ಶಂಕುಸ್ಥಾಪನೆ ಆಗಿ 10 ವರ್ಷವಾದರೂ ಇಎಸ್ಐ ಆಸ್ಪತ್ರೆ ಕಟ್ಟಡ ಕಾಮಗಾರಿ ಅಪೂರ್ಣ; ವಿಧಾನಸಭಾ ಕಲಾಪದಲ್ಲಿ ಆಸ್ಪತ್ರೆ ಆರಂಭಕ್ಕೆ ತೊಡಕಿನ ಬಗ್ಗೆ ಕಾರ್ಮಿಕ ಸಚಿವರಿಗೆ ಪ್ರಶ್ನಿಸಿದ ಶಾಸಕ ಧೀರಜ್‌ಮುನಿರಾಜ್: ಶೀಘ್ರವಾಗಿ ಆಸ್ಪತ್ರೆ ಆರಂಭಕ್ಕೆ ಮನವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ 100 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಕಾರ್ಮಿಕರ(ಇಎಸ್ಐ) ಆಸ್ಪತ್ರೆ.

2013ರ ಜೂನ್ 9ರಂದು 76.88 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರುತ್ತದೆ. ಶಂಕುಸ್ಥಾಪನೆ ಆಗಿ 10ವರ್ಷಗಳು ಕಳೆದರೂ ಸೇವೆಗೆ ಸಿದ್ಧವಾಗದ ಇಎಸ್ಐ ಆಸ್ಪತ್ರೆ.

ತಾಲೂಕಿನಲ್ಲಿ ಏಷ್ಯಾದ ಎರಡನೇ ಅತಿ ದೊಡ್ಡ ಕೈಗಾರಿಕಾ ಪ್ರದೇಶವಿದೆ ಇಲ್ಲಿನ ಕಾರ್ಖಾನೆಗಳಲ್ಲಿ ಲಕ್ಷಾಂತರ ಮಂದಿ ಕಾರ್ಮಿಕರು ದುಡಿಯುತ್ತಿದ್ದಾರೆ. ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ ತುರ್ತು ಚಿಕಿತ್ಸೆಗಾಗಿ ಬೆಂಗಳೂರಿನ ರಾಜಾಜಿನಗರಕ್ಕೆ ಕರೆದೊಯ್ಯಲಾಗುತ್ತದೆ. ಇದು ರೋಗಿಗಳಿಗೆ ಸಾಕಷ್ಟು ಸಮಸ್ಯೆಗೆ ಕಾರಣವಾಗುತ್ತಿತ್ತು. ಇದರಿಂದ ದೊಡ್ಡಬಳ್ಳಾಪುರದಲ್ಲಿ ಇಎಸ್ ಐ ಆಸ್ಪತ್ರೆ ಸೇವೆ ಆರಂಭವಾದರೆ ಸಾವಿರಾರು ಕಾರ್ಮಿಕರಿಗೆ ಉಪಕಾರಿಯಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದ್ದರಿಂದ ಇಲ್ಲಿ ಆಸ್ಪತ್ರೆಗೆ ಶಂಕುಸ್ಥಾಪನೆ ನಡೆಸಲಾಯಿತು. ಆದರೆ ಕಾರ್ಮಿಕರ ಸೇವೆಗೆ ಸಿಗದ ಇಎಸ್ಐ ಆಸ್ಪತ್ರೆ. ಸೇವೆ ವಿಳಂಬ ಹಿನ್ನೆಲೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್‌ ಮುನಿರಾಜ್ ಅವರು ವಿಧಾನಸಭಾ ಕಲಾಪದಲ್ಲಿ ಆಸ್ಪತ್ರೆ ಆರಂಭಿಸುವದಕ್ಕೆ ತೊಡಕೇನು ಎಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರಿಗೆ ಪ್ರಶ್ನೆ ಮಾಡಿದರು.

ಇದಕ್ಕೆ ಉತ್ತರಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಇ.ಎಸ್.ಐ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿರುವುದಿಲ್ಲ ಆದ್ದರಿಂದ ಪ್ರಾರಂಭ ಮಾಡಲು ಸಾಧ್ಯವಾಗಿರುವುದಿಲ್ಲ. ಶೇಕಡ 95ರಷ್ಟು ಕಾಮಗಾರಿಯು ಪೂರ್ಣಗೊಂಡಿದ್ದು, ವಿದ್ಯುತ್ ಸಂಪರ್ಕ ಕಾಮಗಾರಿ ಬಾಕಿ ಇರುತ್ತದೆ.

ಕೇಂದ್ರ ಸರ್ಕಾರದ ಕಾರಾವಿ ನಿಗದಮದವರು ಕಟ್ಟಡ ನಿರ್ಮಾಣದ ಕಾರ್ಯವನ್ನು ಪ್ರಾರಂಭಿಸಿದ್ದು, ಕೆಲಸವು ಪ್ರಗತಿಯಲ್ಲಿದೆ. ಕಾರಾವಿ ನಿಗಮವು ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಿ ಇಲಾಖೆಗೆ ಹಸ್ತಾಂತರಿಸಿದ ನಂತರ ಆಸ್ಪತ್ರೆಯನ್ನು ಪ್ರಾರಂಭಿಸಲಾಗುವುದು ಎಂದು ಕಾರ್ಮಿಕ ಸಚಿವರು ಉತ್ತರಿಸಿದರು.

ನಂತರ ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ಎಲೆಕ್ಟ್ರಿಕಲ್ ಕಾಮಗಾರಿಗೆ ಸಂಬಂಧಿಸಿದಂತೆ ಬೆಸ್ಕಾಂಗೆ ಪಾವತಿಸಬೇಕಾದ ಮೊತ್ತವನ್ನು ಪಾವತಿಸಲಾಗಿದ್ದು, ಕಾಮಗಾರಿ ನಡೆಸಲು ಬಾಕಿಯಿದೆ. ಈ ಕಾಮಗಾರಿಗಳನ್ನು ತಕ್ಷಣದಲ್ಲಿ ಪೂರ್ಣಗೊಳಿಸಲು ಬೆಸ್ಕಾಂಗೆ ಸೂಚಿಸುವುದು. ನೀರಿನ ಸಂಪರ್ಕಕ್ಕಾಗಿ ಬೋರ್‌ವೆಲ್‌ಗೆ ವಾಟರ್ ಬೋಡ್‌ಗೆ ಪಾವತಿಸಬೇಕಾದ ಮೊತ್ತವನ್ನು ಪಾವತಿಸಲಾಗಿದ್ದು, ಕಾಮಗಾರಿ ನಡೆಸಲು ಬಾಕಿಯಿದೆ. ಈ ಕಾಮಗಾರಿಗಳನ್ನು ತಕ್ಷಣದಲ್ಲಿ ಪೂರ್ಣಗೊಳಿಸಲು ಸಂಬಂಧ ಪಟ್ಟ ಇಲಾಖೆಗೆ ಸೂಚಿಸುವುದು.

ಈ ಆಸ್ಪತ್ರೆಯ ತಕ್ಷಣದಲ್ಲಿ ಆರಂಭಿಸುವ ಅವಶ್ಯಕತೆಯಿರುತ್ತದೆ. ಕಾಮಗಾರಿ ವಿಳಂಬಕ್ಕೆ ಕಾರಣಗಳನ್ನು ನೀಡದೆ ಅತಿಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ತಕ್ಷಣದಲ್ಲಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸೇವೆಯನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಸದನದಲ್ಲಿ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜ್.

Ramesh Babu

Journalist

Recent Posts

56,432 ಹುದ್ದೆಗಳ ನೇರ ನೇಮಕಾತಿಗಾಗಿ ತುರ್ತು ಕ್ರಮ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ…

46 minutes ago

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ

ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ…

1 hour ago

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

11 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

1 day ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

1 day ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

2 days ago