ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ 100 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಕಾರ್ಮಿಕರ(ಇಎಸ್ಐ) ಆಸ್ಪತ್ರೆ.
2013ರ ಜೂನ್ 9ರಂದು 76.88 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರುತ್ತದೆ. ಶಂಕುಸ್ಥಾಪನೆ ಆಗಿ 10ವರ್ಷಗಳು ಕಳೆದರೂ ಸೇವೆಗೆ ಸಿದ್ಧವಾಗದ ಇಎಸ್ಐ ಆಸ್ಪತ್ರೆ.
ತಾಲೂಕಿನಲ್ಲಿ ಏಷ್ಯಾದ ಎರಡನೇ ಅತಿ ದೊಡ್ಡ ಕೈಗಾರಿಕಾ ಪ್ರದೇಶವಿದೆ ಇಲ್ಲಿನ ಕಾರ್ಖಾನೆಗಳಲ್ಲಿ ಲಕ್ಷಾಂತರ ಮಂದಿ ಕಾರ್ಮಿಕರು ದುಡಿಯುತ್ತಿದ್ದಾರೆ. ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ ತುರ್ತು ಚಿಕಿತ್ಸೆಗಾಗಿ ಬೆಂಗಳೂರಿನ ರಾಜಾಜಿನಗರಕ್ಕೆ ಕರೆದೊಯ್ಯಲಾಗುತ್ತದೆ. ಇದು ರೋಗಿಗಳಿಗೆ ಸಾಕಷ್ಟು ಸಮಸ್ಯೆಗೆ ಕಾರಣವಾಗುತ್ತಿತ್ತು. ಇದರಿಂದ ದೊಡ್ಡಬಳ್ಳಾಪುರದಲ್ಲಿ ಇಎಸ್ ಐ ಆಸ್ಪತ್ರೆ ಸೇವೆ ಆರಂಭವಾದರೆ ಸಾವಿರಾರು ಕಾರ್ಮಿಕರಿಗೆ ಉಪಕಾರಿಯಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದ್ದರಿಂದ ಇಲ್ಲಿ ಆಸ್ಪತ್ರೆಗೆ ಶಂಕುಸ್ಥಾಪನೆ ನಡೆಸಲಾಯಿತು. ಆದರೆ ಕಾರ್ಮಿಕರ ಸೇವೆಗೆ ಸಿಗದ ಇಎಸ್ಐ ಆಸ್ಪತ್ರೆ. ಸೇವೆ ವಿಳಂಬ ಹಿನ್ನೆಲೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಇದಕ್ಕೆ ಉತ್ತರಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಇ.ಎಸ್.ಐ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿರುವುದಿಲ್ಲ ಆದ್ದರಿಂದ ಪ್ರಾರಂಭ ಮಾಡಲು ಸಾಧ್ಯವಾಗಿರುವುದಿಲ್ಲ. ಶೇಕಡ 95ರಷ್ಟು ಕಾಮಗಾರಿಯು ಪೂರ್ಣಗೊಂಡಿದ್ದು, ವಿದ್ಯುತ್ ಸಂಪರ್ಕ ಕಾಮಗಾರಿ ಬಾಕಿ ಇರುತ್ತದೆ.
ಕೇಂದ್ರ ಸರ್ಕಾರದ ಕಾರಾವಿ ನಿಗದಮದವರು ಕಟ್ಟಡ ನಿರ್ಮಾಣದ ಕಾರ್ಯವನ್ನು ಪ್ರಾರಂಭಿಸಿದ್ದು, ಕೆಲಸವು ಪ್ರಗತಿಯಲ್ಲಿದೆ. ಕಾರಾವಿ ನಿಗಮವು ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಿ ಇಲಾಖೆಗೆ ಹಸ್ತಾಂತರಿಸಿದ ನಂತರ ಆಸ್ಪತ್ರೆಯನ್ನು ಪ್ರಾರಂಭಿಸಲಾಗುವುದು ಎಂದು ಕಾರ್ಮಿಕ ಸಚಿವರು ಉತ್ತರಿಸಿದರು.
ಈ ಆಸ್ಪತ್ರೆಯ ತಕ್ಷಣದಲ್ಲಿ ಆರಂಭಿಸುವ ಅವಶ್ಯಕತೆಯಿರುತ್ತದೆ. ಕಾಮಗಾರಿ ವಿಳಂಬಕ್ಕೆ ಕಾರಣಗಳನ್ನು ನೀಡದೆ ಅತಿಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ತಕ್ಷಣದಲ್ಲಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸೇವೆಯನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಸದನದಲ್ಲಿ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜ್.
ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…
ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…
ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…
ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…