ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ದೊಡ್ಡಬಳ್ಳಾಪುರ ನಗರದ ವಸೀಂ ಪಾಷ(19), ಶುಕೂರ್ ಮಿಯಾ(20) ಎಂದು ಗುರುತಿಸಲಾಗಿದೆ.
ಬೈಕಿನ ನಂಬರ್ ಪ್ಲೇಟ್ ಕಳಚಿ ಗುಂಪು ಗುಂಪಾಗಿ ಬಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಯೋ ಬೈಕ್ ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡಾಟ ನಡೆಸುತ್ತಿದ್ದರು…
ಹೆದ್ದಾರಿಯಲ್ಲಿ ಕಾಲೇಜುಗಳ ಸಂಖ್ಯೆ ಹೆಚ್ಚಿರುವುದರಿಂದ ಪುಂಡರಿಂದ ಫೋಸ್. ಕಾಲೇಜು ಹುಡುಗಿಯರನ್ನ ಆಕರ್ಷಿಸಲು ವ್ಹೀಲಿಂಗ್ ಮಾಡಲಾಗುತ್ತಿತ್ತು.
ಇದನ್ನು ಮಾಧ್ಯಮಗಳು ವರದಿ ಮಾಡಿತ್ತು. ವರದಿ ಬೆನ್ನಲ್ಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಎಚ್ಚೆತ್ತುಕೊಂಡು ವ್ಹೀಲಿಂಗ್ ಪುಂಡರನ್ನು ಬಂಧಿಸಿದ್ದಾರೆ.
ಯುವಕರಲ್ಲಿ ಬೈಕ್ ವ್ಹೀಲಿಂಗ್ ಕ್ರೇಜ್ ಹೆಚ್ಚಾಗಿದೆ. ಪೊಲೀಸರು ಎಷ್ಟೇ ಎಚ್ಚರಿಕೆ ಕೊಟ್ಟರೂ, ಕಂಬಿ ಹಿಂದೆ ಕೂರಿಸಿದರೂ ವ್ಹೀಲಿಂಗ್ ಮಾಡುವುದನ್ನು ನಿಲ್ಲಿಸಲ್ಲ. ಇತರೆ ವಾಹನ ಸವಾರರಿಗೆ ಸಮಸ್ಯೆಯಾಗುತ್ತೆ, ಅಪಘಾತ ಸಂಭವಿಸಬಹುದು ಎಂದು ತಿಳಿದಿದ್ದರೂ ವ್ಹೀಲಿಂಗ್ ಮಾಡುವುದನ್ನು ನಿಲ್ಲಿಸುತ್ತಿಲ್ಲ. ಪ್ರತಿ ದಿನ ಒಂದಲ್ಲಾ ಒಂದು ಕಡೆಗಳಲ್ಲಿ ಯುವಕರು ವ್ಹೀಲಿಂಗ್ ಮಾಡುವ ವಿಡಿಯೋಗಳು ವೈರಲ್ ಆಗುತ್ತಿವೆ.
ವ್ಹೀಲಿಂಗ್ ವೇಳೆ ಅಪಘಾತ ಸಂಭವಿಸಿದರೆ ಅಮಾಯಕ ಜೀವ ಹೋಗುವ ಸಾಧ್ಯತೆ ಇದೆ. ಆದ್ದರಿಂದ ವ್ಹೀಲಿಂಗ್ ಮಾಡದೇ ಸಂಚಾರ ನಿಯಮಗಳನ್ನು ಪಾಲಿಸಿ ವಾಹನ ಚಲಾಯಿಸಬೇಕು…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…