ಶಕುನಿ ಪಾತ್ರದಾರಿಯಾಗಿ ಅಭಿನಯ ಮಾಡುತ್ತಿದ್ದ ವೇಳೆ ಅಸ್ವಸ್ಥ: ವೇದಿಕೆಯಲ್ಲಿಯೇ ಕುಸಿದು ಬಿದ್ದು ಉಸಿರು ಚೆಲ್ಲಿದ ಕಲಾವಿದ

ದೇವನಹಳ್ಳಿ ತಾಲೂಕಿನ 28ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ, ನಿವೃತ್ತ ಉಪನ್ಯಾಸಕರು, ಸಾಹಿತಿ, ಕಲಾವಿದರೂ ಆಗಿದ್ದ ಅರದೇಶಹಳ್ಳಿಯ ಎನ್.ಮುನಿಕೆಂಪಣ್ಣ(72) ನವರು ಪೌರಾಣಿಕ ನಾಟಕ ಕುರುಕ್ಷೇತ್ರದಲ್ಲಿ ಶಕುನಿ ಪಾತ್ರ ನಿರ್ವಹಿಸುವ ವೇಳೆ ಕುಸಿದುಬಿದ್ದು ಸಾವನಪ್ಪಿದ್ದಾರೆ.

ಈ ಘಟನೆ ಯಲಹಂಕ ಬಳಿಯ ಸಾತನೂರು ಗ್ರಾಮದಲ್ಲಿ ಸಂಭವಿಸಿದೆ‌‌.

ಅರದೇಶನಹಳ್ಳಿ ಗ್ರಾಮದ ಮುನಿಕೆಂಪಣ್ಣ ಅವರು ಯಲಹಂಕದಲ್ಲಿ ನೆಲೆಸಿದ್ದರು. ಕಳೆದ ರಾತ್ರಿ ಸಾತನೂರು ಗ್ರಾಮದಲ್ಲಿ ನಡೆದ ಕುರುಕ್ಷೇತ್ರ ಪೌರಾಣಿಕ ನಾಟಕದಲ್ಲಿ ಶಕುನಿ ಪಾತ್ರದಾರಿಯಾಗಿ ಅಭಿನಯ ಮಾಡುತ್ತಿದ್ದ ವೇಳೆ, ವೇದಿಕೆಯಲ್ಲಿಯೇ ಕುಸಿದು ಬಿದ್ದು ಉಸಿರು ಚೆಲ್ಲಿದ್ದಾರೆ.

ಮೃತರು ಮಡದಿ, ಇಬ್ಬರು ಪುತ್ರರನ್ನು ಅಗಲಿದ್ದು, ಇಂದು ಮಧ್ಯಾಹ್ನ 3 ಗಂಟೆ ಅಂತ್ಯಕ್ರಿಯೆ ಅರದೇಶನಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

8 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

8 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

10 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

19 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

21 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago