ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ 100 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಕಾರ್ಮಿಕರ(ಇಎಸ್ಐ) ಆಸ್ಪತ್ರೆ.
2013ರ ಜೂನ್ 9ರಂದು 76.88 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರುತ್ತದೆ. ಶಂಕುಸ್ಥಾಪನೆ ಆಗಿ 10ವರ್ಷಗಳು ಕಳೆದರೂ ಸೇವೆಗೆ ಸಿದ್ಧವಾಗದ ಇಎಸ್ಐ ಆಸ್ಪತ್ರೆ.
ತಾಲೂಕಿನಲ್ಲಿ ಏಷ್ಯಾದ ಎರಡನೇ ಅತಿ ದೊಡ್ಡ ಕೈಗಾರಿಕಾ ಪ್ರದೇಶವಿದೆ ಇಲ್ಲಿನ ಕಾರ್ಖಾನೆಗಳಲ್ಲಿ ಲಕ್ಷಾಂತರ ಮಂದಿ ಕಾರ್ಮಿಕರು ದುಡಿಯುತ್ತಿದ್ದಾರೆ. ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ ತುರ್ತು ಚಿಕಿತ್ಸೆಗಾಗಿ ಬೆಂಗಳೂರಿನ ರಾಜಾಜಿನಗರಕ್ಕೆ ಕರೆದೊಯ್ಯಲಾಗುತ್ತದೆ. ಇದು ರೋಗಿಗಳಿಗೆ ಸಾಕಷ್ಟು ಸಮಸ್ಯೆಗೆ ಕಾರಣವಾಗುತ್ತಿತ್ತು. ಇದರಿಂದ ದೊಡ್ಡಬಳ್ಳಾಪುರದಲ್ಲಿ ಇಎಸ್ ಐ ಆಸ್ಪತ್ರೆ ಸೇವೆ ಆರಂಭವಾದರೆ ಸಾವಿರಾರು ಕಾರ್ಮಿಕರಿಗೆ ಉಪಕಾರಿಯಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದ್ದರಿಂದ ಇಲ್ಲಿ ಆಸ್ಪತ್ರೆಗೆ ಶಂಕುಸ್ಥಾಪನೆ ನಡೆಸಲಾಯಿತು. ಆದರೆ ಕಾರ್ಮಿಕರ ಸೇವೆಗೆ ಸಿಗದ ಇಎಸ್ಐ ಆಸ್ಪತ್ರೆ. ಸೇವೆ ವಿಳಂಬ ಹಿನ್ನೆಲೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಇದಕ್ಕೆ ಉತ್ತರಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಇ.ಎಸ್.ಐ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿರುವುದಿಲ್ಲ ಆದ್ದರಿಂದ ಪ್ರಾರಂಭ ಮಾಡಲು ಸಾಧ್ಯವಾಗಿರುವುದಿಲ್ಲ. ಶೇಕಡ 95ರಷ್ಟು ಕಾಮಗಾರಿಯು ಪೂರ್ಣಗೊಂಡಿದ್ದು, ವಿದ್ಯುತ್ ಸಂಪರ್ಕ ಕಾಮಗಾರಿ ಬಾಕಿ ಇರುತ್ತದೆ.
ಕೇಂದ್ರ ಸರ್ಕಾರದ ಕಾರಾವಿ ನಿಗದಮದವರು ಕಟ್ಟಡ ನಿರ್ಮಾಣದ ಕಾರ್ಯವನ್ನು ಪ್ರಾರಂಭಿಸಿದ್ದು, ಕೆಲಸವು ಪ್ರಗತಿಯಲ್ಲಿದೆ. ಕಾರಾವಿ ನಿಗಮವು ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಿ ಇಲಾಖೆಗೆ ಹಸ್ತಾಂತರಿಸಿದ ನಂತರ ಆಸ್ಪತ್ರೆಯನ್ನು ಪ್ರಾರಂಭಿಸಲಾಗುವುದು ಎಂದು ಕಾರ್ಮಿಕ ಸಚಿವರು ಉತ್ತರಿಸಿದರು.
ಈ ಆಸ್ಪತ್ರೆಯ ತಕ್ಷಣದಲ್ಲಿ ಆರಂಭಿಸುವ ಅವಶ್ಯಕತೆಯಿರುತ್ತದೆ. ಕಾಮಗಾರಿ ವಿಳಂಬಕ್ಕೆ ಕಾರಣಗಳನ್ನು ನೀಡದೆ ಅತಿಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ತಕ್ಷಣದಲ್ಲಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸೇವೆಯನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಸದನದಲ್ಲಿ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜ್.
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…
ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…