ಶತಕ ಸಿಡಿಸಿದ ಸೂರ್ಯ, ಭಾರತಕ್ಕೆ ಸರಣಿ ಜಯ

ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲಿ ರಾಜ್ ಕೋಟ್ ನ ಅಂಗಳದ ಮೂಲೆ ಮೂಲೆಗೂ ಚೆಂಡನ್ನು ಬಾರಿಸುವ ಮೂಲಕ ಸೂರ್ಯ ಕುಮಾರ್ ಯಾದವ್ ಶತಕ ಸಿಡಿಸಿ ಮತ್ತೊಮ್ಮೆ ತಾನು 360 ಡಿಗ್ರಿ ಆಟಗಾರ ಎಂದು ಸಾಭೀತುಪಡಿಸಿ ತಂಡ ಸರಣಿ ಜಯಿಸುವಂತೆ ಮಾಡಿದರು.

ಮೂರು ಪಂದ್ಯಗಳ ಸರಣಿಯಲ್ಲಿ ತಲಾ ಒಂದೊಂದು ಪಂದ್ಯ ಜಯಿಸುವ ಮೂಲಕ ಎರಡೂ ತಂಡಗಳಿಗೆ ಮೂರನೇ ಪಂದ್ಯ ಮಹತ್ವದ್ದಾಗಿತ್ತು, ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ವಿಕೆಟ್ ಕಳೆದುಕೊಂಡರೂ ಸಹ ಪುಟಿದೇಳುವ ಮೂಲಕ ಉತ್ತಮ ಮೊತ್ತ ಕಲೆ ಹಾಕಿತು.

ನಂತರ ಜೊತೆಯಾದ ರಾಹುಲ್ ತ್ರಿಪಾಠಿ (35) ಹಾಗೂ ಶುಭ್ ಮನ್ ಗಿಲ್ (46) ಉತ್ತಮ ಆಟ ಪ್ರದರ್ಶಿಸಿದರು, ತ್ರಿಪಾಠಿ ಔಟಾದ ನಂತರ ಕ್ರಿಸ್ ಗೆ ಬಂದ ವಿಶ್ವ ಟಿ-ಟ್ವೆಂಟಿ ನಂಬರ್ ಒನ್ ಆಟಗಾರ ಸೂರ್ಯಕುಮಾರ್ ಕುಮಾರ್ ಯಾದವ್ 7 ಬೌಂಡರಿ ಹಾಗೂ 9 ಸಿಕ್ಸರ್ ಸಿಡಿಸುವ ಮೂಲಕ (112) ರನ್ ಗಳಿಸಿ ಅಂತರರಾಷ್ಟ್ರೀಯ ಟಿ-ಟ್ವೆಂಟಿ ಕ್ರಿಕೆಟ್ ನಲ್ಲಿ ತಮ್ಮ ಮೂರನೇ ಶತಕ ದಾಖಲಿಸಿದರು.

ಶುಭ್ ಮನ್ ಗಿಲ್ ಔಟಾದ ನಂತರ ಕ್ರಿಸ್ ಗೆ ಬಂದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಆಲ್ ರೌಂಡರ್ ದೀಪಕ್ ಹೂಡ ಹೆಚ್ಚು ಕಾಲ ನಿಲ್ಲಲಿಲ್ಲ, ನಂತರ ಬಂದ ಅಕ್ಷರ್ ಪಟೇಲ್ 9 ಎಸೆತಗಳಲ್ಲಿ (21) ರನ್ ಬಾರಿಸುವ ಮೂಲಕ ಲಂಕಾ ತಂಡಕ್ಕೆ 229 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿದರು.

ಗುರಿ ಬೆನ್ನಟ್ಟಿದ ಪ್ರವಾಸಿ ಶ್ರೀಲಂಕಾ ತಂಡದ ಆರಂಭ ಉತ್ತಮವಾಗಿರಲಿಲ್ಲ, ಆರಂಭಿಕ ಬ್ಯಾಟ್ಸ್‌ಮನ್ಗಳಾದ ನಿಸಾಂಕ (15) ಹಾಗೂ ಅವಿಶಾಂಕ ಫರ್ನಾಂಡೊ (1) ಅವರನ್ನು ಕ್ರಮವಾಗಿ ಅಶ೯ದೀಪ್ ಸಿಂಗ್ ಹಾಗೂ ಅಕ್ಷರ್ ಪಟೇಲ್ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.

ನಾಯಕ ದಸುನ್ ಶನಕಾ (23) ಹಾಗೂ ಧನಂಜಯ ಡಿ ಸಿಲ್ವಾ (22) ಸ್ವಲ್ಪ ಮಟ್ಟಿಗೆ ಪ್ರತಿರೋಧ ತೋರಿದರು ಸಹ ಭಾರತೀಯ ಬೌಲಿಂಗ್ ಎದುರಿಸಲು ಸಾಧ್ಯವಾಗಲಿಲ್ಲ, ಭಾರತದ ಪರವಾಗಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ ಅಶ೯ದೀಪ್ ಸಿಂಗ್ 3 ವಿಕೆಟ್, ಹಾರ್ದಿಕ್ ಪಾಂಡ್ಯ, ಉಮ್ರಾನ್ ಮಲ್ಲಿಕ್ ಹಾಗೂ ಚಹಲ್ ತಲಾ 2 ವಿಕೆಟ್ ಪಡೆಯುವ ಮೂಲಕ 137 ಕ್ಕೆ ಆಲೌಟ್ ಮಾಡಿ 91 ರನ್ ಗಳ ಜಯ ತಂದುಕೊಟ್ಟರು.

ಭಾರತದ ಪರವಾಗಿ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ ಅಕ್ಷರ್ ಪಟೇಲ್ ಸರಣಿ ಶ್ರೇಷ್ಠ ಪ್ರಶಸ್ತಿ ಹಾಗೂ ಅಬ್ಬರದ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

16 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

2 days ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago