ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲಿ ರಾಜ್ ಕೋಟ್ ನ ಅಂಗಳದ ಮೂಲೆ ಮೂಲೆಗೂ ಚೆಂಡನ್ನು ಬಾರಿಸುವ ಮೂಲಕ ಸೂರ್ಯ ಕುಮಾರ್ ಯಾದವ್ ಶತಕ ಸಿಡಿಸಿ ಮತ್ತೊಮ್ಮೆ ತಾನು 360 ಡಿಗ್ರಿ ಆಟಗಾರ ಎಂದು ಸಾಭೀತುಪಡಿಸಿ ತಂಡ ಸರಣಿ ಜಯಿಸುವಂತೆ ಮಾಡಿದರು.
ಮೂರು ಪಂದ್ಯಗಳ ಸರಣಿಯಲ್ಲಿ ತಲಾ ಒಂದೊಂದು ಪಂದ್ಯ ಜಯಿಸುವ ಮೂಲಕ ಎರಡೂ ತಂಡಗಳಿಗೆ ಮೂರನೇ ಪಂದ್ಯ ಮಹತ್ವದ್ದಾಗಿತ್ತು, ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭಿಕ ಬ್ಯಾಟ್ಸ್ಮನ್ ಇಶಾನ್ ಕಿಶನ್ ವಿಕೆಟ್ ಕಳೆದುಕೊಂಡರೂ ಸಹ ಪುಟಿದೇಳುವ ಮೂಲಕ ಉತ್ತಮ ಮೊತ್ತ ಕಲೆ ಹಾಕಿತು.
ನಂತರ ಜೊತೆಯಾದ ರಾಹುಲ್ ತ್ರಿಪಾಠಿ (35) ಹಾಗೂ ಶುಭ್ ಮನ್ ಗಿಲ್ (46) ಉತ್ತಮ ಆಟ ಪ್ರದರ್ಶಿಸಿದರು, ತ್ರಿಪಾಠಿ ಔಟಾದ ನಂತರ ಕ್ರಿಸ್ ಗೆ ಬಂದ ವಿಶ್ವ ಟಿ-ಟ್ವೆಂಟಿ ನಂಬರ್ ಒನ್ ಆಟಗಾರ ಸೂರ್ಯಕುಮಾರ್ ಕುಮಾರ್ ಯಾದವ್ 7 ಬೌಂಡರಿ ಹಾಗೂ 9 ಸಿಕ್ಸರ್ ಸಿಡಿಸುವ ಮೂಲಕ (112) ರನ್ ಗಳಿಸಿ ಅಂತರರಾಷ್ಟ್ರೀಯ ಟಿ-ಟ್ವೆಂಟಿ ಕ್ರಿಕೆಟ್ ನಲ್ಲಿ ತಮ್ಮ ಮೂರನೇ ಶತಕ ದಾಖಲಿಸಿದರು.
ಶುಭ್ ಮನ್ ಗಿಲ್ ಔಟಾದ ನಂತರ ಕ್ರಿಸ್ ಗೆ ಬಂದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಆಲ್ ರೌಂಡರ್ ದೀಪಕ್ ಹೂಡ ಹೆಚ್ಚು ಕಾಲ ನಿಲ್ಲಲಿಲ್ಲ, ನಂತರ ಬಂದ ಅಕ್ಷರ್ ಪಟೇಲ್ 9 ಎಸೆತಗಳಲ್ಲಿ (21) ರನ್ ಬಾರಿಸುವ ಮೂಲಕ ಲಂಕಾ ತಂಡಕ್ಕೆ 229 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿದರು.
ಗುರಿ ಬೆನ್ನಟ್ಟಿದ ಪ್ರವಾಸಿ ಶ್ರೀಲಂಕಾ ತಂಡದ ಆರಂಭ ಉತ್ತಮವಾಗಿರಲಿಲ್ಲ, ಆರಂಭಿಕ ಬ್ಯಾಟ್ಸ್ಮನ್ಗಳಾದ ನಿಸಾಂಕ (15) ಹಾಗೂ ಅವಿಶಾಂಕ ಫರ್ನಾಂಡೊ (1) ಅವರನ್ನು ಕ್ರಮವಾಗಿ ಅಶ೯ದೀಪ್ ಸಿಂಗ್ ಹಾಗೂ ಅಕ್ಷರ್ ಪಟೇಲ್ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.
ನಾಯಕ ದಸುನ್ ಶನಕಾ (23) ಹಾಗೂ ಧನಂಜಯ ಡಿ ಸಿಲ್ವಾ (22) ಸ್ವಲ್ಪ ಮಟ್ಟಿಗೆ ಪ್ರತಿರೋಧ ತೋರಿದರು ಸಹ ಭಾರತೀಯ ಬೌಲಿಂಗ್ ಎದುರಿಸಲು ಸಾಧ್ಯವಾಗಲಿಲ್ಲ, ಭಾರತದ ಪರವಾಗಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ ಅಶ೯ದೀಪ್ ಸಿಂಗ್ 3 ವಿಕೆಟ್, ಹಾರ್ದಿಕ್ ಪಾಂಡ್ಯ, ಉಮ್ರಾನ್ ಮಲ್ಲಿಕ್ ಹಾಗೂ ಚಹಲ್ ತಲಾ 2 ವಿಕೆಟ್ ಪಡೆಯುವ ಮೂಲಕ 137 ಕ್ಕೆ ಆಲೌಟ್ ಮಾಡಿ 91 ರನ್ ಗಳ ಜಯ ತಂದುಕೊಟ್ಟರು.
ಭಾರತದ ಪರವಾಗಿ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ ಅಕ್ಷರ್ ಪಟೇಲ್ ಸರಣಿ ಶ್ರೇಷ್ಠ ಪ್ರಶಸ್ತಿ ಹಾಗೂ ಅಬ್ಬರದ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…