xr:d:DADy-xRjdxs:2094,j:31709851562,t:22072818
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಈಗ ಬಂದಿದ್ದು, ಸಂಪೂರ್ಣವಾಗಿ ‘ನೆಗೆಟಿವ್’ ಆಗಿದೆ. ಆ ವ್ಯಕ್ತಿಗೆ ಯಾವುದೇ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಶಂಕೆ ವ್ಯಕ್ತವಾದ ತಕ್ಷಣವೇ ಇಲಾಖೆಯು ಸಾರ್ವಜನಿಕ ಆರೋಗ್ಯ ಮಾರ್ಗಸೂಚಿಗಳ ಅನ್ವಯ ಅತ್ಯಂತ ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ವೈದ್ಯಕೀಯ ನಿಯಮಾವಳಿಗಳನ್ನು ಪಾಲಿಸಿದೆ ಎಂದರು.
ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ರಾಜ್ಯದ ಜನತೆಗೆ ನಾನು ಭರವಸೆ ನೀಡಲು ಬಯಸುತ್ತೇನೆ. ನಮ್ಮ ಆರೋಗ್ಯ ಇಲಾಖೆಯು ಪ್ರತಿಯೊಂದು ಪರಿಸ್ಥಿತಿಯನ್ನೂ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಯಾವುದೇ ರೀತಿಯ ಸವಾಲನ್ನು ಎದುರಿಸಲು ಮತ್ತು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ತಿಳಿಸಿದ್ದಾರೆ.
ಯಾರೂ ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು ಎಂದು ಕಳಕಳಿಯಿಂದ ವಿನಂತಿಸುತ್ತೇನೆ. ವದಂತಿಗಳಿಗೆ ಕಿವಿಗೊಡದೆ, ನಿಗದಿಪಡಿಸಿದ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರ ಮತ್ತು ಆರೋಗ್ಯ ಇಲಾಖೆ ಅಧಿಕೃತವಾಗಿ ಹೊರಡಿಸುವ ಮಾಹಿತಿ ಹಾಗೂ ಪ್ರಕಟಣೆಗಳನ್ನು ಮಾತ್ರ ಆಧಾರವಾಗಿಟ್ಟುಕೊಳ್ಳಿ. ನಿಮ್ಮ ಆರೋಗ್ಯದ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಶುಕ್ರವಾರ ಸಂಜೆ ಸುಮಾರು 6:15ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಚಿಕ್ಕಬಳ್ಳಾಪುರ: ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯನ್ನು ಹತ್ಯೆ ಮಾಡಿ, ಕಿವಿಗಳನ್ನು ಕತ್ತರಿಸಿ ಆಭರಣ ಕಳವು ಮಾಡಿರುವ ಅಮಾನುಷ…
ದೇವನಹಳ್ಳಿ: ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಚನ್ನರಾಯಪಟ್ಟಣ ಪೊಲೀಸರು ಬಂಧಿಸಿ, ಅವರಿಂದ 3…
ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2026-27ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಜಿಲ್ಲೆಯಲ್ಲಿರುವ ಪ್ರತಿ ಕೈಮಗ್ಗ, ವಿದ್ಯುತ್…
ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ನಡೆದಿದ್ದ ಗಂಧದ ಮರ ಕಳ್ಳತನ ಪ್ರಕರಣವನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಬಿಹಾರ ಮೂಲದ…