ವ್ಹೀಲಿಂಗ್ ಪುಂಡರ ಹೆಡೆಮುರಿ ಕಟ್ಟಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು

ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು  ದೊಡ್ಡಬಳ್ಳಾಪುರ ನಗರದ ವಸೀಂ ಪಾಷ(19), ಶುಕೂರ್ ಮಿಯಾ(20) ಎಂದು ಗುರುತಿಸಲಾಗಿದೆ.

ಬೈಕಿನ ನಂಬರ್ ಪ್ಲೇಟ್ ಕಳಚಿ ಗುಂಪು ಗುಂಪಾಗಿ ಬಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಯೋ ಬೈಕ್ ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡಾಟ ನಡೆಸುತ್ತಿದ್ದರು…

ಹೆದ್ದಾರಿಯಲ್ಲಿ ಕಾಲೇಜುಗಳ ಸಂಖ್ಯೆ ಹೆಚ್ಚಿರುವುದರಿಂದ ಪುಂಡರಿಂದ ಫೋಸ್. ಕಾಲೇಜು ಹುಡುಗಿಯರನ್ನ ಆಕರ್ಷಿಸಲು ವ್ಹೀಲಿಂಗ್ ಮಾಡಲಾಗುತ್ತಿತ್ತು.

ಇದನ್ನು ಮಾಧ್ಯಮಗಳು ವರದಿ ಮಾಡಿತ್ತು. ವರದಿ ಬೆನ್ನಲ್ಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಎಚ್ಚೆತ್ತುಕೊಂಡು ವ್ಹೀಲಿಂಗ್ ಪುಂಡರನ್ನು ಬಂಧಿಸಿದ್ದಾರೆ.

ಯುವಕರಲ್ಲಿ ಬೈಕ್ ವ್ಹೀಲಿಂಗ್ ಕ್ರೇಜ್ ಹೆಚ್ಚಾಗಿದೆ. ಪೊಲೀಸರು ಎಷ್ಟೇ ಎಚ್ಚರಿಕೆ ಕೊಟ್ಟರೂ, ಕಂಬಿ ಹಿಂದೆ ಕೂರಿಸಿದರೂ ವ್ಹೀಲಿಂಗ್ ಮಾಡುವುದನ್ನು ನಿಲ್ಲಿಸಲ್ಲ. ಇತರೆ ವಾಹನ ಸವಾರರಿಗೆ ಸಮಸ್ಯೆಯಾಗುತ್ತೆ, ಅಪಘಾತ ಸಂಭವಿಸಬಹುದು ಎಂದು ತಿಳಿದಿದ್ದರೂ ವ್ಹೀಲಿಂಗ್ ಮಾಡುವುದನ್ನು ನಿಲ್ಲಿಸುತ್ತಿಲ್ಲ. ಪ್ರತಿ ದಿನ ಒಂದಲ್ಲಾ ಒಂದು ಕಡೆಗಳಲ್ಲಿ ಯುವಕರು ವ್ಹೀಲಿಂಗ್ ಮಾಡುವ ವಿಡಿಯೋಗಳು ವೈರಲ್ ಆಗುತ್ತಿವೆ.

ವ್ಹೀಲಿಂಗ್ ವೇಳೆ ಅಪಘಾತ ಸಂಭವಿಸಿದರೆ ಅಮಾಯಕ ಜೀವ ಹೋಗುವ ಸಾಧ್ಯತೆ ಇದೆ. ಆದ್ದರಿಂದ ವ್ಹೀಲಿಂಗ್ ಮಾಡದೇ ಸಂಚಾರ ನಿಯಮಗಳನ್ನು ಪಾಲಿಸಿ ವಾಹನ ಚಲಾಯಿಸಬೇಕು…

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

4 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago