ವ್ಹೀಲಿಂಗ್ ಪುಂಡರ ಹೆಡೆಮುರಿ ಕಟ್ಟಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು

ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು  ದೊಡ್ಡಬಳ್ಳಾಪುರ ನಗರದ ವಸೀಂ ಪಾಷ(19), ಶುಕೂರ್ ಮಿಯಾ(20) ಎಂದು ಗುರುತಿಸಲಾಗಿದೆ.

ಬೈಕಿನ ನಂಬರ್ ಪ್ಲೇಟ್ ಕಳಚಿ ಗುಂಪು ಗುಂಪಾಗಿ ಬಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಯೋ ಬೈಕ್ ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡಾಟ ನಡೆಸುತ್ತಿದ್ದರು…

ಹೆದ್ದಾರಿಯಲ್ಲಿ ಕಾಲೇಜುಗಳ ಸಂಖ್ಯೆ ಹೆಚ್ಚಿರುವುದರಿಂದ ಪುಂಡರಿಂದ ಫೋಸ್. ಕಾಲೇಜು ಹುಡುಗಿಯರನ್ನ ಆಕರ್ಷಿಸಲು ವ್ಹೀಲಿಂಗ್ ಮಾಡಲಾಗುತ್ತಿತ್ತು.

ಇದನ್ನು ಮಾಧ್ಯಮಗಳು ವರದಿ ಮಾಡಿತ್ತು. ವರದಿ ಬೆನ್ನಲ್ಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಎಚ್ಚೆತ್ತುಕೊಂಡು ವ್ಹೀಲಿಂಗ್ ಪುಂಡರನ್ನು ಬಂಧಿಸಿದ್ದಾರೆ.

ಯುವಕರಲ್ಲಿ ಬೈಕ್ ವ್ಹೀಲಿಂಗ್ ಕ್ರೇಜ್ ಹೆಚ್ಚಾಗಿದೆ. ಪೊಲೀಸರು ಎಷ್ಟೇ ಎಚ್ಚರಿಕೆ ಕೊಟ್ಟರೂ, ಕಂಬಿ ಹಿಂದೆ ಕೂರಿಸಿದರೂ ವ್ಹೀಲಿಂಗ್ ಮಾಡುವುದನ್ನು ನಿಲ್ಲಿಸಲ್ಲ. ಇತರೆ ವಾಹನ ಸವಾರರಿಗೆ ಸಮಸ್ಯೆಯಾಗುತ್ತೆ, ಅಪಘಾತ ಸಂಭವಿಸಬಹುದು ಎಂದು ತಿಳಿದಿದ್ದರೂ ವ್ಹೀಲಿಂಗ್ ಮಾಡುವುದನ್ನು ನಿಲ್ಲಿಸುತ್ತಿಲ್ಲ. ಪ್ರತಿ ದಿನ ಒಂದಲ್ಲಾ ಒಂದು ಕಡೆಗಳಲ್ಲಿ ಯುವಕರು ವ್ಹೀಲಿಂಗ್ ಮಾಡುವ ವಿಡಿಯೋಗಳು ವೈರಲ್ ಆಗುತ್ತಿವೆ.

ವ್ಹೀಲಿಂಗ್ ವೇಳೆ ಅಪಘಾತ ಸಂಭವಿಸಿದರೆ ಅಮಾಯಕ ಜೀವ ಹೋಗುವ ಸಾಧ್ಯತೆ ಇದೆ. ಆದ್ದರಿಂದ ವ್ಹೀಲಿಂಗ್ ಮಾಡದೇ ಸಂಚಾರ ನಿಯಮಗಳನ್ನು ಪಾಲಿಸಿ ವಾಹನ ಚಲಾಯಿಸಬೇಕು…

Ramesh Babu

Journalist

Recent Posts

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

2 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

7 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

11 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

12 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

13 hours ago