ್ರ ಎಂಬಾತನ ರುಂಡ ಪತ್ತೆಯಾಗಿತ್ತು. ಈ ಪ್ರಕರಣ ಬೆಳಕಿಗೆ ಬಂದ 24 ಗಂಟೆಗಳಲ್ಲಿಯೇ ಆರೋಪಿ ಪವನ್ ಎಂಬಾತನನ್ನು ಅಂದಿನ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದರಾಜು, ನಗರ ಪೊಲೀಸ್ ಠಾಣೆಯಲ್ಲಿ ಅಂದು ಸಬ್ ಇನ್ಸ್ಪೆಕ್ಟರ್ ಆಗಿದ್ದ ಬಿ.ಕೆ.ಪಾಟೀಲ್ ಅವರ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು.
ನಗರದಲ್ಲಿ ಎರಡು ರೌಡಿ ಗುಂಪುಗಳು ತಮ್ಮ ಪ್ರಾಭಲ್ಯವನ್ನು ಸಾಧಿಸಲು ಈ ಕೃತ್ಯ ನಡೆಸಲಾಗಿತ್ತು ಎಂದು ಪೊಲೀಸರು ತನಿಖಾ ವರದಿಯಲ್ಲಿ ತಿಳಿಸಿದ್ದರು. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ನಗರದಲ್ಲಿ ಶಾಂತಿ ನೆಲೆಸುವಂತೆ ಮಾಡಿದ್ದಕ್ಕಾಗಿ ಆ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಭೀಮಾಶಂಕರ್ ಎಸ್.ಗುಳೇದ್ ಅವರು ಪೊಲೀಸರಿಗೆ ಇಲಾಖೆ ವತಿಯಿಂದ ₹5,000ಗಳ ಬಹುಮಾನವನ್ನು ನೀಡಿದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…