ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ 100 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಕಾರ್ಮಿಕರ(ಇಎಸ್ಐ) ಆಸ್ಪತ್ರೆ.
2013ರ ಜೂನ್ 9ರಂದು 76.88 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರುತ್ತದೆ. ಶಂಕುಸ್ಥಾಪನೆ ಆಗಿ 10ವರ್ಷಗಳು ಕಳೆದರೂ ಸೇವೆಗೆ ಸಿದ್ಧವಾಗದ ಇಎಸ್ಐ ಆಸ್ಪತ್ರೆ.
ತಾಲೂಕಿನಲ್ಲಿ ಏಷ್ಯಾದ ಎರಡನೇ ಅತಿ ದೊಡ್ಡ ಕೈಗಾರಿಕಾ ಪ್ರದೇಶವಿದೆ ಇಲ್ಲಿನ ಕಾರ್ಖಾನೆಗಳಲ್ಲಿ ಲಕ್ಷಾಂತರ ಮಂದಿ ಕಾರ್ಮಿಕರು ದುಡಿಯುತ್ತಿದ್ದಾರೆ. ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ ತುರ್ತು ಚಿಕಿತ್ಸೆಗಾಗಿ ಬೆಂಗಳೂರಿನ ರಾಜಾಜಿನಗರಕ್ಕೆ ಕರೆದೊಯ್ಯಲಾಗುತ್ತದೆ. ಇದು ರೋಗಿಗಳಿಗೆ ಸಾಕಷ್ಟು ಸಮಸ್ಯೆಗೆ ಕಾರಣವಾಗುತ್ತಿತ್ತು. ಇದರಿಂದ ದೊಡ್ಡಬಳ್ಳಾಪುರದಲ್ಲಿ ಇಎಸ್ ಐ ಆಸ್ಪತ್ರೆ ಸೇವೆ ಆರಂಭವಾದರೆ ಸಾವಿರಾರು ಕಾರ್ಮಿಕರಿಗೆ ಉಪಕಾರಿಯಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದ್ದರಿಂದ ಇಲ್ಲಿ ಆಸ್ಪತ್ರೆಗೆ ಶಂಕುಸ್ಥಾಪನೆ ನಡೆಸಲಾಯಿತು. ಆದರೆ ಕಾರ್ಮಿಕರ ಸೇವೆಗೆ ಸಿಗದ ಇಎಸ್ಐ ಆಸ್ಪತ್ರೆ. ಸೇವೆ ವಿಳಂಬ ಹಿನ್ನೆಲೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಇದಕ್ಕೆ ಉತ್ತರಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಇ.ಎಸ್.ಐ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿರುವುದಿಲ್ಲ ಆದ್ದರಿಂದ ಪ್ರಾರಂಭ ಮಾಡಲು ಸಾಧ್ಯವಾಗಿರುವುದಿಲ್ಲ. ಶೇಕಡ 95ರಷ್ಟು ಕಾಮಗಾರಿಯು ಪೂರ್ಣಗೊಂಡಿದ್ದು, ವಿದ್ಯುತ್ ಸಂಪರ್ಕ ಕಾಮಗಾರಿ ಬಾಕಿ ಇರುತ್ತದೆ.
ಕೇಂದ್ರ ಸರ್ಕಾರದ ಕಾರಾವಿ ನಿಗದಮದವರು ಕಟ್ಟಡ ನಿರ್ಮಾಣದ ಕಾರ್ಯವನ್ನು ಪ್ರಾರಂಭಿಸಿದ್ದು, ಕೆಲಸವು ಪ್ರಗತಿಯಲ್ಲಿದೆ. ಕಾರಾವಿ ನಿಗಮವು ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಿ ಇಲಾಖೆಗೆ ಹಸ್ತಾಂತರಿಸಿದ ನಂತರ ಆಸ್ಪತ್ರೆಯನ್ನು ಪ್ರಾರಂಭಿಸಲಾಗುವುದು ಎಂದು ಕಾರ್ಮಿಕ ಸಚಿವರು ಉತ್ತರಿಸಿದರು.
ಈ ಆಸ್ಪತ್ರೆಯ ತಕ್ಷಣದಲ್ಲಿ ಆರಂಭಿಸುವ ಅವಶ್ಯಕತೆಯಿರುತ್ತದೆ. ಕಾಮಗಾರಿ ವಿಳಂಬಕ್ಕೆ ಕಾರಣಗಳನ್ನು ನೀಡದೆ ಅತಿಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ತಕ್ಷಣದಲ್ಲಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸೇವೆಯನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಸದನದಲ್ಲಿ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜ್.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…