ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲಿ ರಾಜ್ ಕೋಟ್ ನ ಅಂಗಳದ ಮೂಲೆ ಮೂಲೆಗೂ ಚೆಂಡನ್ನು ಬಾರಿಸುವ ಮೂಲಕ ಸೂರ್ಯ ಕುಮಾರ್ ಯಾದವ್ ಶತಕ ಸಿಡಿಸಿ ಮತ್ತೊಮ್ಮೆ ತಾನು 360 ಡಿಗ್ರಿ ಆಟಗಾರ ಎಂದು ಸಾಭೀತುಪಡಿಸಿ ತಂಡ ಸರಣಿ ಜಯಿಸುವಂತೆ ಮಾಡಿದರು.
ಮೂರು ಪಂದ್ಯಗಳ ಸರಣಿಯಲ್ಲಿ ತಲಾ ಒಂದೊಂದು ಪಂದ್ಯ ಜಯಿಸುವ ಮೂಲಕ ಎರಡೂ ತಂಡಗಳಿಗೆ ಮೂರನೇ ಪಂದ್ಯ ಮಹತ್ವದ್ದಾಗಿತ್ತು, ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭಿಕ ಬ್ಯಾಟ್ಸ್ಮನ್ ಇಶಾನ್ ಕಿಶನ್ ವಿಕೆಟ್ ಕಳೆದುಕೊಂಡರೂ ಸಹ ಪುಟಿದೇಳುವ ಮೂಲಕ ಉತ್ತಮ ಮೊತ್ತ ಕಲೆ ಹಾಕಿತು.
ನಂತರ ಜೊತೆಯಾದ ರಾಹುಲ್ ತ್ರಿಪಾಠಿ (35) ಹಾಗೂ ಶುಭ್ ಮನ್ ಗಿಲ್ (46) ಉತ್ತಮ ಆಟ ಪ್ರದರ್ಶಿಸಿದರು, ತ್ರಿಪಾಠಿ ಔಟಾದ ನಂತರ ಕ್ರಿಸ್ ಗೆ ಬಂದ ವಿಶ್ವ ಟಿ-ಟ್ವೆಂಟಿ ನಂಬರ್ ಒನ್ ಆಟಗಾರ ಸೂರ್ಯಕುಮಾರ್ ಕುಮಾರ್ ಯಾದವ್ 7 ಬೌಂಡರಿ ಹಾಗೂ 9 ಸಿಕ್ಸರ್ ಸಿಡಿಸುವ ಮೂಲಕ (112) ರನ್ ಗಳಿಸಿ ಅಂತರರಾಷ್ಟ್ರೀಯ ಟಿ-ಟ್ವೆಂಟಿ ಕ್ರಿಕೆಟ್ ನಲ್ಲಿ ತಮ್ಮ ಮೂರನೇ ಶತಕ ದಾಖಲಿಸಿದರು.
ಶುಭ್ ಮನ್ ಗಿಲ್ ಔಟಾದ ನಂತರ ಕ್ರಿಸ್ ಗೆ ಬಂದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಆಲ್ ರೌಂಡರ್ ದೀಪಕ್ ಹೂಡ ಹೆಚ್ಚು ಕಾಲ ನಿಲ್ಲಲಿಲ್ಲ, ನಂತರ ಬಂದ ಅಕ್ಷರ್ ಪಟೇಲ್ 9 ಎಸೆತಗಳಲ್ಲಿ (21) ರನ್ ಬಾರಿಸುವ ಮೂಲಕ ಲಂಕಾ ತಂಡಕ್ಕೆ 229 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿದರು.
ಗುರಿ ಬೆನ್ನಟ್ಟಿದ ಪ್ರವಾಸಿ ಶ್ರೀಲಂಕಾ ತಂಡದ ಆರಂಭ ಉತ್ತಮವಾಗಿರಲಿಲ್ಲ, ಆರಂಭಿಕ ಬ್ಯಾಟ್ಸ್ಮನ್ಗಳಾದ ನಿಸಾಂಕ (15) ಹಾಗೂ ಅವಿಶಾಂಕ ಫರ್ನಾಂಡೊ (1) ಅವರನ್ನು ಕ್ರಮವಾಗಿ ಅಶ೯ದೀಪ್ ಸಿಂಗ್ ಹಾಗೂ ಅಕ್ಷರ್ ಪಟೇಲ್ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.
ನಾಯಕ ದಸುನ್ ಶನಕಾ (23) ಹಾಗೂ ಧನಂಜಯ ಡಿ ಸಿಲ್ವಾ (22) ಸ್ವಲ್ಪ ಮಟ್ಟಿಗೆ ಪ್ರತಿರೋಧ ತೋರಿದರು ಸಹ ಭಾರತೀಯ ಬೌಲಿಂಗ್ ಎದುರಿಸಲು ಸಾಧ್ಯವಾಗಲಿಲ್ಲ, ಭಾರತದ ಪರವಾಗಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ ಅಶ೯ದೀಪ್ ಸಿಂಗ್ 3 ವಿಕೆಟ್, ಹಾರ್ದಿಕ್ ಪಾಂಡ್ಯ, ಉಮ್ರಾನ್ ಮಲ್ಲಿಕ್ ಹಾಗೂ ಚಹಲ್ ತಲಾ 2 ವಿಕೆಟ್ ಪಡೆಯುವ ಮೂಲಕ 137 ಕ್ಕೆ ಆಲೌಟ್ ಮಾಡಿ 91 ರನ್ ಗಳ ಜಯ ತಂದುಕೊಟ್ಟರು.
ಭಾರತದ ಪರವಾಗಿ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ ಅಕ್ಷರ್ ಪಟೇಲ್ ಸರಣಿ ಶ್ರೇಷ್ಠ ಪ್ರಶಸ್ತಿ ಹಾಗೂ ಅಬ್ಬರದ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…